ಅರ್ಚಕರಿಗೆ ಆರೋಗ್ಯ ವಿಮೆ, ಶೀಘ್ರ ನಿರ್ಧಾರ: ಸಚಿವೆ ಜೊಲ್ಲೆ
ಬೆಂಗಳೂರು, ಸೆಪ್ಟೆಂಬರ್ 23: ರಾಜ್ಯದಲ್ಲಿ ಮುಜರಾಯಿ ಇಲಾಖೆ ಅಧೀನದಲ್ಲಿ ಇರುವಂತಹ ದೇವಸ್ಥಾನಗಳ ಸಿಬ್ಬಂದಿ ಮತ್ತು ಅರ್ಚಕರಿಗೆ ಆರೋಗ್ಯ ವಿಮೆ ಒದಗಿಸುವ ಬಗ್ಗೆ ಶೀಘ್ರವೇ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.
ಮುಜರಾಯಿ ಇಲಾಖೆ ಅಧೀನದಲ್ಲಿ ರಾಜ್ಯದಾದ್ಯಂತ 34,000 ಕ್ಕೂ ಅಧಿಕ ದೇವಸ್ಥಾನಗಳು ಇವೆ. ಇದರಲ್ಲಿ ಹೆಚ್ಚಿನ ಆದಾಯ ಬರುವ ದೇವಸ್ಥಾನಗಳನ್ನು "ಎ" ಗ್ರೇಡ್ ಎಂದು, ಕಡಿಮೆ ಆದಾಯ ಗಳಿಸುವ ದೇವಸ್ಥಾನಗಳನ್ನು "ಬಿ" ಗ್ರೇಡ್ ಎಂದು ಹಾಗೂ ಯಾವುದೇ ಆದಾಯ ಇಲ್ಲದ ದೇವಸ್ಥಾನಗಳನ್ನು "ಸಿ" ಗ್ರೇಡ್ನಲ್ಲಿ ವಿಂಗಡಿಸಲಾಗಿದೆ. ಈ ಎಲ್ಲಾ ಬಗೆಯ ದೇವಸ್ಥಾನಗಳು ಸೇರಿ ಸುಮಾರು 40,000 ಸಿಬ್ಬಂದಿ ಇದ್ದಾರೆ.
ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ಅವರು ವಿಕಾಸಸೌಧದಲ್ಲಿ ಮುಜರಾಯಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಈ ಸಂದರ್ಭದಲ್ಲಿ ದೇವಸ್ಥಾನಗಳ ಆದಾಯ ಹೆಚ್ಚಳ, ಭಕ್ತರಿಗೆ ಒದಗಿಸುತ್ತಿರುವ ಸೌಲಭ್ಯಗಳು ಮತ್ತು ದೇವಸ್ಥಾನಗಳ ಜೀಣೋದ್ಧಾರದ ಕುರಿತು ವಿಸ್ತೃತವಾಗಿ ಚರ್ಚಿಸಲಾಯಿತು. ಇಲಾಖೆಯ ಕಾರ್ಯಚಟುವಟಿಕೆಗಳನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವೆ ಶಶಿಕಲಾ ಜೊಲ್ಲೆ, "ಕೋವಿಡ್ ಕಾರಣದಿಂದಾಗಿ ಕಳೆದ ಒಂದೂವರೆ ವರ್ಷದಿಂದ ಬಹುತೇಕ ಬಾಗಿಲು ಮುಚ್ಚಿದ್ದವು. ಈಗ ಎಲ್ಲ ದೇವಸ್ಥಾನಗಳೂ ತೆಗೆದಿದ್ದು, ಭಕ್ತರ ಭೇಟಿಗೆ ಅವಕಾಶ ನೀಡಲಾಗಿದೆ. ಇಲ್ಲಿ ಕಾರ್ಯನಿರ್ವಹಿಸುವಂತಹ ಸಿಬ್ಬಂದಿ ಮತ್ತು ಅರ್ಚಕರಿಗೆ ಆರೋಗ್ಯ ವಿಮೆ ಒದಗಿಸುವ ಸಂಬಂಧ ಚರ್ಚಿಸಲಾಗಿದೆ. ಈ ಕುರಿತು ಶೀಘ್ರದಲ್ಲಿಯೇ ನಿರ್ಧಾರ ಕೈಗೊಳ್ಳಲಾಗುವುದು" ಎಂದು ಹೇಳಿದರು.
ಇಲಾಖೆಯ ಎಲ್ಲ ದೇವಸ್ಥಾನಗಳ ಆಸ್ತಿ, ಮಾರ್ಗ ನಕ್ಷೆ ಹಾಗೂ ಧಾರ್ಮಿಕ ಸೇವೆಗಳ ಮಾಹಿತಿಯನ್ನು ಆನ್ಲೈನ್ ಮೂಲಕ ಒದಗಿಸಲು ಐಟಿಎಂಎಸ್ (ಇಂಟಿಗ್ರೆಟೆಡ್ ಟೆಂಪಲ್ ಮ್ಯಾನೇಜ್ಮೆಂಟ್ ಸಿಸ್ಟಂ) ಜಾರಿಗೆ ತರಲಾಗುತ್ತಿದೆ. ಇದರಿಂದ ದೇವಸ್ಥಾನಗಳ ಆಸ್ತಿ ರಕ್ಷಣೆಗೂ ಅನುಕೂಲ ಆಗಲಿದೆ. ಭಕ್ತರು ರಾಜ್ಯದ ಎಲ್ಲ ದೇವಸ್ಥಾನಗಳ ಪೂರ್ಣ ಮಾಹಿತಿಯನ್ನು ಒಂದೇ ಕಡೆ ಪಡೆಯಲು ಸಾಧ್ಯವಾಗಲಿದೆ ಎಂದರು.
6ನೇ ವೇತನ ಆಯೋಗಕ್ಕೆ ಒತ್ತಾಯ
ದೇವಸ್ಥಾನ ಸಿಬ್ಬಂದಿ ಮತ್ತು ಅರ್ಚಕರಿಗೆ 6ನೇ ವೇತನ ಆಯೋಗ ಜಾರಿ ಮಾಡುವಂತೆ ಅನೇಕ ಶಾಸಕರಿಂದ ಒತ್ತಡ ಬರುತ್ತಿದೆ. ಈಗಾಗಲೇ ಇಲಾಖೆ ವ್ಯಾಪ್ತಿಯಲ್ಲಿ 5ನೇ ವೇತನ ಆಯೋಗ ಜಾರಿ ಮಾಡಲಾಗಿದ್ದು, ಅದರ ಸೌಲಭ್ಯಗಳನ್ನು ಪಡೆಯುತ್ತಿದ್ದಾರೆ. 6ನೇ ವೇತನ ಆಯೋಗ ಜಾರಿಗೆ ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಶೀಘ್ರವೇ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿದರು.
Recommended Video
-
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್












Click it and Unblock the Notifications