Bihar Elections 2025: "ಬಿಹಾರದಲ್ಲಿ ಇಂಡಿಯಾ ಮೈತ್ರಿ ಕೂಟಕ್ಕೆ ಅಧಿಕಾರ"
ಬೆಂಗಳೂರು, ನವೆಂಬರ್ 12: ಬಿಹಾರ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್-ಆರ್ ಜೆಡಿ ಮೈತ್ರಿಕೂಟ ಇಂಡಿಯಾ ಅಧಿಕಾರಕ್ಕೆ ಬರಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾದ ಬಳಿಕ, ಸುದ್ದಿಗಾರರು ಕೇಳಿದ ಬಿಹಾರ ಚುನಾವಣೆಯ ಎಕ್ಸಿಟ್ ಪೋಲ್ ಕುರಿತು ಪ್ರತಿಕ್ರಿಯಿಸಿದ ಸಚಿವ ಲಕ್ಷ್ಮೀ ಹೆಬ್ಬಾಳಕರ್ ಅವರು, ಹರಿಯಾಣ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಎಕ್ಸಿಟ್ ಪೊಲ್ ನಲ್ಲಿ ಹೇಳಲಾಗಿತ್ತು. ಆದರೆ, ಬಿಜೆಪಿ ಅಧಿಕಾರಕ್ಕೇರಿತು. ಬಿಹಾರದಲ್ಲಿ ಎನ್ ಡಿಎ ಅಧಿಕಾರಕ್ಕೇರಲಿದೆ ಅಂತ ಎಕ್ಸಿಟ್ ಪೋಲ್ ಗಳು ಹೇಳಿದರೂ ಇಂಡಿಯಾ ಮೈತ್ರಿ ಕೂಟ ಅಧಿಕಾರಕ್ಕೆ ಬರಲಿದೆ ಎಂದರು. ಒಂದು ವೇಳೆ ಕಾಂಗ್ರೆಸ್ ಪ್ರಧಾನಿ ಇದ್ದು, ಅವರು ವಿದೇಶ ಪ್ರವಾಸಕ್ಕೆ ತೆರಳಿದ ವೇಳೆ ಸ್ಫೋಟಗೊಂಡಿದ್ದರೆ ಆಗ ಬಿಜೆಪಿಗರ ಪ್ರತಿಕ್ರಿಯೆ ಹೇಗಿರುತ್ತಿತ್ತು ನೀವೆ ಊಹಿಸಿ ಎಂದು ಹೇಳಿದರು.

ಅಂಗನವಾಡಿ ಸುವರ್ಣ ಮಹೋತ್ಸವ ಕಾರ್ಯಕ್ರಮ ಸ್ವಲ್ಪ ಮುಂದಕ್ಕೆ
ನವೆಂಬರ್ 19 ರಂದು ನಿಗದಿಯಾಗಿದ್ದ ಅಂಗನವಾಡಿ ಸುವರ್ಣ ಮಹೋತ್ಸವ ಕಾರ್ಯಕ್ರಮವನ್ನು ನವೆಂಬರ್ 28 ರಂದು ಆಯೋಜಿಸುವ ಉದ್ದೇಶವಿದೆ. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ವರಿಷ್ಠರಾದ ರಾಹುಲ್ ಗಾಂಧಿ ಅಥವಾ ಪ್ರಿಯಾಂಕಾ ಗಾಂಧಿ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಸುಮಾರು 1 ಕೋಟಿ 24 ಲಕ್ಷದ 12 ಸಾವಿರ ಫಲಾನುಭವಿಗಳು ಗೃಹಲಕ್ಷ್ಮೀ ಯೋಜನೆಯ ಲಾಭ ಪಡೆಯುತ್ತಿದ್ದು, ಇದುವರೆಗೂ 52,416 ಕೋಟಿಗೂ ಅಧಿಕ ಮೊತ್ತವನ್ನು ಫಲಾನುಭವಿಗಳ ಖಾತೆಗೆ ಹಾಕಲಾಗಿದೆ. ಗೃಹಲಕ್ಷ್ಮೀ ಯೋಜನೆಯ ಹಣವನ್ನು ಮತ್ತೊಂದು ರೀತಿಯಲ್ಲಿ ತೊಡಗಿಸಿ ಆದಾಯ ಒದಗಿಸುವ ಸಲುವಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಕನಸಿನ ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘವನ್ನು ಆರಂಭಿಸಲಾಗುತ್ತಿದೆ.
ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘದಲ್ಲಿ ಕಡಿಮೆ ಬಡ್ಡಿ ದರದಲ್ಲಿ 3 ಲಕ್ಷದವರೆಗೂ ಫಲಾನುಭವಿಗಳಿಗೆ ಸಾಲ ನೀಡಲಾಗುವುದು. ಇದರಿಂದ ಮಹಿಳೆಯರಿಗೆ ಮತ್ತಷ್ಟು ಆರ್ಥಿಕ ಶಕ್ತಿ ತುಂಬಿದಂತಾಗುತ್ತದೆ. ಮಹಿಳೆಯರ ಸುರಕ್ಷತೆ ಹಾಗೂ ಆರ್ಥಿಕವಾಗಿ ಸ್ವಾವಲಂಬನೆ ಮಾಡುವುದೇ ನನ್ನ ಹಾಗೂ ನಮ್ಮ ಸರ್ಕಾರದ ಮುಖ್ಯ ಗುರಿ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video











Click it and Unblock the Notifications