ಕೆಳದರ್ಜೆ ನೌಕರರ ಮಾಸಿಕ ಅನುಕಂಪ ಭತ್ಯೆ ಹೆಚ್ಚಳ: ದೇಶಪಾಂಡೆ
ಬೆಂಗಳೂರು, ಜನವರಿ 10: ರಾಜ್ಯದ ಕೆಳದರ್ಜೆ ನೌಕರರಾದ ತೋಟಿ, ತಳವಾರ, ನೀರಗಂಟಿ, ವಾಲೀಕಾರ ಸನದಿ ಮತ್ತಿತರರಿಗೆ ಹಾಲಿ ಕೊಡುತ್ತಿರುವ ಮಾಸಿಕ 800 ರೂ.ಗಳ ಅನುಕಂಪ ಭತ್ಯೆಯನ್ನು 1,600 ರೂ.ಗಳಿಗೆ ಹೆಚ್ಚಿಸಲಾಗಿದೆ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ರಾಜ್ಯದ ಒಟ್ಟು ನಾಲ್ಕು ಕಂದಾಯ ವಿಭಾಗಗಳಲ್ಲಿ ಒಟ್ಟು 2,869 ಕೆಳದರ್ಜೆ ನೌಕರರಿದ್ದಾರೆ. ಈ ಪೈಕಿ ಬೆಂಗಳೂರು ಕಂದಾಯ ವಿಭಾಗದಲ್ಲಿ 1,925, ಮೈಸೂರು ವಿಭಾಗದಲ್ಲಿ 56, ಬೆಳಗಾವಿ ವಿಭಾಗದಲ್ಲಿ 281 ಮತ್ತು ಕಲಬುರಗಿ ವಿಭಾಗದಲ್ಲಿ 607 ಮಂದಿ ಇದ್ದಾರೆ. ಇವರೆಲ್ಲರಿಗೂ ಈ ಹೆಚ್ಚಳದ ಲಾಭ ಸಿಗಲಿದ್ದು, ಈ ಸಂಬಂಧ ಆದೇಶ ಹೊರಡಿಸಲಾಗಿದೆ,'' ಎಂದು ತಿಳಿಸಿದ್ದಾರೆ.
ಆರ್ಥಿಕವಾಗಿ ಹಿಂದುಳಿದ ಮೇಲ್ಜಾತಿಯವರಿಗೆ ಮೀಸಲಾತಿ ನೀಡುವ ಕ್ರಮವನ್ನು ಸ್ವಾಗತಿಸಿರುವ ಆರ್.ವಿ.ದೇಶಪಾಂಡೆ ಉದ್ದೇಶಿತ ಮೀಸಲನ್ನು ಜಾರಿಗೆ ತರಲು ತಿದ್ದುಪಡಿ ಮಸೂದೆ ಮಂಡಿಸಿ, ಸಂಸತ್ತಿನ ಉಭಯ ಸದನಗಳ ಅನುಮೋದನೆ ಪಡೆದಿರುವುದು ಸ್ವಾಗತಾರ್ಹವಾದುದಾಗಿದೆ,'' ಎಂದು ಹೇಳಿದ್ದಾರೆ.

ಕಾಯ್ದೆಯಿಂದ ಆರ್ಥಿಕವಾಗಿ ಹಿಂದುಳಿದವರಿಗೆ ನೀಡುವ ಯಾವುದೇ ಬಗೆಯ ಮೀಸಲು ಸೌಲಭ್ಯಕ್ಕೆ ಒಳಪಡದಿರುವಂತಹ ವರ್ಗಗಳ ಬಡವರಿಗೆ ಅನುಕೂಲವಾಗಲಿದೆ. ವಾರ್ಷಿಕ ಆದಾಯ 8 ಲಕ್ಷ ರೂ. ಮೀರದೆ ಇರುವಂಥವರಿಗೆ ಶಿಕ್ಷಣ ಮತ್ತು ಉದ್ಯೋಗಗಳಲ್ಲಿ ಇದರಿಂದ ಮೀಸಲಾತಿ ಸಿಗಲಿದ್ದು, ಸಾಕಷ್ಟು ಬಡ ಮತ್ತು ಮಧ್ಯಮ ವರ್ಗಗಳ ಕುಟುಂಬಗಳಿಗೆ ಅನುಕೂಲವಾಗಲಿದೆ. ಈ ಶೇಕಡ 10ರಷ್ಟು ಮೀಸಲಿನಿಂದ ಒಟ್ಟು ಮೀಸಲಾತಿ ಪ್ರಮಾಣ ಶೇಕಡ 50ರಿಂದ 60ಕ್ಕೆ ಏರಲಿದೆ. ಎಂದು ದೇಶಪಾಂಡೆ ಅಭಿಪ್ರಾಯ ಪಟ್ಟಿದ್ದಾರೆ.
-
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ












Click it and Unblock the Notifications