ದೇಶದಲ್ಲಿ ಹಿಂದೂ- ಮುಸ್ಲಿಂ ಪ್ರತ್ಯೇಕವಾಗಿಸುವ ಪ್ರಯತ್ನ ಎಂದ ಬಿಜೆಪಿ ಪ್ರಭಾವಿ ನಾಯಕ
ಕಾಂಗ್ರೆಸ್ನವರಿಗೆ ವೀರ ಸಾವರ್ಕರ್ ಅವರನ್ನು ಬೈಯ್ಯದೇ ಇದ್ದರೆ ಸಮಾಧಾನವೇ ಆಗಲ್ಲ ಅನಿಸುತ್ತೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಜಗದೀಶ ಶೆಟ್ಟರ್ ಹೇಳಿದ್ದಾರೆ. ವೀರ ಸಾವರ್ಕರ್ ಬಗ್ಗೆ ಸಚಿವ ದಿನೇಶ ಗುಂಡೂರಾವ್ ವಿವಾದಾತ್ಮಕ ಹೇಳಿಕೆಗೆ ಟಾಂಗ್ ನೀಡಿದ್ದಾರೆ. ವೀರ ಸಾವರ್ಕರ್ ಅವರು ಬ್ರಿಟಿಷರ ವಿರುದ್ಧ ದಿಟ್ಟ ಹೋರಾಟ ಮಾಡಿದವರು. ಅವರು ಪ್ರಬಲ ಹಿಂದುತ್ವವಾದಿಯಾಗಿದ್ದರು. ಅವರಿಗೆ ವಿಧಿಸಿದ್ದ ಶಿಕ್ಷೆ ಸೋ ಕಾಲ್ಡ್ ಕಾಂಗ್ರೆಸ್ ಸ್ವಾತಂತ್ರ್ಯ ಹೋರಾಟಗಾರರಿಗೂ ನೀಡಿಲ್ಲ ಎಂದಿದ್ದಾರೆ.
ಕಾಂಗ್ರೆಸ್ಸಿನವರು ಕೇವಲ ಅಲ್ಪಸಂಖ್ಯಾತರ ಓಲೈಕೆ ಮಾಡುವ ಉದ್ದೇಶದಿಂದ ವೀರ ಸಾವರ್ಕರ್ ಬಗ್ಗೆ ಕೀಳಾಗಿ ಮಾತನಾಡುತ್ತಿದ್ದಾರೆ. ಈ ಕಾಂಗ್ರೆಸ್ನವರು ಟೀಕೆ ಮಾಡುವುದರಿಂದ ಅಲ್ಪಸಂಖ್ಯಾತರ ಮತ ಬರುತ್ತವೆ ಎನ್ನುವುದು ಇವರ ನಿರೀಕ್ಷೆ. ಈ ರೀತಿ ಪದೇ ಪದೇ ಸಾವರ್ಕರ್ ಬಗ್ಗೆ ಕೀಳುಮಟ್ಟದಲ್ಲಿ ಮಾತನಾಡುವುದು ಅಕ್ಷಮ್ಯ ಅಪರಾಧ. ನಾನು ಕಾಂಗ್ರೆಸ್ನವರ ವರ್ತನೆಯನ್ನು ಖಂಡಿಸುತ್ತೇನೆ. ಕಾಂಗ್ರೆಸ್ಸಿನವರು ಇದೇ ರೀತಿ ಮಾತನಾಡುತ್ತಾ ಹೋದರೆ ಮುಂದಿನ ದಿನಗಳಲ್ಲಿ ಜನರೇ ಆಕ್ರೋಶಿತರಾಗಲಿದ್ದಾರೆ. ನಿಮ್ಮನ್ನ ಎಲ್ಲಿ (ಕಾಂಗ್ರೆಸ್) ಮುಗಿಸಬೇಕೋ ಅಲ್ಲಿ ಮುಗಿಸುತ್ತಾರೆ ಎಚ್ಚರಿಸಿದ್ದಾರೆ.

ದೇಶಾದ್ಯಂತ ಹಿಂದೂ- ಮುಸ್ಲಿಮರನ್ನು ದೂರ ಮಾಡಿ, ಮುಸ್ಲಿಮರನ್ನು ಪ್ರತ್ಯೇಕವಾಗಿಡುವ ಪ್ರಯತ್ನಗಳಾಗುತ್ತಿದೆ. ಇದನ್ನು ಮುಸ್ಲಿಮರು ಅರ್ಥ ಮಾಡಿಕೊಳ್ಳಬೇಕು. ಈ ರೀತಿಯಾದರೆ ಮುಸ್ಲಿಂ ಸಮುದಾಯಕ್ಕೆ ಅನ್ಯಾಯ ಆಗುತ್ತದೆ. ಇದರಿಂದ ಏನೂ ಉದ್ಧಾರ ಆಗಲ್ಲ ಹಾನಿ ಆಗುವುದು ಮುಸ್ಲಿಂರಿಗೆ ಎಂಬುದನ್ನು ಅರ್ಥಮಾಡಿಕೊಳ್ಳಲಿ. ನಾನು ಯಾವತ್ತೂ ಬಿಜೆಪಿಯಲ್ಲಿ ಉಸಿರುಗಟ್ಟುವ ವಾತಾವರಣ ಇದೆ ಅಂತ ಎಲ್ಲೂ ಹೇಳಿಲ್ಲಾ.
ಬಿಜೆಪಿ ಬಗ್ಗೆ ಕಾಂಗ್ರೆಸ್ಗೆ ಏಕೆ ಚಿಂತೆ: ಬಿಜೆಪಿಯ ಒಳಗೆ ಏನು ನಡೆಯುತ್ತಿದೆ ಎನ್ನುವುದನ್ನು ಕಾಂಗ್ರೆಸ್ ಚಿಂತಿಸುವುದು ಬೇಡ. ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿಕೆ ವಿಚಾರ, ಅದು ಪಕ್ಷಕ್ಕೆ ಬಿಟ್ಟ ವಿಚಾರವಾಗಿದೆ. ಬಿಜೆಪಿಯ ಒಳಗೆ ಎನಾಗ್ತಿದೆ ಎಂದು ಕಾಂಗ್ರೆಸ್ ವಿಚಾರ ಮಾಡುವುದು ಬೇಡ.

ನಿಮ್ಮಲ್ಲಿ ಸಿಎಂ ಸ್ಥಾನಕ್ಕೆ ಎಷ್ಟು ಪೈಪೋಟಿ ಇದೆ ಅದನ್ನು ನೋಡಿಕೊಳ್ಳಿ, ಹೊರಗೆ ಸಿದ್ದರಾಮಯ್ಯರಿಗೆ ಬೆಂಬಲ ಅಂತಾರೆ. ಆದರೆ, ಒಳಗೊಳಗೆ ಪ್ರತ್ಯೇಕ ಸಭೆ, ಯಾರು ಮುಖ್ಯ ಮಂತ್ರಿಯಾಗಬೇಕು, ಯಾವ ಶಾಸಕರು ಯಾರ ಜೊತೆಗೆ ಇದ್ದಾರೆ ಅನ್ನೊ ಚರ್ಚೆ ನಡೆಯುತ್ತಿದೆ. ತಮ್ಮ ಪಕ್ಷದ ಬಗ್ಗೆ ಕಾಂಗ್ರೆಸ್ ಶಾಸಕರು ಸಾಕಷ್ಟು ಅಸಮಾಧಾನಗೊಂಡಿದ್ದಾರೆ ಎಂದು ಇದರಿಂದಲೇ ತಿಳಿಯುತ್ತೆ. ತಮ್ಮ ಪಕ್ಷದ ಬಗ್ಗೆ ಕಾಂಗ್ರೆಸ್ ಶಾಸಕರಿಗೇ ಜಿಗುಪ್ಸೆ ಆಗಿದೆ. ರಸ್ತೆಗುಂಡಿ ಮುಚ್ಚುವುದಕ್ಕೂ ಸಹ ರಾಜ್ಯ ಸರ್ಕಾರದಲ್ಲಿ ಹಣ ಇಲ್ಲ. ನಿಮ್ಮ ಮನೆ ಮೊದಲು ನೀವು ಸರಿ ಮಾಡಿಕೊಳ್ಳಿ ಎಂದರು.
ನಾನು ಆ ರೀತಿ ಮಾತಾಡೇ ಇಲ್ಲ: ಇನ್ನು ಸಂಸದ ಜಗದೀಶ್ ಶೆಟ್ಟರ್ ಅವರು ನಾನು ಆ ರೀತಿ ಮಾತನಾಡಿಯೇ ಇಲ್ಲ ಎಂದು ಉಲ್ಟಾ ಹೊಡೆದಿರುವುದು ಸಹ ನಡೆದಿದೆ. ಬಿಜೆಪಿ ಬಿಟ್ಟು ಕಾಂಗ್ರೆಸ್ ಪಕ್ಷವನ್ನು ಸೇರುವ ಸಂದರ್ಭದಲ್ಲಿ ಅವರು ಬಿಜೆಪಿ ನಾಯಕರ ವಿರುದ್ಧ ಮಾತನಾಡಿದ್ದರು.
ಬಿಜೆಪಿ ಪಕ್ಷ ಕೆಲವರ ಹಿಡಿತದಲ್ಲಿದೆ , ಪಕ್ಷದಲ್ಲಿ ಉಸಿರುಗಟ್ಟುವ ವಾತಾವರಣ ಇದೆ ಎಂದು ಆರೋಪಿಸಿದ್ದರು. ಈಗ ನಾನೇನು ಹೇಳಿಯೇ ಇಲ್ಲ. ಅದನ್ನು ಮಾಧ್ಯಮಗಳೇ ಕ್ರಿಯೆಟ್ ಮಾಡಿದ್ದವು. ನಾನು ಯಾಕೆ ಧ್ವನಿ ಗೂಡಿಸಿಬೇಕು, ನಾನು ಈ ಬಗ್ಗೆ ಏನೂ ಪ್ರತಿಕ್ರಿಯೆ ನೀಡಲ್ಲ. ರಾಜಕೀಯ ಪಕ್ಷದಲ್ಲಿ ಎಲ್ಲವೂ ನೂರಕ್ಕೆ ನೂರರಷ್ಟು ಸರಿ ಇರಲ್ಲ. ಇದು ಯಾವ ಪಾರ್ಟಿಯಲ್ಲೂ ಇರಲ್ಲ, ಎಲ್ಲಾ ಪಾರ್ಟಿಯಲ್ಲಿಯೂ ಒಂದಿಷ್ಟು ಅಸಮಾಧಾನ ಇದ್ದೇ ಇರುತ್ತದೆ ಎಲ್ಲವೂ ಪರಿಪೂರ್ಣವಾಗಿರಲ್ಲ ಎಂದು ಹೇಳಿದ್ದಾರೆ.
-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು?












Click it and Unblock the Notifications