ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯದಿದ್ದರೆ ಉಗ್ರ ಹೋರಾಟ: ಬಸವರಾಜ ಬೊಮ್ಮಾಯಿ
ಹಾವೇರಿ: ಶಿಗ್ಗಾವಿಯಲ್ಲಿ ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭಿಸುವವರೆಗೂ ರೈತರ ಹೋರಾಟ ನಿಲ್ಲುವುದಿಲ್ಲ, ರೈತ ಶಕ್ತಿ ದೊಡ್ಡದೋ ಅಧಿಕಾರದ ಶಕ್ತಿ ದೊಡ್ಡದಿದೆಯೋ ನಿರ್ಣಯ ಆಗಲೇಬೇಕು. ರೈತರ ಪರವಾಗಿ ಹಿಂದೆಯೂ ನಿಂತಿದ್ದೇನೆ. ಜೀವನದ ಕೊನೆವರೆಗೂ ನಿಲ್ಲುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ಹಾವೇರಿ ಜಿಲ್ಲೆಯ ಶಿಗ್ಗಾಂವ ಪಟ್ಟಣದ ತಹಶಿಲ್ದಾರರ ಕಾರ್ಯಾಲಯದ ಆವರಣದಲ್ಲಿ ಗೋವಿನ ಜೋಳ ಖರೀದಿ ಕೇಂದ್ರ ಆರಂಭಿಸುವಂತೆ ಆಗ್ರಹಿಸಿ ಧರಣಿ ಕುಳಿತಿರುವ ರೈತರನ್ನು ಭೇಟಿ ಮಾಡಿ ಧರಣಿ ನಿರತ ರೈತರನ್ನು ಉದ್ದೇಶಿಸಿ ಮಾತನಾಡಿ, ಶಿಗ್ಗಾವಿ ತಾಲೂಕಿನಲ್ಲಿ ಶೇ 80 ರಷ್ಟು ರೈತರು ಬೆಳೆಯುವ ಮೆಕ್ಕೆಜೋಳಕ್ಕೆ ಬೆಂಬಲ ಬೆಲೆ ನೀಡುವಂತೆ ಎಲ್ಲ ರೈತಪರ ಸಂಘಟನೆಗಳು ಹೋರಾಟ ಮಾಡುತ್ತಿರುವುದು ರೈತರ ಕಲ್ಯಾಣಕ್ಕಾಗಿ, ಈ ನಿಮ್ಮ ನ್ಯಾಯಸಮ್ಮತ ಹೋರಾಟಕ್ಕೆ ಬೇರೆ ಬೇರೆ ಬಣ್ಣ ಕೊಡಲು ಪ್ರಯತ್ನ ಮಾಡುತ್ತಿದ್ದಾರೆ.

ನಮ್ಮ ಹೃದಯದಲ್ಲಿ, ನಮ್ಮ ಮನಸ್ಸಿನಲ್ಲಿ ಹೊಲದಲ್ಲಿ ದುಡಿಯುವ ರೈತನ ಚಿತ್ರ ಇಟ್ಟುಕೊಂಡು ಹೋರಾಟ ಮಾಡೋಣ. ಇದರಲ್ಲಿ ರಾಜಕಾರಣ ಬೆರೆಸಿ ನಿಮ್ಮನ್ನು ಮುರಿಯುವ, ಒಡೆಯುವ ಪಯತ್ನ ಮಾಡುತ್ತಾರೆ. ರೈತರ ಜೊತೆ ಯಾರೂ ಇಲ್ಲ ಎಂದು ತಿಳಿದುಕೊಂಡಿದ್ದಾರೆ. ಶಿಗ್ಗಾವಿ ತಾಲೂಕಿನಲ್ಲಿ ರೈತರ ಜೊತೆಗೆ ಬಸವರಾಜ ಬೊಮ್ಮಾಯಿ ಇದ್ದಾನೆ. ರೈತರು ಯಾವುದೇ ರಾಜಕೀಯ ಪಕ್ಷಕ್ಕೆ ಸೇರಿಲ್ಲ. ಎಲ್ಲ ರಾಜಕೀಯ ಪಕ್ಷಗಳು ರೈತರಿಗೆ ಸೇರಿವೆ. ಎಲ್ಲ ಪಕ್ಷಗಳೂ ರೈತರ ಬೆಂಬಲದಿಂದ ಸರ್ಕಾರ ಆಳುತ್ತಿದ್ದಾರೆ ಎಂದು ಹೇಳಿದರು.
ಮೆಕ್ಕೆಜೋಳ ಶೇ 80 ರಷ್ಟು ರೈತರು ಬೆಳೆಯುತ್ತಿದ್ದಾರೆ. ಅದಕ್ಕೆ ಕೇಂದ್ರ ಸರ್ಕಾರ ಬೆಂಬಲ ಬೆಲೆ ಕೊಡುತ್ತಿದೆ. ಅದನು ಖರೀದಿ ಮಾಡುವ ಜವಾಬ್ದಾರಿ ರಾಜ್ಯ ಸರ್ಕಾರದ್ದು, ಬೇರೆ ಬೇರೆ ರಾಜ್ಯಗಳಲ್ಲಿ ಸರ್ಕಾರಗಳು ಮೆಕ್ಕೆಜೋಳ, ಕಬ್ಬು, ಭತ್ತ ಖರೀದಿ ಮಾಡಿದ್ದಾವೆ. ನೀವು ಕಬ್ಬು ಬೆಳೆಗಾರರಿಗೆ ಬೆಂಬಲ ಬೆಲೆ ಕೊಡಲು ಸಭೆ ಮಾಡಿದ್ದೀರಿ. ಆದರೆ, ಇಪತ್ತು ಜಿಲ್ಲೆಗಳಲ್ಲಿ ಮೆಕ್ಕೆಜೋಳ ಬೆಳೆದ ರೈತರ ಬಗ್ಗೆ ಒಂದು ಸಣ್ಣ ಸಭೆ ಮಾಡಲಿಲ್ಲ. ಅವರನ್ನು ಕರೆಯಲೂ ಇಲ್ಲ. ನೀವೇ 10 ಲಕ್ಷ ಮೆಟ್ರಿಕ್ ಟನ್ ಖರೀದಿಸುವುದಾಗಿ ಹೇಳಿದ್ದೀರಿ. ಈ ರಾಜ್ಯದಲ್ಲಿ 16 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ 54 ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳ ಬೆಳೆದಿದ್ದಾರೆ.
ನಾನು ಲಕ್ಷೇಶ್ವರದಲ್ಲಿ ಆರಂಭದಲ್ಲಿ ಈ ಸರ್ಕಾರ ನಂಬಬೇಡಿ ಅಂಥ ಹೇಳಿದ್ದೆ. ಅಧಿವೇಶನ ಇರುವ ಸಲುವಾಗಿ ಖರೀದಿ ಮಾಡುವುದಾಗಿ ಹೇಳಿದ್ದರು. ರೈತರಿಗೆ ಆರ್ಥಿಕವಾಗಿ ಸಂಕಷ್ಟ ಇರುತ್ತದೆ. ಎಥೆನಾಲ್ ಕಂಪನಿಯವರು ರೈತರಿಂದ ನೇರವಾಗಿ ಖರೀದಿಸದೇ ಮಧ್ಯವರ್ತಿಗಳ ಕಡೆಯಿಂದ ಖರೀದಿಸುತ್ತಿದ್ದಾರೆ. ಈ ಸರ್ಕಾರ ಯಾರ ಪರವಾಗಿದೆ. ಎಥೆನಾಲ್ ಫ್ಯಾಕ್ಟರಿ ಪರವಾಗಿದ್ದಾರಾ, ರೈತರಿಂದ ನೇರವಾಗಿ ಖರೀದಿಸುವಂತೆ ಹೇಳಲು ಇವರಿಗೆ ಏನಾಗಿದೆ ಎಂದು ಪ್ರಶ್ನಿಸಿದರು.
ಶಿಗ್ಗಾವಿಯಲ್ಲಿ ಖರೀದಿ ಕೇಂದ್ರ ಆಗಲೇಬೇಕು. ಹಾನಗಲ್, ಶಿಗ್ಗಾವಿ, ಸವಣೂರು ತಾಲೂಕುಗಳಲ್ಲಿ ಶೇ 80 ರಷ್ಟು ರೈತರು ಮೆಕ್ಕೆಜೋಳ ಬೆಳೆಯುತ್ತಾರೆ. ನಾವು ರೈತರ ಪರವಾಗಿ ಮಾತನಾಡುವ ನೈತಿಕ ಹಕ್ಕು ಉಳಿಸಿಕೊಂಡಿದ್ದೇವೆ. ನಮ್ಮ ಸರ್ಕಾರ ಇದ್ದಾಗ ಮೆಕ್ಕೆಜೋಳದ ಬೆಲೆ ಬಿದ್ದು ಹೋಗಿತ್ತು. ಆಗ ಇದೇ ಶಿಗ್ಗಾವಿ ಎಪಿಎಂಸಿಯಲ್ಲಿ ರೈತರ ಕೊನೆ ಮೆಕ್ಕೆಜೋಳದ ಕಾಳಿನವರೆಗೂ ಖರೀದಿ ಮಾಡಿದ್ದೇವು. ಏಜೆಂಟರು ಬಂದಿದ್ದರು ಅವರನ್ನು ಬಂಧಿಸಿದ್ದೇವು. 2008 ರಲ್ಲಿ ಗೊಬ್ಬರ ಸಮಸ್ಯೆ ಬಂದಾಗ ಹೆಚ್ಚಿನ ಗೊಬ್ಬರ ತರೆಯಿಸಿ ನಾನೇ ನಿಂತು ಹಂಚಿಕೆ ಮಾಡಿಸಿದ್ದೆ. ಈ ವರ್ಷವೂ ನಾವು ಗೊಬ್ಬರ ಹಂಚುವ ಕೆಲಸ ಮಾಡಿದ್ದೇವೆ ಎಂದರು.
ನಾನು ಸಿಎಂ ಆಗಿದ್ದಾಗ ಮೊದಲು ಅಧಿಕಾರಿಗಳನ್ನು ಕರೆದು ರೈತರ ಮಕ್ಕಳಿಗೆ ವಿದ್ಯಾನಿಧಿ ನೀಡುವಂತೆ ಆದೇಶ ಮಾಡಿದೆ. 8 ನೇ ತರಗತಿಯಿಂದ ಪಿಜಿ, ಪಿಎಚ್ ಡಿ ಮಾಡುವವರೆಗೂ ವಿದ್ಯಾರ್ಥಿ ವೇತನ ನೀಡಿದ್ದೇವೆ. ಒಂದೇ ವರ್ಷದಲ್ಲಿ 11 ಲಕ್ಷ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಿದ್ದೇವು. ಈ ಸರ್ಕಾರ ಅದನ್ನು ನಿಲ್ಲಿಸಿದೆ. ಎರಡನೇಯದ್ದು ಎಸ್.ಎಂ.ಕೃಷ್ಣಾ ಅವರು ಸಿಎಂ ಆಗಿದ್ದಾಗ ಯಶಸ್ವಿನಿ ಯೋಜನೆ ತಂದಿದ್ದರು, ಅದನ್ನು ಮುಂದಿನ ಸರ್ಕಾರ ನಿಲ್ಲಿಸಿತ್ತು. ನಾನು ಬಂದು ಅದನ್ನು ಮುಂದವರೆಸಿದೆ. ಬೀಜ ಗೊಬ್ಬರಕ್ಕೆ ಸಬ್ಸಿಡಿ, ಡಿಸೆಲ್ಗೆ ಸಬ್ಸಿಡಿ ಕೊಟ್ಟಿದ್ದೇವೆ. ಎಸ್.ಎಂ.ಕೃಷ್ಣಾ ಕೊಟ್ಟ ಯೋಜನೆಯನ್ನು ನಾವು ರೈತರ ಪರ ಇದೆ ಎಂದು ಮುಂದುವರೆಸಿದ್ದೇವೆ. ಇವರು ಬೊಮ್ಮಾಯಿ ಅವರ ಯೋಜನೆ ಅಂತ ನಿಲ್ಲಿಸಿದ್ದಿದ್ದಾರೆ.
ಇದು ರೈತರ ವಿರೋಧಿ ಸರ್ಕಾರ, ನಾವು ಕೊಟ್ಟರೆ ಬೊಮ್ಮಾಯಿಗೆ ಹೆಸರು ಬರುತ್ತದೆ ಎಂದು ನಿಲ್ಲಿಸಿದರು. ಪ್ರತಿಯೊಬ್ಬ ರೈತರಿಂದ ಸುಮಾರು ನೂರು ಕ್ವಿಂಟಾಲ್ ಮೆಕ್ಕೆಜೋಳ ಖರಿದಿಸುವಂತೆ ನಾವು ಹೇಳಿದ್ದೇವು. ಇವರು ಐವತು ಕ್ವಿಂಟಾಲ್ ಖರೀದಿಸುವುದಾಗಿ ಹೇಳಿದ್ದಾರೆ. ಅದನ್ನಾದರೂ ಖರೀದಿಸಲು ಚೀಲ ಹಿಡಿದುಕೊಂಡು ಬಂದಿಲ್ಲ. ಇದೇ ರೀತಿ ಸಂದರ್ಭ ಬಂದಾಗ ದೇವರಾಜ ಅರಸು ಅವರು ಸಿಎಂ ಆಗಿದ್ದಾಗ ಅಧಿಕಾರಿಗಳಿಗೆ ಗೋಣಿ ಚೀಲ ಹಿಡಿದುಕೊಂಡು ರೈತರ ಬಳಿ ಹೋಗಿ ಎಂದು ಹೇಳಿದ್ದರು. ಆ ರೀತಿ ಈ ಸರ್ಕಾರ ಬಂದಿಲ್ಲ. ರೈತರೆಂದರೆ ಈ ಸರ್ಕಾರಕ್ಕೆ ಅಸಡ್ಡೆ ಎಂದು ವಾಗ್ದಾಳಿ ನಡೆಸಿದರು.
ಶಿಗ್ಗಾವಿಯಲ್ಲಿ 26 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಗೋವಿನ ಜೋಳ ಬೆಳೆದಿದ್ದಾರೆ. ಬೇರೆ ಯಾವದು ಬೆಳೆ ಬಂದಿಲ್ಲ. ಬೇಳೆ ಪರಿಹಾರವನ್ನು ಕೊಟ್ಟಿಲ್ಲ. ಇನ್ಸುರೆನ್ಸ್ ನಲ್ಲಿಯೂ ಅನ್ಯಾಯ ಆಗಿದೆ. ಶಿಗ್ಗಾವಿ ತಹಸೀಲ್ದಾರ್ ಸರ್ಕಾರಕ್ಕೆ ಕೂಡಲೆ ವರದಿ ಸಲ್ಲಿಸಿ ದಿನಾಂಕ ಘೋಷಣೆ ಮಾಡಲು ಹೇಳಬೇಕು. ಇಲ್ಲದಿದ್ದರೆ ಉಗ್ರವಾದ ಹೋರಾಟ ಮಾಡುತ್ತೇವೆ. ಈ ಕುರಿತು ಕೃಷಿ ಸಚಿವರೊಂದಿಗೂ ಮಾತನಾಡುತ್ತೇನೆ. ರೈತರ ಪರವಾಗಿ ಖರೀದಿ ಕೇಂದ್ರ ತೆರೆಯುವಂತೆ ಸರ್ಕಾರಕ್ಕೆ ವರದಿ ಕೊಟ್ಟು ನ್ಯಾಯದ ಪರವಾಗಿ ನಡೆದುಕೊಳ್ಳುವಂತೆ ತಹಸೀಲ್ದಾರ್ ಅವರಿಗೆ ಆಗ್ರಹಿಸಿದರು.
-
ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಕೈ ಹಿಡಿಯುತ್ತವೆ: ಸಿದ್ದರಾಮಯ್ಯ ಹೇಳಿಕೆ -
ಉಜ್ವಲ ಯೋಜನೆ ಬದಲು ಸೌದೆ ಒಲೆ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ -
ಬಾಗಲಕೋಟೆಯಲ್ಲಿ ಕಾಂಗ್ರೆಸ್ಗೆ ಪೂರಕ ವಾತಾವರಣ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಸಿಎಂ -
IPL 2026 Free Ticket: ರಾಜ್ಯದ ಶಾಸಕರಿಗೆ ಪ್ರತಿ ಪಂದ್ಯಕ್ಕೂ 3 ಟಿಕೆಟ್ ಉಚಿತ; ಡಿ.ಕೆ.ಶಿವಕುಮಾರ್ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ












Click it and Unblock the Notifications