Tungabhadra Dam: ಭರ್ಜರಿ ಮಳೆ; ತುಂಗಭದ್ರಾ ಡ್ಯಾಮ್ಗೆ ಒಳ ಹರಿವು ಆರಂಭ: ಇಲ್ಲಿದೆ ಮಾಹಿತಿ
ಕೊಪ್ಪಳ, ಜೂ.06: ಏಳು ತಿಂಗಳ ನಂತರ ತುಂಗಭದ್ರಾ ಡ್ಯಾಮ್ಗೆ ಒಳ ಹರಿವು ಆರಂಭವಾಗಿದ್ದು, ರೈತರಲ್ಲಿ ಸಂತಸ ಮೂಡಿದೆ. ಕೊಪ್ಪಳ ತಾಲೂಕಿನ ಮುನಿರಾಬಾದ್ ನಲ್ಲಿ ತುಂಗಭದ್ರಾ ನದಿಗೆ ಅಡ್ಡಲಾಗಿ ಜಲಾಶಯ ನಿರ್ಮಾಣ ಮಾಡಲಾಗಿದೆ.
ತುಂಗಭದ್ರಾ ಡ್ಯಾಮ್ ತುಂಬಿದರೆ ಮೂರು ರಾಜ್ಯದ ಹತ್ತು ಜಿಲ್ಲೆಗಳ ಜನರ ಸಂತಸ ಹೆಚ್ಚಾಗುತ್ತದೆ. ಆದರೆ 2023 ರಲ್ಲಿ ರಾಜ್ಯದಲ್ಲಿ ಮಳೆಯಾಗದೇ ಭೀಕರ ಬರಗಾಲದಿಂದ ಡ್ಯಾಮ್ ಒಮ್ಮೆಯೂ ತುಂಬಿಲ್ಲ. ಹೀಗಾಗಿ ಬೇಸಿಗೆ ಸಮಯದಲ್ಲಿ ಎರಡನೇ ಬೆಳೆಗೆ ನೀರು ಸಿಗದೆ ರೈತರು ಪರದಾಡಿದ್ದರು. ಇದೀಗ ರಾಜ್ಯದಲ್ಲಿ ಮುಂಗಾರು ಆರಂಭವಾಗಿದ್ದು, ಕಳೆದ ಏಳು ತಿಂಗಳಿಂದ ಸ್ಥಗಿತವಾಗಿದ್ದ ಜಲಾಶಯದ ಒಳಹರಿವು ಇದೀಗ ಮತ್ತೆ ಆರಂಭವಾಗಿದೆ.

ತುಂಗಭದ್ರಾ ನದಿ 105 ಟಿಎಂಸಿ ನೀರು ಸಂಗ್ರಹ ಸಾಮರ್ಥವಿರುವ ಈ ಡ್ಯಾಮ್ನ ನೀರಿನ ಮೇಲೆಯೇ, ರಾಜ್ಯದ ಕೊಪ್ಪಳ, ರಾಯಚೂರು, ಬಳ್ಳಾರಿ, ವಿಜಯನಗರ ಜಿಲ್ಲೆಗಳ ಜನರು ನಿಂತಿದ್ದಾರೆ. ಇನ್ನೂ ನೆರೆಯ ತೆಲೆಂಗಾಣ, ಆಂಧ್ರ ಪ್ರದೇಶ ರಾಜ್ಯದ ಕೆಲ ಜಿಲ್ಲೆಯ ಜನರು ಇದೇ ನೀರಿನ ಮೇಲೆಯೇ ಅವಲಂಭಿತರಾಗಿದ್ದಾರೆ. ವರ್ಷದಲ್ಲಿ ಎರಡು ಬೆಳೆಗಳಿಗೆ ನೀರು ಬಿಡಬೇಕು ಮತ್ತು ಕುಡಿಯುವ ನೀರಿಗೆ ಅನಕೂಲವಾಗಲಿ ಎನ್ನುವ ಉದ್ದೇಶದಿಂದ ಜಲಾಶಯ ನಿರ್ಮಾಣ ಮಾಡಲಾಗಿತ್ತು. ಆದರೆ ಕಳೆದ ವರ್ಷ ಮಳೆ ಇಲ್ಲದೆ ಜನತೆ ನರಳಾಡುವಂತಹ ಪರಿಸ್ಥಿತಿಯೂ ನಿರ್ಮಾಣವಾಗಿತ್ತು. ಇನ್ನೂ, ಕೆಲ ವರ್ಷಗಳಲ್ಲಿ ನೂರಾರು ಟಿಎಂಸಿ ನೀರು ಹರಿದು ವ್ಯರ್ಥವಾಗಿ ಹೋಗಿದೆ.
ಈ ವರ್ಷ ಮುಂಗಾರು ಆರಂಭಕ್ಕಿಂತ ಮೊದಲೇ ರಾಜ್ಯದ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗಿದ್ದು, ರಾಜ್ಯದ ರೈತರು ಸಂತಸಗೊಂಡಿದ್ದಾರೆ. ಇನ್ನು, ಕಳೆದ ನಾಲ್ಕು ದಿನಗಳಿಂದ ತುಂಗಭದ್ರಾ ಜಲಾಶಯಕ್ಕೆ ಒಳ ಹರಿವು ಆರಂಭವಾಗಿದೆ. ಪ್ರತಿನಿತ್ಯ ನಾಲ್ಕುನೂರರಿಂದ ಐನೂರು ಕ್ಯೂಸೆಕ್ ನೀರು ಡ್ಯಾಮ್ಗೆ ಹರಿದು ಬರ್ತಿದ್ದು, ಬುಧವಾರ(ಜೂನ್ 05) ಡ್ಯಾಮ್ಗೆ 495 ಕ್ಯೂಸೆಕ್ ಒಳಹರಿವು ಇದೆ. ಇನ್ನು 3.34 ಟಿಎಂಸಿಗೆ ಕುಸಿದಿದ್ದ ನೀರಿನ ಸಾಮರ್ಥ್ಯ, ಇದೀಗ ಒಳಹರಿವು ಆರಂಭವಾದಾಗಿನಿಂದ 3.49 ಟಿಎಂಸಿ ಗೆ ಹೆಚ್ಚಿದೆ.
ಶಿವಮೊಗ್ಗ ಸೇರಿದಂತೆ ತುಂಗಭದ್ರಾ ನದಿ ಉಗಮದ ಸ್ಥಳದಲ್ಲಿ ಹೆಚ್ಚಿನ ಮಳೆಯಾದರೆ ಡ್ಯಾಂಗೆ ನೀರು ಬರುತ್ತದೆ. ಆದ್ರೆ, ನದಿ ಪಾತ್ರದಲ್ಲಿಯೇ ಮಳೆ ಕಡಿಮೆಯಾದ್ರೆ ಜಲಾಶಯಕ್ಕೆ ನೀರು ಬರುವುದು ಕಷ್ಟವಾಗಿದೆ. ನದಿ ಪಾತ್ರದಲ್ಲಿ ಉತ್ತಮ ಮಳೆಯಾದ್ರೆ ಮಾತ್ರ ಡ್ಯಾಮ್ ತುಂಬಲಿದೆ. ಕಳೆದ ವರ್ಷ ಡ್ಯಾಮ್ ಒಮ್ಮೆ ಕೂಡ ತುಂಬಿರಲಿಲ್ಲ. ಇದೀಗ ಡ್ಯಾಮ್ಗೆ ನೀರು ಬರುತ್ತಿರುವುದು ಜನರ ಸಂತಸ ಹೆಚ್ಚಿಸುತ್ತಿದೆ. ಈ ಬಾರಿ ಮಳೆ ಹೆಚ್ಚಾಗಿಜಲಾಶಯಗಳು ತುಂಬಲಿ ಎಂದು ಜನತೆ ಪ್ರಾರ್ಥಿಸುತ್ತಿದ್ದಾರೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications