ಕರ್ನಾಟಕದಲ್ಲಿ ಪ್ರತಿನಿತ್ಯ 1 ಲಕ್ಷ ಜನರಿಗೆ ಕೊರೊನಾವೈರಸ್ ತಪಾಸಣೆ
ಬೆಂಗಳೂರು, ಮಾರ್ಚ್ 17: ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿನ ಎರಡನೇ ಅಲೆಯ ಭೀತಿ ಎದುರಾಗಿದೆ. ಸಾಂಕ್ರಾಮಿಕ ಪಿಡುಗು ನಿಯಂತ್ರಿಸುವ ಉದ್ದೇಶದಿಂದ ರಾಜ್ಯದಲ್ಲಿ ಸೋಂಕು ಪರೀಕ್ಷೆ ವೇಗ ಹೆಚ್ಚಿಸುವುದಕ್ಕೆ ಸರ್ಕಾರ ನಿರ್ಧರಿಸಿದೆ.
ಕರ್ನಾಟಕದಲ್ಲಿ ಕೊವಿಡ್-19 ಹೊಸ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದೆ. ಈ ಹಿನ್ನೆಲೆ ಪ್ರತಿನಿತ್ಯ 1 ಲಕ್ಷ ಜನರಿಗೆ ಕೊರೊನಾವೈರಸ್ ಸೋಂಕಿನ ಪರೀಕ್ಷೆ ನಡೆಸಲಾಗುವುದು ಎಂದು ಸರ್ಕಾರ ಸುತ್ತೋಲೆ ಹೊರಡಿಸಿದೆ.
ಕೊರೊನಾ ಸೋಂಕಿನ ಎರಡನೇ ಅಲೆಯನ್ನು ನಿಯಂತ್ರಿಸಲು ಮುಂಜಾಗ್ರತಾ ಕ್ರಮವಾಗಿ ರಾಜ್ಯದ ಒಟ್ಟು ದೈನಂದಿನ ಕೋವಿಡ್ ಪರೀಕ್ಷಾ ಗುರಿಯನ್ನು 1 ಲಕ್ಷಕ್ಕೆ ಹೆಚ್ಚಿಸಲಾಗಿದೆ.
— Dr Sudhakar K (@mla_sudhakar) March 17, 2021
In order to prevent and mitigate the second wave of Covid-19, the daily target of tests in the state has been increased to 1 lakh.@DHFWKA pic.twitter.com/EtvmjWuw8e
"ಕೊರೊನಾ ಸೋಂಕಿನ ಎರಡನೇ ಅಲೆಯನ್ನು ನಿಯಂತ್ರಿಸಲು ಮುಂಜಾಗ್ರತಾ ಕ್ರಮವಾಗಿ ರಾಜ್ಯದ ಒಟ್ಟು ದೈನಂದಿನ ಕೋವಿಡ್ ಪರೀಕ್ಷಾ ಗುರಿಯನ್ನು 1 ಲಕ್ಷಕ್ಕೆ ಹೆಚ್ಚಿಸಲಾಗಿದೆ" ಎಂದು ಸಚಿವ ಡಾ. ಕೆ ಸುಧಾಕರ್ ಟ್ವೀಟ್ ಮಾಡಿದ್ದಾರೆ.

ಸರ್ಕಾರದ ಸುತ್ತೋಲೆಯಲ್ಲಿ ಇರುವುದೇನು:
ರಾಜ್ಯದಲ್ಲಿ ಜಿಲ್ಲಾವಾರು ಕೊರೊನಾವೈರಸ್ ಸೋಂಕು ಪತ್ತೆಗೆ ನಡೆಸುವ ಆರ್ಎಟಿ ಮತ್ತು ಆರ್ ಟಿ-ಪಿಸಿಆರ್ ಪರೀಕ್ಷೆಯನ್ನು 70,500ಕ್ಕೆ ಇಳಿಸಲಾಗಿತ್ತು. ಆದರೆ ರಾಜ್ಯದಲ್ಲಿ ಕೊವಿಡ್ ಪ್ರಕರಣಗಳಲ್ಲಿ ಮತ್ತೆ ಹೆಚ್ಚಳ ಉಂಟಾಗುತ್ತಿರುವ ಹಿನ್ನೆಲೆ ತಾಂತ್ರಿಕ ಸಲಹಾ ಸಮಿತಿ ಸಲಹೆ ಹಾಗೂ ಸರ್ಕಾರದ ಸೂಚನೆಯಂತೆ ರಾಜ್ಯದ ಒಟ್ಟು ಕೊವಿಡ್ ಪರೀಕ್ಷಾ ಗುರಿಯನ್ನು 1 ಲಕ್ಷಕ್ಕೆ ಹೆಚ್ಚಿಸಲಾಗಿದೆ.
ಕರ್ನಾಟಕದಲ್ಲಿ ಕೊರೊನಾವೈರಸ್ ಪ್ರಕರಣ:
ಕರ್ನಾಟಕದಲ್ಲಿ ಒಂದೇ ದಿನ 1135 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 962339ಕ್ಕೆ ಏರಿಕೆಯಾಗಿದೆ. ಒಂದು ದಿನದಲ್ಲಿ 6 ಜನ ಮಹಾಮಾರಿಗೆ ಬಲಿಯಾಗಿದ್ದು, ಸಾವಿನ ಸಂಖ್ಯೆ 12403ಕ್ಕೆ ಏರಿಕೆಯಾಗಿದೆ. ಈವರೆಗೂ 940489 ಕೊರೊನಾವೈರಸ್ ಸೋಂಕಿತರು ಗುಣಮುಖರಾಗಿದ್ದಾರೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.












Click it and Unblock the Notifications