ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗೌರಿ ಹತ್ಯೆ : ಇಂದ್ರಜಿತ್ ಲಂಕೇಶ್ ಪತ್ರಿಕೆ ಸಂಪಾದಕರ ವಿಚಾರಣೆ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 28 : ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆಯನ್ನು ಎಸ್‌ಐಟಿ ಚುರುಕುಗೊಳಿಸಿದೆ. ಇಂದ್ರಜಿತ್ ಲಂಕೇಶ್ ಒಡೆತನದ ಪತ್ರಿಕೆಯ ಸಂಪಾದಕರನ್ನು ಎಸ್‌ಐಟಿ ವಿಚಾರಣೆ ನಡೆಸಿದೆ.

ಎಸ್‌ಐಟಿ ಪೊಲೀಸರು ಈಗಾಗಲೇ ಗೌರಿ ಲಂಕೇಶ್ ಸಹೋದರ ಇಂದ್ರಜಿತ್ ಲಂಕೇಶ್ ಅವರನ್ನು ವಿಚಾರಣೆ ನಡೆಸಿದ್ದರು. ತನಿಖೆಯನ್ನು ಮುಂದುವರೆಸಿರುವ ಪೊಲೀಸರು, ಇಂದ್ರಜಿತ್ ಲಂಕೇಶ್ ಒಡೆತನದ ಲಂಕೇಶ್ ಪತ್ರಿಕೆ ಸಂಪಾದಕರಾದ ಚಕ್ರವರ್ತಿ ಅವರನ್ನು ವಿಚಾರಣೆ ನಡೆಸಿದ್ದಾರೆ.

ತಂದೆ-ತಾಯಿ ಜೊತೆ ಎಸ್‌ಐಟಿ ಕಚೇರಿಗೆ ಬಂದ ಕುಣಿಗಲ್ ಗಿರಿತಂದೆ-ತಾಯಿ ಜೊತೆ ಎಸ್‌ಐಟಿ ಕಚೇರಿಗೆ ಬಂದ ಕುಣಿಗಲ್ ಗಿರಿ

 Indrajit Lankesh magazine editor Chakravarthy questioned by SIT

ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಗೌರಿ ಲಂಕೇಶ್ ತಾಯಿ ಇಂದಿರಾ ಅವರ ಹೇಳಿಕೆ ಪಡೆಯಲಾಗಿದೆ. ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ, ಅಗ್ನಿ ಶ್ರೀಧರ್, ಮುತ್ತಪ್ಪ ರೈ ಸೇರಿದಂತೆ ಅನೇಕರ ಹೇಳಿಕೆಗಳನ್ನು ದಾಖಲು ಮಾಡಿಕೊಂಡಿದ್ದಾರೆ.

ಗೌರಿ ಲಂಕೇಶ್ ಹತ್ಯೆ: ಅಗ್ನಿ ಶ್ರೀಧರ್, ಮುತ್ತಪ್ಪ ರೈ ಹೇಳಿಕೆ ದಾಖಲುಗೌರಿ ಲಂಕೇಶ್ ಹತ್ಯೆ: ಅಗ್ನಿ ಶ್ರೀಧರ್, ಮುತ್ತಪ್ಪ ರೈ ಹೇಳಿಕೆ ದಾಖಲು

ಸೆ.5ರಂದು ರಾಜರಾಜೇಶ್ವರಿ ನಗರದ ನಿವಾಸದ ಮುಂಭಾಗದಲ್ಲಿ ಗೌರಿ ಲಂಕೇಶ್ ಹತ್ಯೆ ನಡೆದಿತ್ತು. ಕರ್ನಾಟಕ ಸರ್ಕಾರ ಹತ್ಯೆ ಪ್ರಕರಣದ ತನಿಖೆಗೆ ಐಪಿಎಸ್ ಅಧಿಕಾರಿ ಬಿ.ಕೆ.ಸಿಂಗ್ ನೇತೃತ್ವದಲ್ಲಿ ಎಸ್‌ಐಟಿ ರಚನೆ ಮಾಡಿದೆ. ಇದುವರೆಗೂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರನ್ನು ಬಂಧಿಸಿಲ್ಲ.

English summary
SIT police questioned Indrajit Lankesh magazine editor Chakravarthy. A Special Investigations Team (SIT) set up by the Karnataka government to probe into the murder of Gauri Lankesh.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X