ಸ್ಮೃತಿ ಇರಾನಿ ಕಿವಿ ಹಿಂಡಿ ಪಕ್ವ ರಾಜಕಾರಣ ಮಾಡಲಿ: ಮೋದಿ ವಿರುದ್ಧ ಸಿದ್ದರಾಮಯ್ಯ ಟೀಕೆ
ಬೆಂಗಳೂರು, ಅಕ್ಟೋಬರ್ 13: ಹಸಿವಿನ ಸೂಚ್ಯಂಕದಲ್ಲಿ ಭಾರತದ ಸ್ಥಾನ ಸತತವಾಗಿ ಕುಸಿಯುತ್ತಿದ್ದರೂ ಪ್ರಧಾನಿ ನರೇಂದ್ರ ಮೋದಿ ಅವರು ಈ ವಿಚಾರವಾಗಿ ತಮ್ಮ ಸಂಪುಟ ಸಹೋದ್ಯೋಗಿಯಾದ ಕೇಂದ್ರ ಮಹಿಳಾ ಮತ್ತು ಮಕ್ಕಳ ಖಾತೆ ಸಚಿವೆ ಸ್ಮೃತಿ ಇರಾನಿಯವರನ್ನು ಪ್ರಶ್ನಿಸುತ್ತಿಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.
ಹಸಿವಿನ ಸೂಚ್ಯಂಕದಲ್ಲಿ ಭಾರತದ ಸ್ಥಾನ ಸತತವಾಗಿ ಕುಸಿಯುತ್ತಿದ್ದರೂ ಪ್ರಧಾನಿ @narendramodi ಅವರು ಈ ವಿಚಾರವಾಗಿ ತಮ್ಮ ಸಂಪುಟ ಸಹೋದ್ಯೋಗಿಯಾದ ಕೇಂದ್ರ ಮಹಿಳಾ ಮತ್ತು ಮಕ್ಕಳ ಖಾತೆ ಸಚಿವೆ ಸ್ಮೃತಿ ಇರಾನಿಯವರನ್ನು ಪ್ರಶ್ನಿಸುತ್ತಿಲ್ಲ, ಅವರ ಸಾಧನೆ ಏನು ಎಂಬುದನ್ನು ವಿವರಿಸುತ್ತಿಲ್ಲ. ಕೇವಲ ಅಪಕ್ವ ರಾಜಕಾರಣದಲ್ಲೇ ವ್ಯಸ್ತರಾಗದಂತೆ ಅವರಿಗೆ…
— Siddaramaiah (@siddaramaiah) October 13, 2023
ಸ್ಮೃತಿ ಇರಾನಿ ಅವರ ಸಾಧನೆ ಏನು ಎಂಬುದನ್ನು ವಿವರಿಸುತ್ತಿಲ್ಲ. ಕೇವಲ ಅಪಕ್ವ ರಾಜಕಾರಣದಲ್ಲೇ ವ್ಯಸ್ತರಾಗದಂತೆ ಅವರಿಗೆ ಕಿವಿಹಿಂಡಿ ಆಡಳಿತದೆಡೆಗೆ ಗಮನಹರಿಸಲು ಪ್ರಧಾನಿಯವರು ಇನ್ನಾದರೂ ಸೂಚಿಸಲಿ ಎಂದು ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.

ಜಾಗತಿಕ ಹಸಿವಿನ ಸೂಚ್ಯಂಕದಲ್ಲಿ ಭಾರತವು 111ನೇ ಸ್ಥಾನಕ್ಕೆ ಕುಸಿದಿರುವುದು ಅತ್ಯಂತ ಕಳವಳಕಾರಿ ಬೆಳವಣಿಗೆ. ನೆರೆಯ ಪಾಕಿಸ್ತಾನ, ಬಾಂಗ್ಲಾದೇಶ, ಶ್ರೀಲಂಕ ದೇಶಗಳು ಮಾತ್ರವಲ್ಲ ಸುಡಾನ್, ನೈಜೀರಿಯಾ, ಕಾಂಗೋದಂತಹ ದೇಶಗಳಿಗಿಂತಲೂ ಭಾರತದ ಸ್ಥಿತಿ ಕೆಟ್ಟದಾಗಿರುವುದು ವಿಷಾದನೀಯ ಎಂದು ಅವರು ಹೇಳಿದ್ದಾರೆ.
ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ವಿಶೇಷವಾಗಿ 2018-22ರ ಅವಧಿಯಲ್ಲಿ ಭಾರತದಲ್ಲಿನ ಮಕ್ಕಳ ಅಪೌಷ್ಟಿಕತೆಯು ಜಗತ್ತಿನಲ್ಲಿಯೇ ಹೆಚ್ಚಿರುವುದು ಅತ್ಯಂತ ಆತಂಕಕಾರಿಯಾಗಿದೆ. ದುರಂತವೆಂದರೆ ತಮ್ಮನ್ನು ವಿಶ್ವಗುರು ಎಂದು ಬಿಂಬಿಸಿಕೊಳ್ಳುವಲ್ಲಿಯೇ ಸದಾಕಾಲ ವ್ಯಸ್ತರಾಗಿರುವ ಪ್ರಧಾನಿ ಮೋದಿಯವರು ತಮ್ಮ ಆಡಳಿತದ ವೈಫಲ್ಯವನ್ನು ಎತ್ತಿಹಿಡಿಯುವ ಇಂತಹ ವಿಷಯಗಳು ಪ್ರಸ್ತಾಪವಾದೊಡನೆಯೇ ಮಹಾಮೌನಿಯಾಗುತ್ತಾರೆ, ಜಾಣಕಿವುಡು, ಜಾಣಕುರುಡು ಪ್ರದರ್ಶಿಸುತ್ತಾರೆ ಎಂದು ಹೇಳಿದ್ದಾರೆ.
ಜಾಗತಿಕ ಹಸಿವಿನ ಸೂಚ್ಯಂಕದಲ್ಲಿ ಭಾರತದ ಸ್ಥಾನ ಉತ್ತಮವಾಗಬೇಕೆಂದರೆ ದೇಶವು ಹಸಿವು ಮತ್ತು ಅಪೌಷ್ಟಿಕತೆ ಮುಕ್ತವಾಗಬೇಕಿದೆ. ವಿಶೇಷವಾಗಿ ಮಕ್ಕಳು ಮತ್ತು ಮಹಿಳೆಯರನ್ನು ತೀವ್ರವಾಗಿ ಕಾಡುತ್ತಿರುವ ಅಪೌಷ್ಟಿಕತೆ ದೂರಾಗಬೇಕಿದೆ. ವಿಪರ್ಯಾಸವೆಂದರೆ, ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವಾಲಯವು ಈ ವಿಚಾರದ ಗಂಭೀರತೆಯನ್ನು ಅರಿಯುತ್ತಿಲ್ಲ.
ಪ್ರತಿ ಬಾರಿ ವರದಿ ಪ್ರಕಟವಾದಾಗಲೂ ಕೇಂದ್ರ ಸರ್ಕಾರ ವರದಿಯನ್ನು ಪ್ರಶ್ನಿಸುವ ಮೂಲಕ ತಮ್ಮ ವೈಫಲ್ಯ ಮರೆಮಾಚಲು ಹತಾಶ ಪ್ರಯತ್ನ ಮಾಡುತ್ತಾರೆ. ದೇಶವನ್ನು ಕಾಂಗ್ರೆಸ್ ಮುಕ್ತಗೊಳಿಸಲು ಪ್ರಧಾನಿ ನರೇಂದ್ರ ಮೋದಿಯವರು ಪೋಲು ಮಾಡುತ್ತಿರುವ ಶ್ರಮ ಮತ್ತು ಸಂಪತ್ತನ್ನು ದೇಶವನ್ನು ಹಸಿವು ಮುಕ್ತಗೊಳಿಸಲು ಬಳಸಿದ್ದರೆ ವಿಶ್ವದ ಮುಂದೆ ಭಾರತ ತಲೆ ತಗ್ಗಿಸುವಂತಹ ಹೀನಾಯ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ಅವರು ಹೇಳಿದ್ದಾರೆ.
ಕರ್ನಾಟಕವನ್ನು ಹಸಿವು ಮುಕ್ತಗೊಳಿಸುವ ಉದ್ದೇಶದಿಂದ ನಮ್ಮ ಸರ್ಕಾರ ಜಾರಿಗೊಳಿಸಿರುವ ಅನ್ನಭಾಗ್ಯ, ಕ್ಷೀರಭಾಗ್ಯ, ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಊಟ, ಮಾತೃಪೂರ್ಣ, ಇಂದಿರಾ ಕ್ಯಾಂಟೀನ್ ನಂತಹ ಯೋಜನೆಗಳನ್ನು ಜಾರಿಗೊಳಿಸಿರುವುದನ್ನು ಪ್ರಧಾನಿಯವರಿಗೆ ನೆನಪಿಸಬಯಸುತ್ತೇನೆ. ನಮ್ಮ ಈ ಯೋಜನೆಗಳನ್ನು ಮಾದರಿಯಾಗಿಟ್ಟುಕೊಂಡು ಕೇಂದ್ರ ಸರ್ಕಾರ ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೊಳಿಸುವ ಮೂಲಕ ಮಾತ್ರ ಹಸಿವಿನ ವಿರುದ್ದ ನಿರ್ಣಾಯಕ ಹೋರಾಟ ನಡೆಸಲು ಸಾಧ್ಯ ಎನ್ನುವುದನ್ನು ಸನ್ಮಾನ್ಯ ನರೇಂದ್ರ ಮೋದಿ ಅವರು ಅರ್ಥಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ.
-
ಸಿದ್ದರಾಮಯ್ಯ ಬಜೆಟ್; ಹಣಕಾಸು ಶಿಸ್ತು, AI ಉತ್ತೇಜನ ಸ್ವಾಗತಾರ್ಹ:ರಂಗಸ್ವಾಮಿ ಮೂಕನಹಳ್ಳಿ -
ಯಾವ ಧರ್ಮವೂ ಧ್ವೇಷ ಬೋಧಿಸಲ್ಲ: ಸಮಾನತೆ ಸ್ಥಾಪಿಸುವುದೇ ಯೋಜನೆಗಳ ಗುರಿ: ಸಿದ್ದರಾಮಯ್ಯ -
ಬಜೆಟ್ನಲ್ಲಿ ಅನಿವಾಸಿ ಸಚಿವಾಲಯ ಘೋಷಣೆ ಇಲ್ಲ: ನಿರಾಶೆ ವ್ಯಕ್ತಪಡಿಸಿದ ಡಾ.ರೊನಾಲ್ಡ್ ಕೊಲಾಸೊ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ












Click it and Unblock the Notifications