ಕಾಲೇಜ್ ವಿದ್ಯಾರ್ಥಿಗಳಿಗೆ ಅತಿದೊಡ್ಡ ಜೈವಿಕ ತಂತ್ರಜ್ಞಾನ ರಸಪ್ರಶ್ನೆ
ಬೆಂಗಳೂರು, ಅ 22: ಕರ್ನಾಟಕ ಸರ್ಕಾರದ ಎಲೆಕ್ಟ್ರಾನಿಕ್ಸ್, ಐ.ಟಿ. ಬಿ.ಟಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು ತನ್ನ ಹೆಮ್ಮೆಯ ಸಮಾವೇಶವಾದ 23ನೇ ಆವೃತ್ತಿಯ 'ಬೆಂಗಳೂರು ತಂತ್ರಜ್ಞಾನ ಶೃಂಗಸಭೆ' ಯನ್ನು (ಬಿಟಿಎಸ್) 2020ರ ನವೆಂಬರ್ 19ರಿಂದ 21ರವರೆಗೆ ನಡೆಸಲು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ.
ಈ ಬಾರಿಯ ಶೃಂಗಸಭೆಯ ಮುಖ್ಯ ಆಶಯವು 'ಭವಿಷ್ಯ ಈಗಲೇ' (Next is Now) ಎಂದು ನಿರ್ಧರಿಸಲಾಗಿದೆ. ಈ ಡಿಜಿಟಲ್ ಸಮಾವೇಶವು ವಿವಿಧ ಕ್ಷೇತ್ರಗಳಲ್ಲಿನ ಅತ್ಯಾಧುನಿಕ ತಂತ್ರಜ್ಞಾನದ ಇತ್ತೀಚಿನ ಸಂಶೋಧನೆಗಳು ಮತ್ತು ಸಂವಾದಗಳ ಬಗ್ಗೆ ಬೆಳಕು ಚೆಲ್ಲಲಿದೆ. 'ಬಿಟಿಎಸ್'ನಲ್ಲಿ ನಡೆಯಲಿರುವ ಜೈವಿಕ ರಸಪ್ರಶ್ನೆ (BioQuiz) ಸ್ಪರ್ಧೆಯು, ಶೃಂಗಸಭೆಯ ಪ್ರಮುಖ ಘಟನೆಯಾಗಿರಲಿದೆ.
ಜೈವಿಕ ತಂತ್ರಜ್ಞಾನ ಕ್ಷೇತ್ರದಲ್ಲಿ ನಡೆಯುವ ದೇಶದ ಏಕೈಕ ರಾಜ್ಯಮಟ್ಟದ ರಸಪ್ರಶ್ನೆ ಕಾರ್ಯಕ್ರಮ ಇದಾಗಿದೆ. ಜೈವಿಕ ತಂತ್ರಜ್ಞಾನ ಕ್ಷೇತ್ರದಲ್ಲಿನ ಸದ್ಯದ ವಿದ್ಯಮಾನ ಮತ್ತು ಆಗುಹೋಗುಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವುದು ಮತ್ತು ಜೈವಿಕ ತಂತ್ರಜ್ಞಾನ ವಿಷಯದ ಬಗ್ಗೆ ಆಳವಾದ ಜ್ಞಾನ ಸಂಪಾದಿಸುವಂತೆ ವಿದ್ಯಾರ್ಥಿಗಳಿಗೆ ಉತ್ತೇಜನ ನೀಡುವುದು ಈ ರಸಪ್ರಶ್ನೆ ಕಾರ್ಯಕ್ರಮದ ಮುಖ್ಯ ಗುರಿಯಾಗಿದೆ.

ಜೈವಿಕ ತಂತ್ರಜ್ಞಾನ ಕ್ಷೇತ್ರದಲ್ಲಿನ ಕರ್ನಾಟಕದ ಪ್ರತಿಭೆಗಳ ಅನಾವರಣಕ್ಕೆ ಜೈವಿಕ ರಸಪ್ರಶ್ನೆ ಕಾರ್ಯಕ್ರಮವು ವೇದಿಕೆ ಕಲ್ಪಿಸಿಕೊಡಲಿದೆ. ರಾಜ್ಯದಲ್ಲಿನ ಎಲ್ಲ ಕಾಲೇಜುಗಳ ಪದವಿಪೂರ್ವ ವಿದ್ಯಾರ್ಥಿಗಳು ಈ ರಸಪ್ರಶ್ನೆ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು. ವಿದ್ಯಾರ್ಥಿಗಳು ತಮ್ಮದೇ ಸಾಧನಗಳಲ್ಲಿ ಆನ್ಲೈನ್ ಕ್ವಿಜ್ನಲ್ಲಿ ಭಾಗವಹಿಸಲು ಲಿಂಕ್ ಕೊನೆಯಲ್ಲಿ ಕೊಡಲಾಗಿದೆ. ಅಂತರ್ಜಾಲ ತಾಣದಲ್ಲಿ ತಮ್ಮ ಹೆಸರನ್ನು ದಾಖಲಿಸಬಹುದು. ನೋಂದಣಿಯು 2020ರ ಅಕ್ಟೋಬರ್ 28ರಿಂದ ಆರಂಭಗೊಳ್ಳಲಿದೆ.
ರಸಪ್ರಶ್ನೆ ಕಾರ್ಯಕ್ರಮವು ಆನ್ಲೈನ್ನಲ್ಲಿ 3 ಸುತ್ತುಗಳನ್ನು ಒಳಗೊಂಡಿರುತ್ತದೆ. ವಿದ್ಯಾರ್ಥಿಗಳನ್ನು 6 ವಲಯಗಳನ್ನಾಗಿ ವಿಂಗಡಿಸಲಾಗುವುದು. ಈ 6 ವಲಯಗಳ ಸುತ್ತಿನ ಸ್ಪರ್ಧೆಯ ವಿಜೇತರು, ಪ್ರಶಸ್ತಿ ಪಡೆಯಲು ಅಂತಿಮ ಸುತ್ತಿನ ವರ್ಚುವಲ್ ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಹರಾಗುತ್ತಾರೆ.
Recommended Video
* ಮೊದಲ ಸುತ್ತು: ಪ್ರಾಥಮಿಕ ಹಂತದ ಆನ್ಲೈನ್ ಪರೀಕ್ಷೆ (2020ರ ನವೆಂಬರ್ 1)
* ಎರಡನೆ ಸುತ್ತು: ಮೊದಲ ಸುತ್ತಿನಲ್ಲಿ ಅರ್ಹರಾದವರಿಗೆ ವಲಯ ಹಂತದ ಅಂತಿಮ ಸ್ಪರ್ಧೆ ( 2020ರ ನವೆಂಬರ್ 6, 7 ಮತ್ತು 8)
* ಮೂರನೇ ಸುತ್ತು: 6 ವಲಯಗಳಿಂದ ವಿಜೇತರಾದ 6 ವಿದ್ಯಾರ್ಥಿಗಳಿಗಾಗಿ ಅಂತಿಮ ಸ್ಪರ್ಧೆ (2020, ನವೆಂಬರ್ 10)
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications