ದೇಶಿಯ ಕಲ್ಲಿದ್ದಲು ಉತ್ಪಾದನೆ ಈ ವರ್ಷ ಶೇ.18ರಷ್ಟು ಹೆಚ್ಚಳವಾಗಿದೆ: ಪ್ರಹ್ಲಾದ್ ಜೋಶಿ
ಕೋಲ್ಕತಾ, ನವೆಂಬರ್24 : ದೇಶಿಯ ಕಲ್ಲಿದ್ದಲು ಉತ್ಪಾದನೆ ಕಳೆದ ಸಾಲಿಗಿಂತ ಶೇ 18% ರಷ್ಟು ಪ್ರಗತಿ ಸಾಧಿಸಿದೆ ಎಂದು ಕೇಂದ್ರ ಕಲ್ಲಿದ್ದಲು ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.
ಪಶ್ಚಿಮ ಬಂಗಾಳದ ಝಂಜ್ರಾ ಭೂಗತ ಕಲ್ಲಿದ್ದಲು ಗಣಿಗೆ ಭೇಟಿ ನೀಡಿದ ನಂತರ ಕಲ್ಲಿದ್ದಲು ಗಣಿಗಳ ಉತ್ಪಾದನೆ ಕುರಿತ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದಲ್ಲಿ ಅಕ್ಟೋಬರ್ 2022 ರ ಹೊತ್ತಿಗೆ ಭಾರತದ ಒಟ್ಟು ಕಲ್ಲಿದ್ದಲು ಉತ್ಪಾದನೆಯು ಶೇ 18% ರಷ್ಟು ಬೆಳವಣಿಗೆಯನ್ನು ದಾಖಲಿಸಿದ್ದು, 448 ಮಿಲಿಯನ್ ಟನ್ಗಳಷ್ಟು ತಲುಪಿದೆ. ಮಾರ್ಚ್, 2023 ರೊಳಗೆ ವಿದ್ಯುತ್ ಸ್ಥಾವರಗಳೊಂದಿಗೆ 45 MT ಸ್ಟಾಕ್ ಗುರಿಯನ್ನು ಸಾಧಿಸಬೇಕೆಂದು ಕಲ್ಲಿದ್ದಲು ಸಚಿವ ಪ್ರಲ್ಹಾದ್ ಜೋಶಿ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕೋಲ್ ಇಂಡಿಯಾ ಲಿಮಿಟೆಡ್ (ಸಿಐಎಲ್) ನಿಂದ ಕಲ್ಲಿದ್ದಲು ಉತ್ಪಾದನೆಯ ಬೆಳವಣಿಗೆಯು ಶೇ 17% ಕ್ಕಿಂತ ಹೆಚ್ಚಾಗಿದೆ. 2022 ರ ನವೆಂಬರ್ ಅಂತ್ಯದ ವೇಳೆಗೆ ದೇಶೀಯ ಕಲ್ಲಿದ್ದಲು ಆಧಾರಿತ ಸ್ಥಾವರಗಳಲ್ಲಿ 30 ಮಿಲಿಯನ್ ಟನ್ಗಳಷ್ಟು ದಾಸ್ತಾನು ನಿರ್ಮಿಸಲು ಯೋಜಿಸುತ್ತಿದೆ. 2023 ರ ಮಾರ್ಚ್ 31 ರ ಅಂತ್ಯದ ವೇಳೆಗೆ ಥರ್ಮಲ್ ಸ್ಟಾಕ್ ಅನ್ನು ನಿರ್ಮಿಸಲು ಯೋಜಿಸಿದ್ದು, ವಿದ್ಯುತ್ ಸ್ಥಾವರಗಳ (TPP) ಸ್ಟಾಕ್ 45 ಮಿಲಿಯನ್ ಟನ್ಗಳಿಗೆ ಏರಲಿದೆ ಎಂದು ಪ್ರಲ್ಹಾದ್ ಜೋಶಿ ಇದೇ ವೇಳೆ ಹೇಳಿದ್ದಾರೆ.

ಪ್ರಸಕ್ತ ಸಾಲಿನಲ್ಲಿ ಮೊದಲ ಏಳು ತಿಂಗಳುಗಳಲ್ಲಿ, ದಿನಕ್ಕೆ ಸರಾಸರಿ ಶೇ 9% ಬೆಳವಣಿಗೆ ಕಂಡುಬಂದಿದೆ, ಇದು ಹೆಚ್ಚಿನ ಪ್ರಮಾಣದ ಕಲ್ಲಿದ್ದಲನ್ನು ಸಾಗಿಸಲು ಮತ್ತು ವಿದ್ಯುತ್ ಸ್ಥಾವರಗಳಲ್ಲಿ ದಾಸ್ತಾನುಗಳನ್ನು ನಿರ್ಮಿಸಲು ಸಹಾಯ ಮಾಡುತ್ತದೆ.
ವಿದ್ಯುತ್ ಸಚಿವಾಲಯವು ರೈಲು-ಕಮ್-ರಸ್ತೆ ವಿಧಾನದ ಮೂಲಕ ಕಲ್ಲಿದ್ದಲು ಸಾಗಣೆಯನ್ನು ಹೆಚ್ಚಿಸುತ್ತಿದೆ. ಸುಗಮ ಕಲ್ಲಿದ್ದಲು ಸಾಗಣೆಗಾಗಿ ಸಮುದ್ರ ಮಾರ್ಗದ ಮೂಲಕ ಕಲ್ಲಿದ್ದಲು ಸಾಗಣೆಯನ್ನು ಉತ್ತೇಜಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಬಂದರುಗಳು, ಹಡಗು ಮತ್ತು ಜಲಮಾರ್ಗಗಳ ಸಚಿವಾಲಯ, ವಿದ್ಯುತ್ ಸಚಿವಾಲಯ, ರೈಲ್ವೆ ಮತ್ತು ಕಲ್ಲಿದ್ದಲು ಸಚಿವಾಲಯಗಳು ಒಟ್ಟಾಗಿ ಕೆಲಸ ಮಾಡುತ್ತಿವೆ.

ಪೂರ್ವ ಕರಾವಳಿಯ ವಿದ್ಯುತ್ ಸ್ಥಾವರಗಳಿಗೆ ರೈಲು-ಸಮುದ್ರ ಮಾರ್ಗದ ಮೂಲಕ ಸಾಗಣೆ ಮಾಡಲಾಗುತ್ತಿದೆ. ದೇಶದ ಪೂರ್ವ ಭಾಗದಲ್ಲಿರುವ ಕಲ್ಲಿದ್ದಲು ಗಣಿಗಳಿಂದ ಪಶ್ಚಿಮ ಕರಾವಳಿ ಅಥವಾ ದೇಶದ ಉತ್ತರ ಭಾಗದಲ್ಲಿರುವ ವಿದ್ಯುತ್ ಸ್ಥಾವರಗಳಿಗೆ ಕಲ್ಲಿದ್ದಲು ಸಾಗಣೆಯನ್ನು ಸರ್ಕಾರ ಉತ್ತೇಜಿಸುತ್ತಿದೆ. ಮುಂದಿನ ವರ್ಷದ ಆರಂಭದಲ್ಲಿ ಆರ್ಎಸ್ಆರ್ ಮೂಲಕ ಪಶ್ಚಿಮ ಕರಾವಳಿ ಸ್ಥಾವರಗಳಿಗೆ ಕಲ್ಲಿದ್ದಲು ಸಾಗಣೆಯನ್ನು ಪ್ರಾರಂಭಿಸಲು ಯೋಜಿಸಲಾಗಿದೆ ಎಂದು ಹೇಳಿದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications