India-EU Trade Pact: ಭಾರತ-ಯೂರೋಪ್ ಒಕ್ಕೂಟದಿಂದ ಕರ್ನಾಟಕಕ್ಕೆ ಹೆಚ್ಚು ಪ್ರಯೋಜನ: ಪ್ರಹ್ಲಾದ್ ಜೋಶಿ
ನವದೆಹಲಿ: ಭಾರತ ಮತ್ತು ಯುರೋಪ್ ಒಕ್ಕೂಟ (EU) ಮಧ್ಯೆ ಮಹತ್ವದ ಒಪ್ಪಂದ ಏರ್ಪಟ್ಟಿದೆ. ಈ ಮೂಲಕ ಕರ್ನಾಟಕ ಸೇರಿದಂತೆ ದೇಶ ಅನೇಕ ರಾಜ್ಯಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಏಕೆಂದರೆ ಇದೊಂದು ಮುಕ್ತ ವ್ಯಾಪಾರ ಒಪ್ಪಂದವಾಗಿದ್ದು, ಯುರೋಪ್ ರಾಷ್ಟ್ರಗಳಿಂದ ಆಮದಾಗುವ ವಸ್ತುಗಳ ಮೇಲಿನ ಸುಂಕ ಇಳಿಕೆ ಆಗಲಿದೆ. ಈ ಬಗ್ಗೆ ಒಕ್ಕೂಟವು ಅಧಿಕೃತ ಮಾಹಿತಿ ಬಿಡುಗಡೆ ಮಾಡಿದೆ. ಇದೇ ವಿಚಾರವಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಎಕ್ಸ್ ಪೋಸ್ಟ್ ಮಾಡಿದ್ದು 'ಭಾರತ-ಯುರೋಪ್ ಒಪ್ಪಂದದಿಂದ ರಾಜ್ಯದ ಬೆಳವಣಿಗೆಗೆ ಮಹತ್ತರ ಅವಕಾಶ' ಸಿಗಲಿದೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.
ಭಾರತ-ಯುರೋಪ್ ಒಕ್ಕೂಟದ (India-EU FTA) ಮುಕ್ತ ವ್ಯಾಪಾರ ಒಪ್ಪಂದದಡಿ ಕರ್ನಾಟಕದ ಬೆಳವಣಿಗೆಗೆ ವಿಫುಲ ಅವಕಾಶಗಳು ಇದೆ. ಕರ್ನಾಟಕಕ್ಕೆ ತನ್ನ ರಫ್ತು ವಿಸ್ತಾರವನ್ನು ಹೆಚ್ಚಿಸಿ ಕೈಗಾರಿಕಾ ಬೆಳವಣಿಗೆಯನ್ನು ವೇಗಗೊಳಿಸುವ ಮಹತ್ವದ ಅವಕಾಶವನ್ನು ಒದಗಿಸುತ್ತದೆ. ಯುರೋಪಿಯನ್ ಮಾರುಕಟ್ಟೆಗಳಿಗೆ ಆದ್ಯತಾ ಪ್ರವೇಶ ಕಲ್ಪಿಸಲಿದೆ ಎಂದಿದ್ದಾರೆ.

ಬೆಂಗಳೂರು-ತುಮಕೂರು ಪ್ರದೇಶದಿಂದ ರಫ್ತು ಹೆಚ್ಚಿಸುತ್ತದೆ ಎಂದು ನಿರೀಕ್ಷಿಸಲಾಗಿದೆ. ವಿಶೇಷವಾಗಿ ಎಂಜಿನಿಯರಿಂಗ್ ಸರಕುಗಳು, ಎಲೆಕ್ಟ್ರಾನಿಕ್ಸ್ ಮತ್ತು ಔಷಧಗಳಲ್ಲಿ, ರಾಜ್ಯದ ಬಲವಾದ ಸೂಕ್ಷ್ಮ, ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳ (MSME) ವಲಯಕ್ಕೆ ಇದು ಬೆಂಬಲಿತವಾಗಿದೆ ಎಂದು ಅವರು ವಿವರಿಸಿದ್ದಾರೆ.
ಕರ್ನಾಟಕದ ವಿವಿಧ ವಲಯಗಳಿಗೆ ಪ್ರಯೋಜನ
ವೈದ್ಯಕೀಯ ಸಾಧನ, ರಾಸಾಯನಿಕಗಳು, ಜವಳಿ ಮತ್ತು ಉಡುಪುಗಳಂತಹ ಪ್ರಮುಖ ವಲಯಗಳು ಸಹ ಪ್ರಯೋಜನ ಪಡೆಯುವ ಸಾಧ್ಯತೆಯಿದೆ. ಇದು ಜಾಗತಿಕ ಸ್ಪರ್ಧಾತ್ಮಕತೆ ಹಾಗೂ ಮೌಲ್ಯಗಳನ್ನು ಮತ್ತಷ್ಟು ಬಲಪಡಿಸುತ್ತದೆ. ಸುಂಕ ಕಡಿತ ಮತ್ತು ಸುಧಾರಿತ ಮಾರುಕಟ್ಟೆ ಪ್ರವೇಶವು ಬೆಂಗಳೂರಿನಿಂದ ಉಡುಪು ರಫ್ತನ್ನು ಹೆಚ್ಚಿಸುತ್ತದೆ ಎಂದು ತಿಳಿಸಿದ್ದಾರೆ.
ಕೌಶಲ್ಯ ಆಧಾರಿತ ಕೈಗಾರಿಕೆಗಳ ಜೊತೆಗೆ, ಹೆಚ್ಚಿನ ಕಾರ್ಮಿಕರ ಅಗತ್ಯವಿರುವ ಉತ್ಪಾದನಾ ವಲಯದಲ್ಲಿ ಉದ್ಯೋಗ ಸೃಷ್ಟಿಗೆ ಈ ಒಪ್ಪಂದ ಪೂರಕವಾಗಲಿದೆ. ಒಟ್ಟಾರೆಯಾಗಿ, ಈ ಒಪ್ಪಂದ ಜಾಗತಿಕ ವ್ಯಾಪಾರ ಸಂಪರ್ಕ, ಸುಸ್ಥಿರ ರಫ್ತು, ಹೆಚ್ಚಿನ ಹೂಡಿಕೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಕರ್ನಾಟಕಕ್ಕೆ ಉತ್ತಮ ವೇದಿಕೆ ಕಲ್ಪಿಸಿಕೊಡುತ್ತದೆ ಎಂದು ಸಚಿವ ಪ್ರಹ್ಲಾದ್ ಜೋಶಿಯವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಒಪ್ಪಂದಿಂದ ಯಾವೆಲ್ಲ ವಸ್ತುಗಳ ಸುಂಕ ಇಳಿಕೆ ಆಗುತ್ತೆ?
ಐರೋಪ್ಯ ದೇಶಗಳಿಂದ ಆಮದಾಗುವ ವೈನ್, ಚಾಕೋಲೆಟ್, ಕಾರು, ಆಲಿವ್ ಎಣ್ಣೆ ಸೇರಿ ಹಲವು ವಸ್ತುಗಳ ತೆರಿಗೆ ಸುಂಕ ಕಡಿತಗೊಳಿಸಲಾಗಿದೆ. 110ರಷ್ಟಿದ್ದ ಸುಂಕವನ್ನು ಈ ಒಪ್ಪಂದದಿಂದ 10ಕ್ಕೆ ಇಳಿಸಲು ನಿರ್ಧರಿಸಲಾಗಿದೆ. ಆದರೆ ಭಾರತದ ರೈತರ ಹಿತದೃಷ್ಟಿ ಇಟ್ಟುಕೊಂಡು ಈ ಒಪ್ಪಂದದ ಸುಂಕ ಕಡಿತದಿಂದ ಸೂಕ್ಷ್ಮ ಕೃಷಿ ವಲಯಗಳನ್ನು ಹೊರಗಿಡಲಾಗಿದೆ ಎಂಬುದು ಸದ್ಯದ ಮಾಹಿತಿ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications