Indian Railways: ಮಂಗಳೂರಿನಿಂದ ಮುಂಬೈಗೆ ವಿಶೇಷ ರೈಲು- ವೇಳಾಪಟ್ಟಿ, ಮಾಹಿತಿ, ವಿವರ

ನವದೆಹಲಿ, ಏಪ್ರಿಲ್‌ 06: ಮಂಗಳೂರು ಜಂಕ್ಷನ್‌ನಿಂದ ಮುಂಬೈನ ಲೋಕಮಾನ್ಯ ತಿಲಕ್ ಟರ್ಮಿನಸ್‌ಗೆ ಏಕಮುಖ ವಿಶೇಷ ರೈಲನ್ನು ಭಾರತೀಯ ರೈಲ್ವೆ ಇಲಾಖೆ ಘೋಷಿಸಿದೆ. ಈ ಮೂಲಕ ಮಂಗಳೂರಿನಿಂದ ಮುಂಬೈಗೆ ಪ್ರಯಾಣಿಸುವ ಜನರು ಈಗ ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ. 06007 ಸಂಖ್ಯೆಯ ರೈಲನ್ನು ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಕಡಿಮೆ ಮಾಡಲು ಆರಂಭಿಸಲಾಗುತ್ತಿದೆ.

ಮೂಲಗಳ ಪ್ರಕಾರ, ಮಂಗಳೂರು ಜಂಕ್ಷನ್‌ನಿಂದ ಮುಂಬೈನ ಲೋಕಮಾನ್ಯ ತಿಲಕ್ ಟರ್ಮಿನಸ್‌ಗೆ ಹೊರಡುವ ವಿಶೇಷ ರೈಲು ಮಂಗಳೂರಿನಿಂದ ಏಪ್ರಿಲ್‌ 8ರಂದು ಸಂಜೆ 6.10ಕ್ಕೆ ಹೊರಟು 9ರಂದು ಮಧ್ಯಾಹ್ನ 1.15ಕ್ಕೆ ಮುಂಬೈ ತಲುಪಲಿದೆ.

 Indian Railways: Mangaluru to Mumbai Special Train- Timetable, Information, Details

ಸುರತ್ಕಲ್, ಉಡುಪಿ, ಕುಂದಾಪುರ, ಮೂಕಾಂಬಿಕಾ ರಸ್ತೆ, ಬೈಂದೂರು, ಭಟ್ಕಳ, ಮುರುಡೇಶ್ವರ, ಕುಮಟಾ, ಕಾರವಾರ, ಕಾನಕೋಣ, ಮಡಗಾಂವ್, ಕರ್ಮಾಲಿ, ಕುಡಾಲ್, ಕಂಕಾವಿ, ರತ್ನಗಿರಿ, ಸಂಗಮೇಶ್ವರ ರಸ್ತೆ, ಸವರ್ದ, ಚಿಪ್ಳೂನ್, ಖೇಡ್, ವೀರ್, ರೋಹಾ, ಪನ್ವೆಲ್ ಮತ್ತು ಥಾಣೆ ಸೇರಿದಂತೆ ಈ ರೈಲು ಮಾರ್ಗದುದ್ದಕ್ಕೂ ಹಲವಾರು ನಿಲುಗಡೆಗಳನ್ನು ಹೊಂದಿರುತ್ತದೆ.

ಸಾಮಾನ್ಯ ರೈಲುಗಳಲ್ಲಿ ಪ್ರಯಾಣಿಕರ ದಟ್ಟಣೆಯಿಂದ ತೊಂದರೆ ಅನುಭವಿಸುತ್ತಿರುವ ಮಂಗಳೂರಿನ ಜನತೆಗೆ ಈ ವಿಶೇಷ ರೈಲಿನ ಘೋಷಣೆ ವರದಾನವಾಗಿದೆ. ಈ ಏಕಮುಖ ರೈಲಿನೊಂದಿಗೆ, ಇತರ ರೈಲುಗಳ ಮೇಲಿನ ಹೊರೆಯನ್ನು ಕಡಿಮೆ ಮಾಡಲು ಮತ್ತು ಪ್ರಯಾಣಿಕರಿಗೆ ತೊಂದರೆಯಿಲ್ಲದ ಪ್ರಯಾಣವನ್ನು ಒದಗಿಸಲು ಅಧಿಕಾರಿಗಳು ಆಶಿಸಿದ್ದಾರೆ.

 Indian Railways: Mangaluru to Mumbai Special Train- Timetable, Information, Details

ಮಂಗಳೂರಿನಿಂದ ಮುಂಬೈಗೆ ತೆರಳಬೇಕಿರುವ ಪ್ರಯಾಣಿಕರು ತಮ್ಮ ಟಿಕೆಟ್‌ಗಳನ್ನು ಮುಂಚಿತವಾಗಿ ಕಾಯ್ದಿರಿಸಲು ಸೂಚಿಸಲಾಗಿದೆ. ಪ್ರಯಾಣಿಸುವಾಗ ಎಲ್ಲಾ COVID-19 ಪ್ರೋಟೋಕಾಲ್‌ಗಳನ್ನು ಅನುಸರಿಸಲು ಮತ್ತು ಅಗತ್ಯವಿರುವ ಎಲ್ಲಾ ದಾಖಲೆಗಳು ತೆಗೆದುಕೊಂಡು ಹೋಗಲು ಮನವಿ ಮಾಡಲಾಗಿದೆ. ಗುರುತಿನ ಪುರಾವೆಗಳನ್ನು ಕೊಂಡೊಯ್ಯಲು ಅಧಿಕಾರಿಗಳು ಪ್ರಯಾಣಿಕರನ್ನು ಒತ್ತಾಯಿಸಿದ್ದಾರೆ.

ದಿ ಹಿಂದೂ ಪತ್ರಿಕೆ ಪ್ರಕಾರ, ರೈಲು ಒಂದು ಎಸಿ 2-ಟೈರ್ ಕೋಚ್, ಒಂದು ಎಸಿ 3-ಟೈರ್ ಕೋಚ್, ಆರು ಸ್ಲೀಪರ್ ಕ್ಲಾಸ್ ಕೋಚ್‌ಗಳು, ಒಂಬತ್ತು ಸಾಮಾನ್ಯ ಎರಡನೇ ದರ್ಜೆಯ ಕೋಚ್‌ಗಳು ಮತ್ತು ಎರಡು ಲಗೇಜ್-ಕಮ್-ಬ್ರೇಕ್ ವ್ಯಾನ್ ಕೋಚ್‌ಗಳನ್ನು ಒಳಗೊಂಡಿರುತ್ತದೆ.

 Indian Railways: Mangaluru to Mumbai Special Train- Timetable, Information, Details

13 ನೇ ವಂದೇ ಭಾರತ್ ಎಕ್ಸ್‌ಪ್ರೆಸ್

ಭಾರತೀಯ ರೈಲ್ವೇ ಈ ವಾರ 13 ನೇ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಪರಿಚಯಿಸಲಿದೆ. ಏಪ್ರಿಲ್ 08, 2023 ರಂದು ತಮಿಳುನಾಡಿಗೆ ಭೇಟಿ ನೀಡುವ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಈ ಸ್ಥಳೀಯ ಸೆಮಿ-ಹೈ ಸ್ಪೀಡ್ ರೈಲಿಗೆ ಫ್ಲ್ಯಾಗ್ ಆಫ್ ಮಾಡಲು ನಿರ್ಧರಿಸಿದ್ದಾರೆ.

ಈ ವಂದೇ ಭಾರತ್‌ ರೈಲು ಚೆನ್ನೈ ಮತ್ತು ಕೊಯಮತ್ತೂರು ನಡುವೆ ಕಾರ್ಯನಿರ್ವಹಿಸಲಿದೆ. ಎಂಜಿಆರ್ ಚೆನ್ನೈ ಸೆಂಟ್ರಲ್ ರೈಲ್ವೇ ನಿಲ್ದಾಣದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಧಾನಿಯವರು ಈ ಹೊಸ ರೈಲನ್ನು ಉದ್ಘಾಟಿಸಲಿದ್ದಾರೆ. ಇದು ದಕ್ಷಿಣ ರೈಲ್ವೆ (SR) ವಲಯಕ್ಕೆ ಎರಡನೇ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಆಗಲಿದೆ.

ಚೆನ್ನೈ ಮತ್ತು ಕೊಯಮತ್ತೂರು ನಡುವೆ ಸಂಚರಿಸುವ ರೈಲು, ಮೂರು ನಿಲ್ದಾಣಗಳಲ್ಲಿ ನಿಲ್ಲುವ ಸಾಧ್ಯತೆಯಿದೆ. ತಿರುಪ್ಪೂರ್, ಈರೋಡ್ ಜಂಕ್ಷನ್ ಮತ್ತು ಸೇಲಂ ಜಂಕ್ಷನ್‌ನಲ್ಲಿ ನಿಲುಗಡೆ ಆಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಚೆನ್ನೈ-ಕೊಯಮತ್ತೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು 6 ಗಂಟೆ 10 ನಿಮಿಷಗಳಲ್ಲಿ 495.28 ಕಿಮೀ ದೂರವನ್ನು ಕ್ರಮಿಸುವ ಸಾಧ್ಯತೆಯಿದೆ.

ಅದೇ ದಿನ, ಪ್ರಧಾನಿ ನರೇಂದ್ರ ಮೋದಿ ಅವರು ಸಿಕಂದರಾಬಾದ್ ಮತ್ತು ತಿರುಪತಿ ನಡುವೆ ದೇಶದ 12 ನೇ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಸಿಕಂದರಾಬಾದ್ ರೈಲು ನಿಲ್ದಾಣದಿಂದ ಚಾಲನೆ ನೀಡಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+