ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪತ್ರಕರ್ತರ ಹೆಸರಿನಲ್ಲಿ ಜೆಡಿಎಸ್ ನಾಯಕರಿಗೆ ಗುಪ್ತದಳ ಅಧಿಕಾರಿಗಳ ಕರೆ!

|
Google Oneindia Kannada News

ಬೆಂಗಳೂರು, ಆಗಸ್ಟ್ 28 : ಕರ್ನಾಟಕದಲ್ಲಿ ಶಾಸಕರ ಫೋನ್ ಟ್ಯಾಪಿಂಗ್ ವಿಚಾರ ಭಾರಿ ಸದ್ದು ಮಾಡಿತ್ತು. ಸರ್ಕಾರ ಈ ಕುರಿತು ಸಿಬಿಐ ತನಿಖೆಗೆ ಆದೇಶ ನೀಡಿತ್ತು. ಈಗ ಪತ್ರಕರ್ತರ ಹೆಸರಿನಲ್ಲಿ ಜೆಡಿಎಸ್ ನಾಯಕರಿಗೆ ಗುಪ್ತಚರ ಇಲಾಖೆ ಅಧಿಕಾರಿಗಳ ಕರೆ ಬಂದಿದೆ.

ಬುಧವಾರ ಜೆಡಿಎಸ್ ವಕ್ತಾರ ರಮೇಶ್ ಬಾಬು ಈ ಕುರಿತು ಗಂಭೀರ ಆರೋಪ ಮಾಡಿದರು. "ಬಿಜೆಪಿ ಸರ್ಕಾರದಲ್ಲಿಯೂ ಟೆಲಿಫೋನ್ ಕದ್ದಾಲಿಕೆ ಆಗುತ್ತಿದೆ" ಎಂದು ದೂರಿದರು.

ಫೋನ್ ಕದ್ದಾಲಿಕೆ ಸಿಬಿಐಗೆ : ಇದು ದ್ವೇಷದ ರಾಜಕೀಯ ಹೇಗೆ?ಫೋನ್ ಕದ್ದಾಲಿಕೆ ಸಿಬಿಐಗೆ : ಇದು ದ್ವೇಷದ ರಾಜಕೀಯ ಹೇಗೆ?

"ಗುಪ್ತಚರ ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡು ಜೆಡಿಎಸ್ ಹಾಗೂ ಪ್ರತಿಪಕ್ಷ ನಾಯಕರ ಫೋನ್ ಕದ್ದಾಲಿಕೆ ಮಾಡಲಾಗುತ್ತಿದೆ. ಪತ್ರಕರ್ತರ ಹೆಸರಿನಲ್ಲಿ ನನಗೂ ಫೋನ್ ಕರೆ ಬಂದಿತ್ತು" ಎಂದು ಆರೋಪಿಸಿದರು.

ಆಗಸ್ಟ್ 2018 ರಿಂದ ನಡೆದಿರುವ ಫೋನ್ ಟ್ಯಾಪಿಂಗ್ ಬಗ್ಗೆ ಸಿಬಿಐ ತನಿಖೆಆಗಸ್ಟ್ 2018 ರಿಂದ ನಡೆದಿರುವ ಫೋನ್ ಟ್ಯಾಪಿಂಗ್ ಬಗ್ಗೆ ಸಿಬಿಐ ತನಿಖೆ

Ramesh Babu

"ನನಗೂ ಅನಾಮಿಕರೊಬ್ಬರು ಪತ್ರಕರ್ತರ ಹೆಸರಿನಲ್ಲಿ ಕರೆ ಮಾಡಿದ್ದರು. ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯನವರ ಮೇಲೆ ದೇವೇಗೌಡರ ಅಭಿಪ್ರಾಯ ಏನು ಅಂತ ಒತ್ತಾಯ ಮಾಡಿ ಕೇಳಿದರು. ಅದನ್ನು ಅವರ ಬಳಿಯೇ ಕೇಳಿ ಅಂತ ಹೇಳಿದೆ" ಎಂದರು.

ಫೋನ್ ಕದ್ದಾಲಿಕೆ ಪ್ರಕರಣ ಸಿಬಿಐಗೆ : ಸಿದ್ದರಾಮಯ್ಯ ಸರಣಿ ಟ್ವೀಟ್ಫೋನ್ ಕದ್ದಾಲಿಕೆ ಪ್ರಕರಣ ಸಿಬಿಐಗೆ : ಸಿದ್ದರಾಮಯ್ಯ ಸರಣಿ ಟ್ವೀಟ್

"ನನಗೆ ಅನುಮಾನ ಬಂದು ಕರೆ ಬಂದ ಸಂಖ್ಯೆ ಪರಿಶೀಲಿಸಿದಾಗ ಅದು ಗುಪ್ತಚರ ಇಲಾಖೆಯವರದ್ದು ಎಂದು ತಿಳಿಯಿತು. ಪತ್ರಕರ್ತರ ಹೆಸರಿನಲ್ಲಿ ಇವರು ಯಾಕೆ ಕರೆ ಮಾಡಬೇಕು. ಪ್ರತಿಪಕ್ಷದವರನ್ನು ಮಣಿಸಲು ಗುಪ್ತಚರ ಸಿಬ್ಬಂದಿಯನ್ನು ಬಳಸಿಕೊಳ್ಳುತ್ತಿದ್ದಾರೆ" ಎಂದು ಆರೋಪಿಸಿದರು.

"ಪತ್ರಕರ್ತರ ಹೆಸರಿನಲ್ಲಿ ನನಗೆ ಬಂದ ಕರೆ ಬಗ್ಗೆ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದೇನೆ. ತನಿಖೆಗಾಗಿ ಆಗ್ರಹಿಸಿದ್ದೇನೆ" ಎಂದು ರಮೇಶ್ ಬಾಬು ಹೇಳಿದರು.

English summary
Janata Dal (Secular) National General Secretary and national spokesperson Ramesh Babu alleged that he received the phone call from intelligence officer in the name of journalist.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X