ಷೇರು ಮಾರುಕಟ್ಟೆಯಲ್ಲಿ ದೀಪಾವಳಿ: ಬಜೆಟ್ ದಿನ ಆರಂಭದಲ್ಲೇ ಹೊಸ ಇತಿಹಾಸ!
ಮೋದಿ ಸರ್ಕಾರ 3ನೇ ಬಾರಿಗೆ ಅಧಿಕಾರಕ್ಕೆ ಬಂದ ನಂತರ ಹೊಸ ಬಜೆಟ್ ಮಂಡನೆ ಆಗ್ತಿದೆ. ಹೀಗೆ ಬಜೆಟ್ ಹಿನ್ನೆಲೆಯಲ್ಲಿ ಷೇರು ಮಾರುಕಟ್ಟೆ ಕೂಡ ಸಾಕಷ್ಟು ಏರಿಳಿತಕ್ಕೆ ಇಂದು ಸಾಕ್ಷಿ ಆಗಲಿದ್ದು, ಆರಂಭದಲ್ಲೇ ಭಾರತೀಯ ಷೇರು ಮಾರುಕಟ್ಟೆ ಹೊಸ ಇತಿಹಾಸ ನಿರ್ಮಾಣ ಮಾಡಿದೆ. ಹಾಗಾದ್ರೆ ಇದೀಗ ಎಷ್ಟಿದೆ ಷೇರು ಮಾರುಕಟ್ಟೆಯ ಸೂಚ್ಯಂಕ? ಹೂಡಿಕೆದಾರರ ಜೇಬು ತುಂಬಿಸುತ್ತಾ ಷೇರುಪೇಟೆ? ಮುಂದೆ ಓದಿ.
ಹೌದು, ಷೇರು ಮಾರುಕಟ್ಟೆ ಇಂದು ಆರಂಭದಲ್ಲೇ ಭರ್ಜರಿ ಏರಿಕೆ ಕಂಡಿದೆ. ಆರಂಭದಲ್ಲಿ ಷೇರು ಮಾರುಕಟ್ಟೆ ಭಾರಿ ಏರಿಕೆಯನ್ನ ಕಂಡಿತ್ತು. ಈ ಮೂಲಕ ಸಾರ್ವಕಾಲಿಕ ಎತ್ತರಕ್ಕೂ ಷೇರು ಮಾರುಕಟ್ಟೆ ತಲುಪಿತ್ತು. ಇಂದು ಷೇರುಪೇಟೆ ಆರಂಭ ಆದಾಗ ಸೆನ್ಸೆಕ್ಸ್ ಸುಮಾರು 222 ಅಂಕ ಏರಿಕೆ ಕಂಡು ಬರೋಬ್ಬರಿ 80,724 ಅಂಕಕ್ಕೆ ತಲುಪಿತ್ತು. ಹಾಗೇ ನಿಫ್ಟಿ-50 ಕೂಡ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿ ಸಾರ್ವಕಾಲಿಕ ಎತ್ತರಕ್ಕೆ ಅಂದರೆ 24,568 ಅಂಕ ಗಳಿಕೆ ಮಾಡಿತ್ತು. ಹೀಗಾಗಿ ಇಂದು ಷೇರು ಮಾರುಕಟ್ಟೆಯಲ್ಲಿ ಮತ್ತಷ್ಟು ಏರಿಳಿತ ನಿರೀಕ್ಷೆ ಮಾಡಲಾಗಿದೆ.

ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ
2024ರ ಫೆಬ್ರವರಿ ತಿಂಗಳಲ್ಲಿ ಚುನಾವಣೆಗೆ ಮೊದಲು ಬಜೆಟ್ ಮಂಡನೆ ಮಾಡಿದ್ದ ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇದೀಗ ಪೂರ್ಣ ಪ್ರಮಾಣದ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಸತತವಾಗಿ ಬಜೆಟ್ ಮಂಡನೆ ಮಾಡುತ್ತಿರುವ ಕಾರಣಕ್ಕೆ ಇದೀಗ ಕೇಂದ್ರ ಸಚಿವರ ಮೇಲೆ ನಿರೀಕ್ಷೆಗಳ ಭಾರ ಇದೆ. ಹಾಗೇ ಷೇರು ಮಾರುಕಟ್ಟೆ ಕೂಡ ಇಂದು ಬಜೆಟ್ನಲ್ಲಿ ಏನಾಗುತ್ತೆ? ಅನ್ನೋದನ್ನ ಕಾದು ನೋಡುತ್ತಿದೆ. ಹೀಗಾಗಿ ಆರಂಭದಲ್ಲಿ ಷೇರು ಮಾರುಕಟ್ಟೆ ಏರಿಕೆ ಕಂಡರೂ ನಂತರ ಕುಸಿತ ಕಂಡಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications