Railway Good News: ಈ ವಿಶೇಷ ರೈಲುಗಳ ಸೇವೆ ವಿಸ್ತರಣೆ, ಪರಿಷ್ಕೃತ ವೇಳಾಪಟ್ಟಿ ವಿವರ
Indian Railways: ಭಾರತೀಯ ರೈಲ್ವೆ ವ್ಯಾಪ್ತಿಯ ನೈಋತ್ಯ ರೈಲ್ವೆ ವಿಭಾಗದಿಂದ ಶಬರಿಮಲೆ ಯಾತ್ರೆ ಮತ್ತು ಪೊಂಗಲ್ ಹಬ್ಬದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ಹಿನ್ನೆಲೆಯಲ್ಲಿ ವಿಶೇಷ ರೈಲುಗಳ ಅವಧಿ ವಿಸ್ತರಣೆ ಮಾಡಲಾಗಿದೆ. ಇದರೊಂದಿಗೆ ಬಾಗ್ಮತಿ ಎಕ್ಸ್ಪ್ರೆಸ್ಗೆ ರೈಲಿನ ತಾತ್ಕಾಲಿಕ ನಿಲುಗಡೆ ಘೋಷಿಸಲಾಗಿದೆ ಎಂದು ರೈಲ್ವೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಶಬರಿಮಲೆ ಯಾತ್ರೆ ಮತ್ತು ಮುಂಬರುವ ಪೊಂಗಲ್ ಹಬ್ಬದ ಕಾರಣಕ್ಕೆ ಪ್ರಯಾಣಿಕರ ಸಂಚಾರ ಹೆಚ್ಚಿರುತ್ತದೆ. ಇದನ್ನು ಗಮನದಲ್ಲಿಟ್ಟುಕೊಂಡು 2026ರ ಜನವರಿಯಲ್ಲಿ ಹಲವು ವಾರಾಂತ್ಯ ವಿಶೇಷ ರೈಲುಗಳ ಸಂಚಾರ ವಿಸ್ತರಿಸಲಾಗಿದೆ. ಶಬರಿಮಲೆ ಭಕ್ತರಿಗಾಗಿ ಕೆಲವು ವಿಶೇಷ ರೈಲುಗಳ ಸೇವೆಯನ್ನು ಡಿಸೆಂಬರ್ 2025 ನಂತರವೂ ಮುಂದುವರಿಸಲು ನಿರ್ಧಾರ ಕೈಗೊಳ್ಳಲಾಗಿದೆ. ಈ ಕೆಳಗಿನ ರೈಲುಗಳು ಹೊಸ ವೇಳಾಪಟ್ಟಿಯಂತೆ ಕಾರ್ಯಾಚರಣೆ ನಡೆಸಲಿವೆ.

2025 ಡಿಸೆಂಬರ್ 28ರವರೆಗೆ ಮಾತ್ರ ನಡೆಯಬೇಕಾಗಿದ್ದ ಹುಬ್ಬಳ್ಳಿ-ಕೊಲ್ಲಂ ವಿಶೇಷ ರೈಲು (07313) ಈಗ 2026ರ ಜನವರಿ 4 ರಿಂದ 25ರವರೆಗೆ ವಿಸ್ತರಣೆ ಮಾಡಲಾಗಿದೆ. ಪರಿಷ್ಕೃತ ವೇಳಾಪಟ್ಟಿಯ ಪ್ರಕಾರ, ಈ ರೈಲು ಈಗ ಕೊಲ್ಲಂ ಜಂಕ್ಷನ್ಗೆ ಮಧ್ಯಾಹ್ನ 13:15ಕ್ಕೆ ತಲುಪಲಿದೆ.
ಕೊಲ್ಲಂ-ಹುಬ್ಬಳ್ಳಿ ವಿಶೇಷ ಎಕ್ಸ್ಪ್ರೆಸ್ ರೈಲು (07314) ಮುಂದಿನ ಜನವರಿ 5 ರಿಂದ 26ರವರೆಗೆ ಸಂಚರಿಸಲಿದೆ. ಬೆಂಗಳೂರಿನಿಂದ ತಿರುವನಂತಪುರ ಉತ್ತರಕ್ಕೆ ಓಡುವ ಬೆಂಗಳೂರು ಎಸ್ಎಂವಿಟಿ-ತಿರುವನಂತರಪುರ ವಿಶೇಷ ಎಕ್ಸ್ಪ್ರೆಸ್ ರೈಲು (06523) ಮತ್ತು ತಿರುವನಂತಪುರದಿಂದ- ಬೆಂಗಳೂರು ಎಸ್ಎಂವಿಟಿ ರೈಲು (06524) ವಿವಿಧ ರೈಲುಗಳ ಸೇವೆಯನ್ನೂ ಜನವರಿ ಅಂತ್ಯದವರೆಗೂ ವಿಸ್ತರಿಸಲಾಗಿದೆ.
ಬಾಗ್ಮತಿ ಎಕ್ಸ್ಪ್ರೆಸ್ಗೆ ತಾತ್ಕಾಲಿಕ ನಿಲುಗಡೆ
ಈ ಮಧ್ಯೆ, ಈಸ್ಟ್ ಸೆಂಟ್ರಲ್ ರೈಲ್ವೆ ನೀಡಿರುವ ಮಾಹಿತಿಯಂತೆ ದಭಾಂಗ-ಮೈಸೂರು-ದರ್ಭಾಂಗ ಬಾಗ್ಮತಿ ಸಾಪ್ತಾಹಿಕ ಎಕ್ಸ್ಪ್ರೆಸ್ ರೈಲುಗಳಿಗೆ (12577/12578) ಪಾಟ್ನಾ ಸಾಹೇಬ್ ನಿಲ್ದಾಣದಲ್ಲಿ ಎರಡು ನಿಮಿಷಗಳ ತಾತ್ಕಾಲಿಕ ನಿಲುಗಡೆ ನೀಡಲಿದೆ. ಈ ನಿಲುಗಡೆ ನಿಯಮವು ಇದೇ 2025 ಡಿಸೆಂಬರ್ 19ರಿಂದ ಜನವರಿ 2 ರವರೆಗಿನ ಅವಧಿಗೆ ಮಾತ್ರವೇ ಅನ್ವಯವಾಗಲಿದೆ.
ಈ ತಾತ್ಕಾಲಿಕ ನಿಲುಗಡೆ ಶ್ರೀ ಗುರು ಗೋವಿಂದ್ ಸಿಂಗ್ ಜೀ ಮಹಾರಾಜರ 359ನೇ ಜಯಂತಿ ಆಚರಣೆಯ ಅಂಗವಾಗಿ ಹೆಚ್ಚಿನ ಜನರ ಸಂಚಾರ ಇರುವುದನ್ನು ಗಮನಿಸಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ. ಪರಿಷ್ಕೃತ ವೇಳಾಪಟ್ಟಿಯ ಪ್ರಕಾರ ದರ್ಭಾಂಗ ಬಾಗ್ಮತಿ ಸಾಪ್ತಾಹಿಕ ಎಕ್ಸ್ಪ್ರೆಸ್ ರೈಲು (12577) ಪಾಟ್ನಾ ಸಾಹೇಬ್ಗೆ ರಾತ್ರಿ 19:41 ಗಂಟೆಗೆ ಆಗಮಿಸಿ 19:43ಕ್ಕೆ ಅಲ್ಲಿಂದ ಹೊರಡುತ್ತದೆ. ಅದೇ ರೀತಿ ಮರಳಿ ಬರುವ ರೈಲು (12578) ರಾತ್ರಿ 23:23 ಗಂಟೆಗೆ ಇದೇ ನಿಲ್ದಾಣಕ್ಕೆ ಬಂದು 23:25ಕ್ಕೆ ಅಲ್ಲಿಂದ ಹೊರಡುತ್ತದೆ ಎಂದು ನೈಋತ್ಯ ರೈಲ್ವೆ ವಿಭಾಗದ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಮಂಜುನಾಥ್ ಕನಮಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-
Vande Bharat Sleeper: ಉತ್ಪಾದನೆ ಗುರಿ ತಲುಪದ ಬೆಂಗಳೂರು-ಚೆನ್ನೈ ಕಂಪನಿಗಳು, ಸ್ಲೀಪರ್ ರೈಲು ವಿತರಣೆ ವಿಳಂಬ -
ಭಾರತದ ಏಕೈಕ ರೈಲು ಸಂಪರ್ಕವಿಲ್ಲದ ರಾಜ್ಯ ಸಿಕ್ಕಿಂ: ಕಾರಣ ಮತ್ತು ಪ್ರಯಾಣ ಮಾರ್ಗಗಳ ವಿವರ -
Mysuru-Nanjangud special train: ನಂಜನಗೂಡು ದೊಡ್ಡ ಜಾತ್ರೆಗೆ ಮೈಸೂರಿನಿಂದ ವಿಶೇಷ ರೈಲು ಸೇವೆ: ಸಚಿವ ವಿ.ಸೋಮಣ್ಣ ಮಾಹಿತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ












Click it and Unblock the Notifications