INDIA ಮೈತ್ರಿಯಲ್ಲಿ ಮಹಾ ಬಿರುಕು: ಇಂಡಿ ಒಕ್ಕೂಟ ಛಿದ್ರ ಎಂದ ಮಾಜಿ ಸಿಎಂ
ಬೆಂಗಳೂರು, ಜನವರಿ 24: ಕಾಂಗ್ರೆಸ್ ಪಕ್ಷದ ವರ್ತನೆಯಿಂದ ಬೇಸತ್ತು ಇಂಡಿ ಒಕ್ಕೂಟದ ಪಕ್ಷಗಳು ದೂರವಾಗುತ್ತಿದ್ದು, ಮಮತಾ ಬ್ಯಾನರ್ಜಿ ಹೊರಗೆ ಹೋಗಿದ್ದು, ಶರತ್ ಪವ್ವಾರ್, ನಿತೀಶ್ ಕುಮಾರ್ ಕೂಡ ಒಂದು ಹೆಜ್ಜೆ ಹೊರಗಿಟ್ಟಿದ್ದು, ಇಂಡಿಯಾ ಒಕ್ಕೂಟ ಛಿದ್ರವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ.
ಈ ಕುರಿತು ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮೈತ್ರಿಯಿಂದ ಹೊರಗೆ ಬಂದಿದ್ದಾರೆ. ಶರತ್ ಪವಾರ್ ಕೂಡ ಹೊರ ಬರಲಿದ್ದಾರೆ. ಬಿಹಾರ ಸಿಎಂ ನಿತಿಶ್ ಕುಮಾರ್ ಕೂಡ ಒಂದು ಹೆಜ್ಜೆ ಹೊರಗೆ ಇಟ್ಟಿದ್ದಾರೆ. ಇಂಡಿ ಒಕ್ಕೂಟ ಮುಂದಿನ ದಿನಗಳಲ್ಲಿ ಉಳಿಯುವುದಿಲ್ಲ. ಕಾಂಗ್ರೆಸ್ ನವರ ಕಟಾದಿಂದ ಅವರು ಹೊರಗೆ ಬರುತ್ತಿದ್ದಾರೆ. ಮೊದಿಯವರು 3ನೇ ಬಾರಿಗೆ ಪ್ರಧಾನಿಯಾದ ಮೇಲೆ ಒಕ್ಕೂಟ ಇರುವುದಿಲ್ಲ. ಮಮತಾ ಬ್ಯಾನರ್ಜಿಯವರಿಗೆ ಭ್ರಮನಿರಸನ ಆಗಿದೆ ಎಂದು ಹೇಳಿದರು.

ಇದೇ ವೇಳೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರನ್ನು ಬಿಜೆಪಿ ಗೆ ಕರೆ ತರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಜಗದೀಶ್ ಶೆಟ್ಟರ್ ಅವರು ಜನಸಂಘದಿಂದ ಇದ್ದವರು, ಅವರಿಗೆ ಕಾಂಗ್ರೆಸ್ ನಲ್ಲಿ ಇರಲು ಕಷ್ಟವಾಗಲಿದೆ. ಅವರನ್ನು ಪಕ್ಷಕ್ಕೆ ಕರೆತರಲು ಯಾರ ಮೂಲಕ ಪ್ರಯತ್ನ ನಡೆಸಲಾಗುತ್ತಿದೆ ಎನ್ನುವುದು ನನಗೆ ಗೊತ್ತಿಲ್ಲ. ಅವರ ವಿಚಾರದಲ್ಲಿ ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನಕ್ಕೆ ನಾವೆಲ್ಲರೂ ಬದ್ದರಾಗಿರುತ್ತೇವೆ.
ಬಿಹಾರದ ಮಾಜಿ ಸಿಎಂ ದಿ. ಕರ್ಪೂರಿ ಠಾಕೂರ್ ಅವರಿಗೆ ಮರಣೋತ್ತರ ಭಾರತ ರತ್ನ ನೀಡಿರುವುದಕ್ಕೆ ಕಾಂಗ್ರೆಸ್ ಆಕ್ಷೇಪ ಎತ್ತಿರುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ದಲಿತರು, ಒಬಿಸಿ ಕಾಂಗ್ರೆಸ್ ನ ಗುತ್ತಿಗೆಯಲ್ಲ. ಅಂಬೇಡ್ಕರ್ ಅವರಿಗೆ ಭಾರತ ರತ್ನ ಕೊಟ್ಟಿದ್ದು ಯಾರು ? ಕಾಂಗ್ರೆಸ್ ಯಾಕೆ ಕೊಡಲಿಲ್ಲಾ. ಪ್ರಣಬ್ ಮುಖರ್ಜಿ, ಅಬ್ದುಲ್ ಕಲಾಂ ಅವರಿಗೆ ನಾವು ಕೊಟ್ಟಿದ್ದೇವೆ. ಯಾರು ಒಳ್ಳೆಯ ಕೆಲಸ ಮಾಡಿದ್ದಾರೆ ಅವರಿಗೆ ಬಿಜೆಪಿ ಗುರುತಿಸಿ ಭಾರತ ರತ್ನ ಗೌರವ ಕೊಡುತ್ತಿದೆ ಎಂದರು.

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ರಾಮನ ಕುರಿತು ಆಡಿರುವ ಮಾತಿಗೆ ಆಕ್ರೋಶ ವ್ಯಕ್ತಪಡಿಸಿದ ಅವರು, ರಾವಣನ ಕನ್ನಡಕ ಹಾಕಿಕೊಂಡು ನೋಡಿದರೆ ರಾಮ ರಾಜ್ಯ ಕಾಣಿಸುವುದಿಲ್ಲ. ಭಕ್ತಿಯ ಕನ್ನಡಕದಿಂದ ನೋಡಿದರೆ ಎಲ್ಲೆಡೆಯೂ ರಾಮ ಕಾಣಿಸುತ್ತಾನೆ ಎಂದು ಹೇಳಿದರು. ಇನ್ನು ಹಾವೇರಿಯಲ್ಲಿ ಬಿಜೆಪಿ ಗೆಲ್ಲುವ ಅವಕಾಶ ಹೆಚ್ಚಿರುವುದರಿಂದ ಆಕಾಂಕ್ಷಿಗಳು ಹೆಚ್ಚಿದ್ದಾರೆ. ಬಿ.ಸಿ ಪಾಟೀಲ್, ಸಂದೀಪ್ ಪಾಟೀಲ್, ಈಶ್ವರಪ್ಪ ಮಗ ಬಹಳ ಜನ ಇದ್ದಾರೆ ಎಂದು ಹೇಳಿದರು.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications