ಶ್ರೀರಂಗಪಟ್ಟಣ ದಸರಾದಲ್ಲಿ ಜಿವಿಗೆ ಅವಮಾನ

ಸೋಮವಾರ ಅಂಬಾರಿಯಲ್ಲಿ ಆಸೀನಳಾಗಿದ್ದ ಶ್ರೀ ಚಾಮುಂಡೇಶ್ವರಿಗೆ ದೇವಿಗೆ ಪೂಜೆ ಸಲ್ಲಿಸುವ ಮೂಲಕ ಜಿವಿ ಮಧ್ಯಾಹ್ನ 2 ಗಂಟೆಗೆ ದಸರಾಗೆ ಚಾಲನೆ ನೀಡಬೇಕಾಗಿತ್ತು. ನಿಗದಿತ ಸಮಯಕ್ಕಿಂತ ಮೊದಲೇ ಆಗಮಿಸಿದ್ದ ಅವರು ಜಿಲ್ಲಾ ಉಸ್ತುವಾರಿ ಸಚಿವ ಅಂಬರೀಶ್ ಮತ್ತು ಸಂಸದೆ ರಮ್ಯಾ ಅವರ ಆಗಮನಕ್ಕಾಗಿ ಕಾಯುತ್ತಿದ್ದರು.
ಈ ಸಮಯದಲ್ಲಿ ಆಗಮಿಸಿದ ಮೇಲುಕೋಟೆ ಶಾಸಕ ಪುಟ್ಟಣ್ಣಯ್ಯ, ಚಾಮುಂಡೇಶ್ವರಿ ವಿಗ್ರಹದ ಬಳಿ ಬಂದು ಅಲ್ಲಿದ್ದ ಹೂವನ್ನು ಚಾಮುಂಡೇಶ್ವರಿ ದೇವಿ ವಿಗ್ರಹಕ್ಕೆ ಎರಚಿದರು. ಇದನ್ನು ನೋಡಿದ ಅಂಬರೀಶ್ ಮತ್ತು ರಮ್ಯಾ ತಾವು ಆಗಮಿಸಿ ದೇವಿಗೆ ಪುಷ್ಪವನ್ನು ಅರ್ಪಿಸಿ, ದಸರಾಕ್ಕೆ ಚಾಲನೆ ನೀಡಿದರು.
ಮೂವರು ಜನಪ್ರತಿನಿಧಿಗಳಿಗೆ ದಸರಾ ಉದ್ಘಾಟನೆಗಾಗಿ ವೆಂಕಟಸುಬ್ಬಯ್ಯ ಅವರನ್ನು ಕರೆಸಿದ್ದೇವೆ. ಅವರಿಂದ ದಸರಾ ಉದ್ಘಾಟನೆ ಮಾಡಿಸಬೇಕು ಎಂಬ ಸಾಮಾನ್ಯ ಜ್ಞಾನವೂ ಮರೆತು ಹೋಗಿತ್ತು. ಸ್ಥಳದಲ್ಲಿದ್ದ ಅಧಿಕಾರಿಯೊಬ್ಬರು ಜಿವಿ ಅವರ ಕೈಗೆ ಮತ್ತಷ್ಟು ಹೂಗಳನ್ನು ನೀಡಿ, ದೇವಿಗೆ ಸಮರ್ಪಿಸುವಂತೆ ಮನವಿ ಮಾಡಿದರು.
ಜನಪ್ರತಿನಿಧಿಗಳ ಈ ವರ್ತನೆ ಅಲ್ಲಿ ನೆರೆದಿದ್ದ ಜನರ ಅಸಮಾಧಾನಕ್ಕೆ ಕಾರಣವಾಯಿತು. ಹಿರಿಯ ಸಾಹಿತಿಯನ್ನು ಕರೆಸಿ ಅವರಿಂದ ಮೊದಲು ಚಾಲನೆ ನೀಡಿಸದೇ ಅವಮಾನ ಮಾಡಲಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಆದರೆ, ಇವುಗಳ ಪರಿವೇ ಇಲ್ಲದೆ ಸಮಾರಂಭದಲ್ಲಿ ಪಾಲ್ಗೊಳ್ಳುವ ಮೂಲಕ ಪ್ರೊ.ವೆಂಕಟಸುಬ್ಬಯ್ಯ ತಮ್ಮ ಔದಾರ್ಯ ಮೆರೆದರು. ನಮ್ಮ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಏನು ಹೇಳೋಣ?
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್ -
Namma Metro: ಪ್ರಯಾಣಿಕರಿಗೆ ಸಿಹಿ ಸುದ್ದಿ, ಹಳದಿ ಮಾರ್ಗಕ್ಕಾಗಿ ಬಂತು ಹೊಸ ಡ್ರೈವರ್ ಲೆಸ್ ರೈಲು












Click it and Unblock the Notifications