Get Updates
Get notified of breaking news, exclusive insights, and must-see stories!

ಕೆಳದರ್ಜೆ ನೌಕರರ ಮಾಸಿಕ ಅನುಕಂಪ ಭತ್ಯೆ ಹೆಚ್ಚಳ: ದೇಶಪಾಂಡೆ

ಬೆಂಗಳೂರು, ಜನವರಿ 10: ರಾಜ್ಯದ ಕೆಳದರ್ಜೆ ನೌಕರರಾದ ತೋಟಿ, ತಳವಾರ, ನೀರಗಂಟಿ, ವಾಲೀಕಾರ ಸನದಿ ಮತ್ತಿತರರಿಗೆ ಹಾಲಿ ಕೊಡುತ್ತಿರುವ ಮಾಸಿಕ 800 ರೂ.ಗಳ ಅನುಕಂಪ ಭತ್ಯೆಯನ್ನು 1,600 ರೂ.ಗಳಿಗೆ ಹೆಚ್ಚಿಸಲಾಗಿದೆ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ರಾಜ್ಯದ ಒಟ್ಟು ನಾಲ್ಕು ಕಂದಾಯ ವಿಭಾಗಗಳಲ್ಲಿ ಒಟ್ಟು 2,869 ಕೆಳದರ್ಜೆ ನೌಕರರಿದ್ದಾರೆ. ಈ ಪೈಕಿ ಬೆಂಗಳೂರು ಕಂದಾಯ ವಿಭಾಗದಲ್ಲಿ 1,925, ಮೈಸೂರು ವಿಭಾಗದಲ್ಲಿ 56, ಬೆಳಗಾವಿ ವಿಭಾಗದಲ್ಲಿ 281 ಮತ್ತು ಕಲಬುರಗಿ ವಿಭಾಗದಲ್ಲಿ 607 ಮಂದಿ ಇದ್ದಾರೆ. ಇವರೆಲ್ಲರಿಗೂ ಈ ಹೆಚ್ಚಳದ ಲಾಭ ಸಿಗಲಿದ್ದು, ಈ ಸಂಬಂಧ ಆದೇಶ ಹೊರಡಿಸಲಾಗಿದೆ,'' ಎಂದು ತಿಳಿಸಿದ್ದಾರೆ.

ಆರ್ಥಿಕವಾಗಿ ಹಿಂದುಳಿದ ಮೇಲ್ಜಾತಿಯವರಿಗೆ ಮೀಸಲಾತಿ ನೀಡುವ ಕ್ರಮವನ್ನು ಸ್ವಾಗತಿಸಿರುವ ಆರ್‌.ವಿ.ದೇಶಪಾಂಡೆ ಉದ್ದೇಶಿತ ಮೀಸಲನ್ನು ಜಾರಿಗೆ ತರಲು ತಿದ್ದುಪಡಿ ಮಸೂದೆ ಮಂಡಿಸಿ, ಸಂಸತ್ತಿನ ಉಭಯ ಸದನಗಳ ಅನುಮೋದನೆ ಪಡೆದಿರುವುದು ಸ್ವಾಗತಾರ್ಹವಾದುದಾಗಿದೆ,'' ಎಂದು ಹೇಳಿದ್ದಾರೆ.

Increase monthly compensation allowance for depressed employees: RV Deshpande

ಕಾಯ್ದೆಯಿಂದ ಆರ್ಥಿಕವಾಗಿ ಹಿಂದುಳಿದವರಿಗೆ ನೀಡುವ ಯಾವುದೇ ಬಗೆಯ ಮೀಸಲು ಸೌಲಭ್ಯಕ್ಕೆ ಒಳಪಡದಿರುವಂತಹ ವರ್ಗಗಳ ಬಡವರಿಗೆ ಅನುಕೂಲವಾಗಲಿದೆ. ವಾರ್ಷಿಕ ಆದಾಯ 8 ಲಕ್ಷ ರೂ. ಮೀರದೆ ಇರುವಂಥವರಿಗೆ ಶಿಕ್ಷಣ ಮತ್ತು ಉದ್ಯೋಗಗಳಲ್ಲಿ ಇದರಿಂದ ಮೀಸಲಾತಿ ಸಿಗಲಿದ್ದು, ಸಾಕಷ್ಟು ಬಡ ಮತ್ತು ಮಧ್ಯಮ ವರ್ಗಗಳ ಕುಟುಂಬಗಳಿಗೆ ಅನುಕೂಲವಾಗಲಿದೆ. ಈ ಶೇಕಡ 10ರಷ್ಟು ಮೀಸಲಿನಿಂದ ಒಟ್ಟು ಮೀಸಲಾತಿ ಪ್ರಮಾಣ ಶೇಕಡ 50ರಿಂದ 60ಕ್ಕೆ ಏರಲಿದೆ. ಎಂದು ದೇಶಪಾಂಡೆ ಅಭಿಪ್ರಾಯ ಪಟ್ಟಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+