ಸುಮಲತಾ ಹಿಂದೆ ಬಿದ್ದಿದೆ ಗುಪ್ತಚರ ಇಲಾಖೆ, ಚಲನವಲನದ ಮೇಲೆ ನಿಗಾ?
Recommended Video
ಬೆಂಗಳೂರು, ಮೇ 02: ಮಂಡ್ಯದಲ್ಲಿ ಪಕ್ಷೇತರವಾಗಿ ಚುನಾವಣೆಗೆ ಸ್ಪರ್ಧಿಸಿ ಮುಖ್ಯಮಂತ್ರಿಗಳಿಗೇ ಭಾರಿ ಠಕ್ಕರ್ ಕೊಟ್ಟಿರುವ ಸುಮಲತಾ ಅವರಿಗೆ ಆತಂಕವೊಂದು ಕಾಡುತ್ತಿದೆಯಂತೆ, ಅವರ ಚಲನವಲನಗಳ ಮೇಲೆ ಯಾರೋ ಕಣ್ಣಿಟ್ಟಿದ್ದಾರೆ ಎಂಬ ಗುಮಾನಿ ಇದೆಯಂತೆ ಅವರಿಗೆ.
ಮಂಡ್ಯದಲ್ಲಿ ಸುಮಲತಾ ಅವರು ಪಕ್ಷೇತರವಾಗಿ ಅಭ್ಯರ್ಥಿಯಾಗಿ ಪ್ರಚಾರ ಮಾಡುತ್ತಿದ್ದ ಸಂದರ್ಭದಲ್ಲಿ ಮಾಧ್ಯಮಗಳ ಮುಂದೆ ಈ ವಿಷಯವನ್ನು ಅವರು ಬಹಿರಂಗ ಪಡಿಸಿದ್ದರು, ಆಗ ಮಾತನಾಡಿದ್ದ ಸುಮಲತಾ ಅವರು ಸಿಎಂ ಅವರು ಗುಪ್ತಚರ ಇಲಾಖೆ ಬಳಸಿಕೊಂಡು ನಮ್ಮ ಚಲನವಲನಗಳ ಮೇಲೆ ಕಣ್ಣಿಟ್ಟಿದ್ದಾರೆ ಎಂದು ಆರೋಪಿಸಿದ್ದರು.
ಈಗ ಚುನಾವಣೆ ಮುಗಿದ ಬಳಿಕವೂ ಆ ಆತಂಕ ಹೋಗಿಲ್ಲ, ಈಗಲೂ ಸುಮಲತಾ ಅವರ ಬೆನ್ನಹಿಂದೆ ಸಿಎಂ ಅವರು ಗುಪ್ತಚರ ಇಲಾಖೆಯನ್ನು ಛೂ ಬಿಟ್ಟಿದ್ದಾರೆ ಎಂದು ಸುಮಲತಾ ಅವರ ಆಪ್ತವರ್ಗ ಆರೋಪ ಮಾಡುತ್ತಿದೆ.
ನಿನ್ನೆಯಷ್ಟೆ ಮಾಧ್ಯಮಗಳಲ್ಲಿ ಸುಮಲತಾ ಅವರಿಗೆ ಸಂಬಂಧಪಟ್ಟ ವಿಡಿಯೋ ಒಂದು ಹರಿದಾಡಿತ್ತು, ಬೆಂಗಳೂರಿನ ಖಾಸಗಿ ಹೊಟೆಲ್ನಲ್ಲಿ ಸುಮಲತಾ ಅವರು ಮಂಡ್ಯದ ಭಿನ್ನಮತೀಯ ಕಾಂಗ್ರೆಸ್ ಮುಖಂಡರ ಜೊತೆ ರಹಸ್ಯ ಸಭೆ ನಡೆಸಿದ್ದರು, ಆದರೆ ಈ ಸಭೆಯ ವಿಡಿಯೋ ಹೊರಗಡೆ ಸಿಕ್ಕಿದ್ದಾದರೂ ಹೇಗೆ? ಎಂಬ ಅನುಮಾನ ಈಗ ಕಾಡುತ್ತಿದೆ.

ಗುಪ್ತಚರ ಇಲಾಖೆ ಸಿಬ್ಬಂದಿ ಮಾಡಿದ ವಿಡಿಯೋ?
ಆ ವಿಡಿಯೋ ಹೊರ ಬರಲು ಗುಪ್ತಚರ ಇಲಾಖೆ ಸಿಬ್ಬಂದಿಯೇ ಕಾರಣ ಎಂಬ ಸುದ್ದಿ ಹರಿದಾಡುತ್ತಿದ್ದು, ಹೊಟೆಲ್ಗೆ ಹೋಗುವ ಬಗ್ಗೆ ಮೊದಲೇ ಮಾಹಿತಿ ಸಂಗ್ರಹಿಸಿ, ಹೊಟೆಲ್ ಸಿಬ್ಬಂದಿಯಿಂದ ರೆಕಾರ್ಡ್ ಮಾಡಿಸಿ, ಅದರ ಪ್ರತಿಯನ್ನು ಗುಪ್ತಚರ ಇಲಾಖೆ ಪಡೆದುಕೊಂಡಿದೆ ಎಂದು ಸುಮಲತಾ ಆಪ್ತರು ಆರೋಪಿಸುತ್ತಿದ್ದಾರೆ. ಈ ಬಗ್ಗೆ ಸುಮಲತಾ ಅವರು ನೇರವಾಗಿ ಯಾವುದೇ ಹೇಳಿಕೆಗಳನ್ನು ಈ ವರೆಗೆ ನೀಡಿಲ್ಲ.

ಪೂರ್ಣ ವಿಡಿಯೋ ಕುಮಾರಸ್ವಾಮಿ ಬಳಿ ಇದೆ!
ಸುಮತಲಾ ಅವರ ಫೋನ್ ಟ್ಯಾಪ್ ಮಾಡಿ, ಅವರು ಅದೇ ದಿನ, ನಿರ್ದಿಷ್ಟ ಹೊಟೆಲ್ನಲ್ಲಿ ಸಭೆ ಸೇರಲಿದ್ದಾರೆಂಬ ಪೂರ್ವ ಮಾಹಿತಿ ಸಂಗ್ರಹಿಸಿಯೇ ಗುಪ್ತಚರ ಇಲಾಖೆ ವಿಡಿಯೋ ಚಿತ್ರೀಕರಿಸಿದೆ ಎನ್ನಲಾಗಿದ್ದು, ಪೂರ್ಣ ವಿಡಿಯೋ ಕುಮಾರಸ್ವಾಮಿ ಅವರ ಬಳಿ ಇದೆ ಎಂಬ ಗಾಳಿ ಸುದ್ದಿ ಹರಿದಾಡುತ್ತಿದೆ.

ಭಿನ್ನಮತೀಯ ಶಾಸಕರ ಮೇಲೆ ಗುಪ್ತಚರದ ನಿಗಾ?
ಸುಮಲತಾ ಅವರ ಆಪ್ತರ ಆರೋಪಗಳಿಗೆ ಗಟ್ಟಿ ಆಧಾರವೂ ಇದೆ. ಈ ಹಿಂದೆ ಕಾಂಗ್ರೆಸ್- ಜೆಡಿಎಸ್ನ ಭಿನ್ನಮತೀಯ ಶಾಸಕರನ್ನು ಹದ್ದು ಬಸ್ತಿನಲ್ಲಿಡಲು ಕುಮಾರಸ್ವಾಮಿ ಅವರು ಗುಪ್ತಚರ ಇಲಾಖೆಯ ನೆರವು ಪಡೆದಿದ್ದರು ಎನ್ನಲಾಗುತ್ತದೆ. ಯಾವ ಶಾಸಕರು ಬಿಜೆಪಿಯ ಶಾಸಕರೊಂದಿಗೆ ಸಂಪರ್ಕದಲ್ಲಿದ್ದಾರೆಂಬ ಮಾಹಿತಿಯನ್ನು ಗುಪ್ತಚರ ಇಲಾಖೆ ಸಿಎಂ ಅವರಿಗೆ ಅವರದ್ದೇ ಸೂಚನೆ ಮೇರೆಗೆ ರವಾನಿಸಿತ್ತೆಂಬ ಸುದ್ದಿ ಆಗೊಮ್ಮೆ ಜೋರಾಗಿಯೇ ಕೇಳಿಬಂದಿತ್ತು.

ಆಪರೇಷನ್ ಕಮಲ ಆಡಿಯೋ ಬಿಡುಗಡೆ ಮಾಡಿಸಿದ್ದರು
ಅಷ್ಟೆ ಅಲ್ಲದೆ, ಕುಮಾರಸ್ವಾಮಿ ಅವರು ಶಾಸಕ ನಾಗನಗೌಡ ಕಂದಕೂರು ಅವರ ಪುತ್ರ ಶರಣಗೌಡ ಕಂದಕೂರು ಅವರಿಂದ ಯಡಿಯೂರಪ್ಪ ಅವರೊಂದಿಗೆ ಮಾತನಾಡಿದ್ದ ಮಾತುಕತೆಯನ್ನೇ ರೆಕಾರ್ಡ್ ಮಾಡಿಸಿ ಆಪರೇಷನ್ ಕಮಲ ಆಡಿಯೋ ಬಿಡುಗಡೆಗೊಳಿಸಿ ಬಿಜೆಪಿಯಲ್ಲಿ ಅಲ್ಲೋಲಕಲ್ಲೋಲ ಸೃಷ್ಟಿಸಿದ್ದು ಸಹ ಮರೆಯುವಂತಿಲ್ಲ.

ವಿರೋಧಿಗಳ ಮೇಲೆ ಕಣ್ಣಿಟ್ಟಿರುತ್ತಾರೆ ಎಚ್ಡಿಕೆ
ಕುಮಾರಸ್ವಾಮಿ ಅವರು ರಾಜಕೀಯ ವಿರೋಧಿಗಳ ಮೇಲೆ ಸದಾ ಒಂದು ಕಣ್ಣಿಟ್ಟಿರುತ್ತಾರೆ. ಅಧಿಕಾರದಲ್ಲಿ ಇಲ್ಲದಾಗಲೂ ಸಹ ಅವರು ವಿರೋಧಿಗಳ ಬಗ್ಗೆ ಪೂರ್ಣ ಮಾಹಿತಿ ಹೊಂದಿರುತ್ತಾರೆ ಆದರೆ ಈಗ ಅಧಿಕಾರಿದಲ್ಲಿದ್ದಾರೆ ಈಗ ಅವರು ಸುಮ್ಮನಿರುತ್ತಾರೆಯೇ ಎಂದು ಅನಿಸದೇ ಇರದು.

ಗುಪ್ತಚರ ಇಲಾಖೆಯ ಖಾಸಗಿ ಬಳಕೆ ಸಾಕಷ್ಟು ಭಾರಿ ಆಗಿದೆ?
ಸರ್ಕಾರ ಉಳಿಸಿಕೊಳ್ಳಲು, ಚುನಾವಣೆಗಳಲ್ಲಿ ಕ್ಷೇತ್ರದ ಸಮೀಕ್ಷೆ ಮಾಡಿಸಲು, ವಿರೋಧಿಗಳ ಚಲನಚಲನಗಳ ಮೇಲೆ ಕಣ್ಣಿಡಲು ಈ ಹಿಂದಿನ ಸರ್ಕಾರಗಳು ಸಹ ಗುಪ್ತಚರ ಇಲಾಖೆಯನ್ನು ಬಳಸಿಕೊಂಡಿವೆ. ಸಿದ್ದರಾಮಯ್ಯ ಅವಧಿಯಲ್ಲಿ ಕ್ಷೇತ್ರಗಳ ಚುನಾವಣಾ ಪೂರ್ವ ಸಮೀಕ್ಷೆಯನ್ನು ಗುಪ್ತಚರ ಇಲಾಖೆಯಿಂದ ಮಾಡಿಸಲಾಗಿತ್ತು ಎನ್ನುವ ಆರೋಪ ಇದೆ. ಯಡಿಯೂರಪ್ಪ ಅವರ ವಿರುದ್ಧವೂ ಇಂತಹಾ ಆರೋಪ ಕೇಳಿಬಂದಿತ್ತು, ಬಹು ಹಿಂದೆ ಆಗ ಸಿಎಂ ಆಗಿದ್ದ ರಾಮಕೃಷ್ಣ ಹೆಗಡೆ ಅವರ ಮೇಲೆ ಫೋನ್ ಕದ್ದಾಲಿಕೆ ಆರೋಪ ಹೊರಿಸಲಾಗಿದ್ದನ್ನೂ ಸಹ ಮರೆಯುವಂತಿಲ್ಲ.
-
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು












Click it and Unblock the Notifications