ಗುಪ್ತಚರ ಇಲಾಖೆ ಮಾಹಿತಿ ನಕಲಿ ಎಂದ ಸಿಎಂ ಕಚೇರಿ
ಸಿಎಂ ಸಿದ್ದರಾಮಯ್ಯ ಅವರು ಸ್ಪರ್ಧಿಸಲು ಇಚ್ಚಿಸಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಗೆಲುವು ಕಷ್ಟ ಎಂಬ ಅಂಶ ಇದ್ದ ರಾಜ್ಯ ಗುಪ್ತಚರ ಇಲಾಖೆಯಿಂದ ಬಂದದ್ದು ಎನ್ನಲಾದ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಇದು ನಕಲಿ ಎಂದು ಮುಖ್ಯಮಂತ್ರಿ ಕಚೇರಿ ತಿಳಿಸಿದೆ.
ಗುಪ್ತಚರ ಇಲಾಖೆಯದ್ದು ಎನ್ನಲಾದ ಪತ್ರ ಬೆಳಿಗ್ಗೆಯಿಂದ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು, ಮಾಧ್ಯಮಗಳಲ್ಲಿಯೂ ಸುದ್ದಿಯಾಗಿತ್ತು. ಸಿದ್ದರಾಮಯ್ಯ ಅವರು ಚಾಮುಂಡೇಶ್ವರಿ ಬಿಟ್ಟು ವರುಣಾ, ಬಸವಕಲ್ಯಾಣ, ಶಾಂತಿನಗರ ಅಥವಾ ಗಂಗಾವತಿಯಲ್ಲಿ ಚುನಾವಣೆಗೆ ಸ್ಪರ್ಧಿಸುವಂತೆ ಸೂಚಿಸಲಾಗಿತ್ತು. ಆದರೆ ಅದು ನಕಲಿ ಪತ್ರ ಎಂಬುದು ಇದೀಗ ಬಹಿರಂಗವಾಗಿದೆ.

ಮುಖ್ಯಮಂತ್ರಿ ಕಚೇರಿಯು ಆ ವರದಿ ನಕಲಿ ಎಂದಿದ್ದು, ಮುಖ್ಯಮಂತ್ರಿಗಳು ನಕಲಿ ವರದಿ ವಿರುದ್ಧ ತನಿಖೆಗೆ ಆದೇಶಿಸಿದ್ದಾರೆ. ಆದರೆ ಗುಪ್ತಚರ ಇಲಾಖೆ ಈ ಬಗ್ಗೆ ಇನ್ನೂ ಅಧಿಕೃತ ಹೇಳಿಕೆ ನೀಡಿಲ್ಲ.












Click it and Unblock the Notifications