ಶ್ರೀರಂಗಪಟ್ಟಣ ದಸರಾದಲ್ಲಿ ಜಿವಿಗೆ ಅವಮಾನ

ಸೋಮವಾರ ಅಂಬಾರಿಯಲ್ಲಿ ಆಸೀನಳಾಗಿದ್ದ ಶ್ರೀ ಚಾಮುಂಡೇಶ್ವರಿಗೆ ದೇವಿಗೆ ಪೂಜೆ ಸಲ್ಲಿಸುವ ಮೂಲಕ ಜಿವಿ ಮಧ್ಯಾಹ್ನ 2 ಗಂಟೆಗೆ ದಸರಾಗೆ ಚಾಲನೆ ನೀಡಬೇಕಾಗಿತ್ತು. ನಿಗದಿತ ಸಮಯಕ್ಕಿಂತ ಮೊದಲೇ ಆಗಮಿಸಿದ್ದ ಅವರು ಜಿಲ್ಲಾ ಉಸ್ತುವಾರಿ ಸಚಿವ ಅಂಬರೀಶ್ ಮತ್ತು ಸಂಸದೆ ರಮ್ಯಾ ಅವರ ಆಗಮನಕ್ಕಾಗಿ ಕಾಯುತ್ತಿದ್ದರು.
ಈ ಸಮಯದಲ್ಲಿ ಆಗಮಿಸಿದ ಮೇಲುಕೋಟೆ ಶಾಸಕ ಪುಟ್ಟಣ್ಣಯ್ಯ, ಚಾಮುಂಡೇಶ್ವರಿ ವಿಗ್ರಹದ ಬಳಿ ಬಂದು ಅಲ್ಲಿದ್ದ ಹೂವನ್ನು ಚಾಮುಂಡೇಶ್ವರಿ ದೇವಿ ವಿಗ್ರಹಕ್ಕೆ ಎರಚಿದರು. ಇದನ್ನು ನೋಡಿದ ಅಂಬರೀಶ್ ಮತ್ತು ರಮ್ಯಾ ತಾವು ಆಗಮಿಸಿ ದೇವಿಗೆ ಪುಷ್ಪವನ್ನು ಅರ್ಪಿಸಿ, ದಸರಾಕ್ಕೆ ಚಾಲನೆ ನೀಡಿದರು.
ಮೂವರು ಜನಪ್ರತಿನಿಧಿಗಳಿಗೆ ದಸರಾ ಉದ್ಘಾಟನೆಗಾಗಿ ವೆಂಕಟಸುಬ್ಬಯ್ಯ ಅವರನ್ನು ಕರೆಸಿದ್ದೇವೆ. ಅವರಿಂದ ದಸರಾ ಉದ್ಘಾಟನೆ ಮಾಡಿಸಬೇಕು ಎಂಬ ಸಾಮಾನ್ಯ ಜ್ಞಾನವೂ ಮರೆತು ಹೋಗಿತ್ತು. ಸ್ಥಳದಲ್ಲಿದ್ದ ಅಧಿಕಾರಿಯೊಬ್ಬರು ಜಿವಿ ಅವರ ಕೈಗೆ ಮತ್ತಷ್ಟು ಹೂಗಳನ್ನು ನೀಡಿ, ದೇವಿಗೆ ಸಮರ್ಪಿಸುವಂತೆ ಮನವಿ ಮಾಡಿದರು.
ಜನಪ್ರತಿನಿಧಿಗಳ ಈ ವರ್ತನೆ ಅಲ್ಲಿ ನೆರೆದಿದ್ದ ಜನರ ಅಸಮಾಧಾನಕ್ಕೆ ಕಾರಣವಾಯಿತು. ಹಿರಿಯ ಸಾಹಿತಿಯನ್ನು ಕರೆಸಿ ಅವರಿಂದ ಮೊದಲು ಚಾಲನೆ ನೀಡಿಸದೇ ಅವಮಾನ ಮಾಡಲಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಆದರೆ, ಇವುಗಳ ಪರಿವೇ ಇಲ್ಲದೆ ಸಮಾರಂಭದಲ್ಲಿ ಪಾಲ್ಗೊಳ್ಳುವ ಮೂಲಕ ಪ್ರೊ.ವೆಂಕಟಸುಬ್ಬಯ್ಯ ತಮ್ಮ ಔದಾರ್ಯ ಮೆರೆದರು. ನಮ್ಮ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಏನು ಹೇಳೋಣ?
-
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು












Click it and Unblock the Notifications