ಸ್ವಾತಂತ್ರ್ಯ ದಿನಾಚರಣೆ 2023: ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಭರ್ಜರಿ ಸಿದ್ಧತೆ
ಬೆಂಗಳೂರು, ಆಗಸ್ಟ್ 13: ಸ್ವಾತಂತ್ರ್ಯ ದಿನಾಚರಣೆಗೆ ದಿನಗಣನೆ ಶುರುವಾಗಿದೆ. ಈ ಬಾರಿ ಸಿಲಿಕಾನ್ ಸಿಟಿಯಲ್ಲಿ ಸ್ವಾತಂತ್ರ್ಯೋತ್ಸವಕ್ಕೆ ತಯಾರಿ ಯಾವ ರೀತಿ ಇದೆ ಗೊತ್ತಾ? ಸಿಲಿಕಾನ್ ಸಿಟಿಯಲ್ಲಿ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಅದ್ಧೂರಿ ಕಾರ್ಯಕ್ರಮ ನಡೆಯಲಿದೆ.
ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮ ಯಾವ ರೀತಿ ಇರಲಿದೆ ಎಂದು ಕಾರ್ಯಕ್ರಮ ರೂಪುರೇಷೆ ಬಗ್ಗೆ ಬಿಬಿಎಂಪಿ ಪಾಲಿಕೆ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್, ನಗರ ಪೊಲೀಸ್ ಆಯುಕ್ತರಾದ ದಯಾನಂದ್ ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿಯಾದ ಡಾ. ದಯಾನಂದ್ ಜಂಟಿ ಸುದ್ದಿಗೋಷ್ಠಿ ನಡೆಸಿದರು.

ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸಿದ್ಧತೆ ಬಗ್ಗೆ ಮಾಹಿತಿ ನೀಡಿರುವ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ದಿನಾಚರಣೆಯ ಸಮಾರಂಭಕ್ಕಾಗಿ ಮೈದಾನ ಸಿದ್ಧಗೊಳಿಸಲಾಗಿದೆ. ಶಾಮಿಯಾನ, ವೇದಿಕೆಯ ನಿರ್ಮಾಣ, ಬ್ಯಾರಿಕೇಡಿಂಗ್ ಮತ್ತು ಆಸನಗಳ ವ್ಯವಸ್ಥೆ ಮಾಡಲಾಗಿದೆವೇದಿಗೆ ಆಲಂಕಾರಿಕ ಬ್ಯಾಸ್ ಪರಿಕರಗಳನ್ನ ಆಳವಡಿಸಲಾಗುತ್ತದೆ. ಧ್ವಜಾರೋಹಣ ಮಾಡಲು ಧ್ವಜ ಸ್ಥಂಭ ನಿರ್ಮಿಸಲಾಗಿದೆ ಎಂದರು.
ಸ್ವಾತಂತ್ರ್ಯ ದಿನಾಚರಣೆಯ ದಿನ ಬೆಳಿಗ್ಗೆ 8-55 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಲಿದ್ದಾರೆ. ಭಾರತೀಯ ರಕ್ಷಣಾ ಸೇವೆಯ ಮೂವರು ಹಿರಿಯ ಅಧಿಕಾರಿಗಳನ್ನು ಸಿಎಂಗೆ ಪರಿಚಯಿಸಲಾಗುತ್ತದೆ. ಮುಖ್ಯಮಂತ್ರಿಗಳು ಬೆಳಗ್ಗೆ 9ಗಂಟೆಗೆ ಧ್ವಜಾರೋಹಣ ನೆರವೇರಿಸಲಿದ್ದಾರೆ. ಬಳಿಕ ಮುಖ್ಯಮಂತ್ರಿಗಳು ತೆರೆದ ಜೀಪಿನಲ್ಲಿ ಪೆರೇಡ್ ಪರಿವೀಕ್ಷಣೆ ಮಾಡಿ ಮತ್ತು ಗೌರವ ರಕ್ಷೆ ಸ್ವೀಕರಿಸಲಿದ್ದಾರೆ. ನಂತರ ನಾಡಿನ ಜನತೆಗೆ ಸ್ವಾತಂತ್ರೋತ್ಸವದ ಸಂದೇಶ ನೀಡಲಿದ್ದಾರೆ ಎಂದು ತಿಳಿಸಿದರು.
ಇನ್ನು ಪೊಲೀಸ್ ಆಯುಕ್ತ ಬಿ ದಯಾನಂದ್ ಕೂಡ ತಯಾರಿ ಬಗ್ಗೆ ಮಾಹಿತಿ ನೀಡಿದ್ದು, ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಎಲ್ಲಾ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಪೆರೇಡ್ ಸುತ್ತಮುತ್ತ ಸುಗಮ ಸಂಚಾರಕ್ಕೆ ಸೂಕ್ತ ವ್ಯವಸ್ಥೆ ಮಾಡಲಾಗಿದೆ. ಧ್ವಜಾರೋಹಣ, ಕವಾಯತು ಸಂದರ್ಭದಲ್ಲಿ ಬಂದೋಬಸ್ತ್ಗೆ ಬೆಂಗಳೂರಿನ ಎಲ್ಲಾ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ. ಹಾಗೂ
ಡಿಸಿಪಿ, ಎಸಿಪಿ, ಇನ್ಸ್ಪೆಕ್ಟರ್ ಸೇರಿ ಎಲ್ಲಾ ದರ್ಜೆ ಅಧಿಕಾರಿಗಳ ಬಳಕೆ ಮಾಡಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.
ಇನ್ನು ಕೆಎಸ್ಆರ್ಪಿ, ಸಿಎಆರ್, ಅಗ್ನಿಶಾಮಕ, ಮೊಬೈಲ್ ಕಮಾಂಡ್ ಮತ್ತು ಕಂಟ್ರೋಲ್ ಸೇರಿದಂತೆ ಎಲ್ಲಾ ವಿಶೇಷ ತಂಡಗಳು ಇರಲಿವೆ. ಮೈದಾನ ಸುತ್ತ ಸುರಕ್ಷತೆ ದೃಷ್ಠಿಯಿಂದ 100ಸಿಸಿ ಟಿವಿ ಕ್ಯಾಮರಾ ಅಳವಡಿಕೆ ಮಾಡಲಾಗಿದೆ. ಪ್ರವೇಶ ದ್ವಾರಗಳಲ್ಲಿ ಸ್ಕ್ಯಾನರ್ಗಳ ವ್ಯವಸ್ಥೆ ಮಾಡಲಾಗಿದೆ. ಪಾಸ್ ಹೊಂದಿರುವವರಿಗೆ ಮಾತ್ರ ಪರೇಡ್ ಗ್ರೌಂಡ್ಗೆ ಪ್ರವೇಶಕ್ಕೆ ಅವಕಾಶ ಮಾಡಲಾಗಿದೆ. ಪಾಸ್ನ ಮೂಲಕ ಯಾವ ಗೇಟ್ನಲ್ಲಿ ಪ್ರವೇಶ ಎನ್ನುವುದನ್ನು ನೋಡಿ ಬರಬೇಕು. 8.30ರ ಒಳಗೆ ಗ್ರೌಂಡ್ನಲ್ಲಿ ಇರಬೇಕು ಎಂದು ಕಮಿಷನರ್ ಮನವಿ ಮಾಡಿದ್ದಾರೆ.
ಒಟ್ಟಾರೆ ಬೆಂಗಳೂರಿನಲ್ಲಿ ಸಿಟಿಯಲ್ಲಿ ಸ್ವಾತಂತ್ರ್ಯ ದಿನಾಚರಣೆಗೆ ಸಕಲ ರೀತಿಯ ಸಿದ್ಧತೆ ನಡೆಯುತ್ತಿದ್ದು ಸ್ವಾತಂತ್ರ್ಯ ದಿನಾಚರಣೆ ಕಣ್ತುಂಬಿ ಕೊಳ್ಳುವುದೊಂದೇ ಬಾಕಿಯಾಗಿದೆ.
-
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ











Click it and Unblock the Notifications