Railway Good News: ಈ ವಿಶೇಷ ರೈಲುಗಳ ಸೇವೆ ವಿಸ್ತರಣೆ, ಪರಿಷ್ಕೃತ ವೇಳಾಪಟ್ಟಿ ವಿವರ
Indian Railways: ಭಾರತೀಯ ರೈಲ್ವೆ ವ್ಯಾಪ್ತಿಯ ನೈಋತ್ಯ ರೈಲ್ವೆ ವಿಭಾಗದಿಂದ ಶಬರಿಮಲೆ ಯಾತ್ರೆ ಮತ್ತು ಪೊಂಗಲ್ ಹಬ್ಬದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ಹಿನ್ನೆಲೆಯಲ್ಲಿ ವಿಶೇಷ ರೈಲುಗಳ ಅವಧಿ ವಿಸ್ತರಣೆ ಮಾಡಲಾಗಿದೆ. ಇದರೊಂದಿಗೆ ಬಾಗ್ಮತಿ ಎಕ್ಸ್ಪ್ರೆಸ್ಗೆ ರೈಲಿನ ತಾತ್ಕಾಲಿಕ ನಿಲುಗಡೆ ಘೋಷಿಸಲಾಗಿದೆ ಎಂದು ರೈಲ್ವೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಶಬರಿಮಲೆ ಯಾತ್ರೆ ಮತ್ತು ಮುಂಬರುವ ಪೊಂಗಲ್ ಹಬ್ಬದ ಕಾರಣಕ್ಕೆ ಪ್ರಯಾಣಿಕರ ಸಂಚಾರ ಹೆಚ್ಚಿರುತ್ತದೆ. ಇದನ್ನು ಗಮನದಲ್ಲಿಟ್ಟುಕೊಂಡು 2026ರ ಜನವರಿಯಲ್ಲಿ ಹಲವು ವಾರಾಂತ್ಯ ವಿಶೇಷ ರೈಲುಗಳ ಸಂಚಾರ ವಿಸ್ತರಿಸಲಾಗಿದೆ. ಶಬರಿಮಲೆ ಭಕ್ತರಿಗಾಗಿ ಕೆಲವು ವಿಶೇಷ ರೈಲುಗಳ ಸೇವೆಯನ್ನು ಡಿಸೆಂಬರ್ 2025 ನಂತರವೂ ಮುಂದುವರಿಸಲು ನಿರ್ಧಾರ ಕೈಗೊಳ್ಳಲಾಗಿದೆ. ಈ ಕೆಳಗಿನ ರೈಲುಗಳು ಹೊಸ ವೇಳಾಪಟ್ಟಿಯಂತೆ ಕಾರ್ಯಾಚರಣೆ ನಡೆಸಲಿವೆ.

2025 ಡಿಸೆಂಬರ್ 28ರವರೆಗೆ ಮಾತ್ರ ನಡೆಯಬೇಕಾಗಿದ್ದ ಹುಬ್ಬಳ್ಳಿ-ಕೊಲ್ಲಂ ವಿಶೇಷ ರೈಲು (07313) ಈಗ 2026ರ ಜನವರಿ 4 ರಿಂದ 25ರವರೆಗೆ ವಿಸ್ತರಣೆ ಮಾಡಲಾಗಿದೆ. ಪರಿಷ್ಕೃತ ವೇಳಾಪಟ್ಟಿಯ ಪ್ರಕಾರ, ಈ ರೈಲು ಈಗ ಕೊಲ್ಲಂ ಜಂಕ್ಷನ್ಗೆ ಮಧ್ಯಾಹ್ನ 13:15ಕ್ಕೆ ತಲುಪಲಿದೆ.
ಕೊಲ್ಲಂ-ಹುಬ್ಬಳ್ಳಿ ವಿಶೇಷ ಎಕ್ಸ್ಪ್ರೆಸ್ ರೈಲು (07314) ಮುಂದಿನ ಜನವರಿ 5 ರಿಂದ 26ರವರೆಗೆ ಸಂಚರಿಸಲಿದೆ. ಬೆಂಗಳೂರಿನಿಂದ ತಿರುವನಂತಪುರ ಉತ್ತರಕ್ಕೆ ಓಡುವ ಬೆಂಗಳೂರು ಎಸ್ಎಂವಿಟಿ-ತಿರುವನಂತರಪುರ ವಿಶೇಷ ಎಕ್ಸ್ಪ್ರೆಸ್ ರೈಲು (06523) ಮತ್ತು ತಿರುವನಂತಪುರದಿಂದ- ಬೆಂಗಳೂರು ಎಸ್ಎಂವಿಟಿ ರೈಲು (06524) ವಿವಿಧ ರೈಲುಗಳ ಸೇವೆಯನ್ನೂ ಜನವರಿ ಅಂತ್ಯದವರೆಗೂ ವಿಸ್ತರಿಸಲಾಗಿದೆ.
ಬಾಗ್ಮತಿ ಎಕ್ಸ್ಪ್ರೆಸ್ಗೆ ತಾತ್ಕಾಲಿಕ ನಿಲುಗಡೆ
ಈ ಮಧ್ಯೆ, ಈಸ್ಟ್ ಸೆಂಟ್ರಲ್ ರೈಲ್ವೆ ನೀಡಿರುವ ಮಾಹಿತಿಯಂತೆ ದಭಾಂಗ-ಮೈಸೂರು-ದರ್ಭಾಂಗ ಬಾಗ್ಮತಿ ಸಾಪ್ತಾಹಿಕ ಎಕ್ಸ್ಪ್ರೆಸ್ ರೈಲುಗಳಿಗೆ (12577/12578) ಪಾಟ್ನಾ ಸಾಹೇಬ್ ನಿಲ್ದಾಣದಲ್ಲಿ ಎರಡು ನಿಮಿಷಗಳ ತಾತ್ಕಾಲಿಕ ನಿಲುಗಡೆ ನೀಡಲಿದೆ. ಈ ನಿಲುಗಡೆ ನಿಯಮವು ಇದೇ 2025 ಡಿಸೆಂಬರ್ 19ರಿಂದ ಜನವರಿ 2 ರವರೆಗಿನ ಅವಧಿಗೆ ಮಾತ್ರವೇ ಅನ್ವಯವಾಗಲಿದೆ.
ಈ ತಾತ್ಕಾಲಿಕ ನಿಲುಗಡೆ ಶ್ರೀ ಗುರು ಗೋವಿಂದ್ ಸಿಂಗ್ ಜೀ ಮಹಾರಾಜರ 359ನೇ ಜಯಂತಿ ಆಚರಣೆಯ ಅಂಗವಾಗಿ ಹೆಚ್ಚಿನ ಜನರ ಸಂಚಾರ ಇರುವುದನ್ನು ಗಮನಿಸಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ. ಪರಿಷ್ಕೃತ ವೇಳಾಪಟ್ಟಿಯ ಪ್ರಕಾರ ದರ್ಭಾಂಗ ಬಾಗ್ಮತಿ ಸಾಪ್ತಾಹಿಕ ಎಕ್ಸ್ಪ್ರೆಸ್ ರೈಲು (12577) ಪಾಟ್ನಾ ಸಾಹೇಬ್ಗೆ ರಾತ್ರಿ 19:41 ಗಂಟೆಗೆ ಆಗಮಿಸಿ 19:43ಕ್ಕೆ ಅಲ್ಲಿಂದ ಹೊರಡುತ್ತದೆ. ಅದೇ ರೀತಿ ಮರಳಿ ಬರುವ ರೈಲು (12578) ರಾತ್ರಿ 23:23 ಗಂಟೆಗೆ ಇದೇ ನಿಲ್ದಾಣಕ್ಕೆ ಬಂದು 23:25ಕ್ಕೆ ಅಲ್ಲಿಂದ ಹೊರಡುತ್ತದೆ ಎಂದು ನೈಋತ್ಯ ರೈಲ್ವೆ ವಿಭಾಗದ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಮಂಜುನಾಥ್ ಕನಮಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
New Railway Line: 6000 ಕಿಮೀ ರೈಲ್ವೆ ಜಾಲ ವಿಸ್ತರಣೆ, 100 ಯೋಜನೆಗಳ ಜಾರಿಗೆ ₹1.53 ಲಕ್ಷ ಕೋಟಿ ಹೂಡಿಕೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ












Click it and Unblock the Notifications