ಐಎಸ್ಐಎಸ್ನಲ್ಲಿದ್ದ ಭಟ್ಕಳ ಮೂಲದ ಶಫಿ ಅರ್ಮರ್ ಹತ್ಯೆ?
ಬೆಂಗಳೂರು, ಏಪ್ರಿಲ್ 25 : ಐಎಸ್ಐಎಸ್ ಉಗ್ರ ಸಂಘಟನೆಯಲ್ಲಿದ್ದ ಭಟ್ಕಳ ಮೂಲದ ಶಫಿ ಅರ್ಮರ್ ಮೃತಪಟ್ಟಿದ್ದಾನೆ. ಸಿರಿಯಾದ ಮೇಲೆ ನಡೆದ ವಾಯುದಾಳಿಯಲ್ಲಿ ಅರ್ಮರ್ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದ್ದು, ಈ ಕುರಿತು ಕೇಂದ್ರ ಗುಪ್ತಚರ ಇಲಾಖೆಗೆ ಮಾಹಿತಿ ಬಂದಿದೆ.
ಶಫಿ ಅರ್ಮರ್ (26) ಮೃತಪಟ್ಟ ಬಗ್ಗೆ ಮಾಹಿತಿ ಬಂದಿದ್ದು, ಮಾಹಿತಿಯನ್ನು ಖಚಿತಪಡಿಸಿಕೊಳ್ಳಲಾಗುತ್ತಿದೆ ಎಂದು ಕೇಂದ್ರ ಗುಪ್ತಚರ ಇಲಾಖೆ ಅಧಿಕಾರಿಗಳು ಒನ್ ಇಂಡಿಯಾಕ್ಕೆ ತಿಳಿಸಿದ್ದಾರೆ. ಅರ್ಮರ್ ಐಎಸ್ಐಎಸ್ನ ಭಾರತದ ಶಾಖೆಯಾಗಿರುವ ಅನ್ಸರ್-ಉತ್-ತಾಹಿದ್ನ ಸ್ಥಾಪಕ ಸುಲ್ತಾನ್ ಅರ್ಮರ್ನ ಸಹೋದರ. [ಭಟ್ಕಳ ಮೂಲದ ಶಫಿ ಭಾರತದಲ್ಲಿ ISIS ಮುಖ್ಯಸ್ಥ]

ಭಟ್ಕಳ ಮೂಲದ ಈ ಇಬ್ಬರು ಐಎಸ್ಐಎಸ್ ಉಗ್ರ ಸಂಘಟನೆಗೆ ಭಾರತೀಯರನ್ನು ನೇಮಕ ಮಾಡಲು ಅನ್ಸರ್-ಉತ್-ತಾಹಿದ್ ಸಂಘಟನೆ ಸ್ಥಾಪಿಸಿದ್ದರು. ಕಳೆದ ವರ್ಷ ಸುಲ್ತಾನ್ ಹತ್ಯೆಯಾದ ಬಳಿಕ, ಶಫಿ ಅರ್ಮರ್ ಸಂಘಟನೆಯ ನೇತೃತ್ವ ವಹಿಸಿಕೊಂಡಿದ್ದ. [ಉಗ್ರರಿಗೆ ಮುಂಬೈನಿಂದ ಸೂಚನೆ ಸಿಗುತ್ತಿತ್ತು]
ಈ ಇಬ್ಬರು ಸಹೋದರರು ಮೊದಲು ಇಂಡಿಯನ್ ಮುಜಾಹಿದ್ದೀನ್ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದರು. ಐಎಸ್ಐ ಸಂಘಟನೆ ಅಡಿಯಲ್ಲಿ ಕೆಲಸ ಮಾಡಲು ಒಪ್ಪದ ಇವರು ಅದರಿಂದ ಹೊರ ಬಂದಿದ್ದರು. ಭಾರತದಲ್ಲಿ ಇತ್ತೀಚೆಗೆ ಐಎಸ್ಐಎಸ್ ಪರ ಕೆಲಸ ಮಾಡುತ್ತಿದ್ದ ಉಗ್ರರನ್ನು ಬಂಧಿಸಿದ ಬಳಿಕ ಶಫಿ ಅರ್ಮರ್ ಹೆಸರು ಹಲವು ಬಾರಿ ಕೇಳಿಬಂದಿತ್ತು. [ಭಟ್ಕಳದ ಅಹಮದ್ ಗೆ ISIS ನಂಟಿಲ್ಲ]
ಶಫಿ ಅರ್ಮರ್ ಮೃತಪಟ್ಟ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಐಎಸ್ಐಎಸ್ ಸಾಮಾಜಿಕ ಜಾಲ ತಾಣಗಳಲ್ಲಿ ಈ ಬಗ್ಗೆ ಮಾಹಿತಿ ಇಲ್ಲ. ಹಿಂದೆ ಸುಲ್ತಾನ್ ಅರ್ಮರ್ ಹತ್ಯೆಯಾದಾಗ ಸಂಘಟನೆಯ ಸಾಮಾಜಿಕ ತಾಣದಲ್ಲಿ ಹಲವು ಉಗ್ರರು ಆತನಿಗೆ ಅಂತಿಮ ನಮನ ಸಲ್ಲಿಸಿದ್ದರು ಎನ್ನುತ್ತಾರೆ ಗುಪ್ತಚರ ಇಲಾಖೆ ಅಧಿಕಾರಿಗಳು.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications