ಕರ್ನಾಟಕದಲ್ಲಿ ಮಾನಸಿಕ ರೋಗಿಗಳ ಸಂಖ್ಯೆ ಏರಿಕೆ: ಸುಧಾಕರ್ ಆತಂಕ
ಬೆಂಗಳೂರು, ಡಿಸೆಂಬರ್ 09: ಕರ್ನಾಟಕದಲ್ಲಿ ಕಳೆದ 10 ವರ್ಷಗಳಲ್ಲಿ ನರ ಹಾಗೂ ಮಾನಸಿಕ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿರುವುದು ಆತಂಕದ ವಿಷಯ. ಮಾನಸಿಕ ಆರೋಗ್ಯ ಉತ್ತಮವಾಗಿದ್ದರೆ ಮಾತ್ರ ಮನುಷ್ಯ ಆರೋಗ್ಯವಾಗಿರುತ್ತಾನೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದರು.
ಬೆಂಗಳೂರಿನಲ್ಲಿ ರಾಷ್ಟ್ರೀಯ ಮಾನಸಿಕ ಹಾಗೂ ನರವಿಜ್ಞಾನ ಸಂಸ್ಥೆ (ನಿಮ್ಹಾನ್ಸ್) ನೇತೃತ್ವದಲ್ಲಿ ನಡೆಯುತ್ತಿರುವ ಬ್ರೈನ್ ಹೆಲ್ತ್ ಇನಿಷೆಯೇಟಿವ್ ಕಾರ್ಯಕ್ರಮದಲ್ಲಿ ಉದ್ಘಾಟಿಸಿ ಅವರು ಮಾತನಾಡಿದರು. ನಾವು ಎಷ್ಟು ವರ್ಷ ಬದುಕುತ್ತೇವೆ ಅನ್ನುವುದರ ಜೊತೆಗೆ ಹೇಗೆ ಬದುಕುತ್ತೇವೆ ಎನ್ನವುದು ಸಹ ಮುಖ್ಯವಾಗಿದೆ. ಮಾನಸಿಕ ಆರೋಗ್ಯದಲ್ಲಿನ ಏರುಪೇರು ಮನುಷ್ಯನ ಆರೋಗ್ಯದಲ್ಲಿ ಸಮಸ್ಯೆ ಸೃಷ್ಟಿಸುವ ಜೊತೆಗೆ ಸಮಾಜಕ್ಕೂ ಆತಂಕ ತರುತ್ತಿದೆ. ಮಾನಸಿಕ ಆರೋಗ್ಯ ಉತ್ತಮವಾಗಿದ್ದರೆ ಮಾತ್ರ ಸ್ವಸ್ಥ ಸಮಾಜ ನಿರ್ಮಾಣ ಸಾಧ್ಯ ಎಂದು ಅವರು ತಿಳಿಸಿದರು.
ಬೆಂಗಳೂರಿನಲ್ಲಿ ನಿಮ್ಹಾನ್ಸ್ನಂತಹ ಸಂಸ್ಥೆ ಇರುವುದು ರಾಜ್ಯಕ್ಕೆ ವರದಾನವಾಗಿದೆ. ಸಾಂಕ್ರಾಮಿಕವಲ್ಲದ ರೋಗಗಳಿಂದಲೂ ಬ್ರೈನ್ಗೆ ಸಂಬಂಧಿಸಿದ ಕಾಯಿಲೆಗಳು ಹೆಚ್ಚಾಗುತ್ತಿದೆ. ಕಳೆದ 10 ವರ್ಷಗಳಿಂದ ಮಾನಸಿಕ, ನರರೋಗಗಳು, ಸ್ಟ್ರೋಕ್, ತಲೆನೋವಿನಿಂದ ನರಳುತ್ತಿರುವ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಅಂಕಿ ಅಂಶಗಳ ಪ್ರಕಾರ ಮಾನಸಿಕ ಅರೋಗ್ಯದಿಂದಲೇ ಸುಮಾರು 7ರಿಂದ 8ರಷ್ಟು ಜನರು ಸಾವಿಗೀಡಾಗುತ್ತಿದ್ದಾರೆ. ಮಾನಸಿಕ ಅಸ್ವಸ್ಥತೆಯು ಸಾವಿಗೆ ಕಾರಣವಾಗಿರುವ ಅಂಶಗಳ ಪೈಕಿ 2ನೇ ಸ್ಥಾನದಲ್ಲಿದೆ ಎಂದು ಸಚಿವರು ವಿವರಿಸಿದರು.

'ಟಿ ಮನಸ್' ಮೂಲಕ ರಾಷ್ಟ್ರೀಯ ಅಭಿಯಾನ
ಭಾರತ ಸರ್ಕಾರ 'ಟಿ ಮನಸ್' ಯೋಜನೆ ಮೂಲಕ ಮಾನಸಿಕ ರೋಗಗಳಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ಅಭಿಯಾನ ಮಾಡುತ್ತಿದೆ. ರಾಜ್ಯ ಸರ್ಕಾರ ಹಬ್ ಮತ್ತು ಸ್ಪೋಕ್ ಮಾಡೆಲ್ ಮೂಲಕ ಈಗಾಗಲೇ ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರದಲ್ಲಿ ನಿಮ್ಹಾನ್ಸ್ ನೆರವಿನೊಂದಿಗೆ ಪೈಲಟ್ ಪ್ರಾಜೆಕ್ಟ್ ಮಾಡುತ್ತಿದೆ. ಇದನ್ನು ಮುಂದಿನ ದಿನಗಳಲ್ಲಿ ಈ ಸೇವೆ ರಾಜ್ಯದ ಎಲ್ಲಾ ಕಡೆ ಸಿಗುವಂತೆ ಮಾಡಲು ಯೋಜನೆ ರೂಪಿಸಲಾಗಿದೆ ಎಂದರು.

ಪ್ರಾಥಮಿಕ ಆರೋಗ್ಯ ಕೇಂದ್ರ (ಪಿಎಚ್ಸಿ) ವೈದ್ಯರಿಗೆ ಮಾನಸಿಕ ರೋಗಿಗಳಿಗೆ ಕೌನ್ಸಿಲಿಂಗ್ ಹಾಗೂ ಚಿಕಿತ್ಸೆ ನೀಡುವ ಬಗ್ಗೆ ಈಗಾಗಲೇ 3 ತಿಂಗಳ ತರಬೇತಿ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಎಎನ್ಎಂ, ಸಿಎಚ್ಒಗಳಿಗೆ ಹಾಗೂ ಆಶಾ ಕಾರ್ಯಕರ್ತೆಯರಿಗೂ ಈ ಸಂಬಂಧ ತರಬೇತಿ ನೀಡಿ ಮಾನಸಿಕ ರೋಗಿಗಳಿಗೆ ಹೇಗೆ ಚಿಕಿತ್ಸೆ ನೀಡಬೇಕು ಅನ್ನುವ ಬಗ್ಗೆ ತಿಳಿಸಲು ಯೋಜನೆ ಜಾರಿಗೊಳಿಸಲಿದ್ದೇವೆ ಎಂದು ಹೇಳಿದರು.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications