ಅಂತರ ಜಿಲ್ಲಾ ಸಂಚಾರ; ಕರ್ನಾಟಕ ಸರ್ಕಾರದ ಸ್ಪಷ್ಟನೆಗಳು
ಬೆಂಗಳೂರು, ಮೇ 20 : ಕರ್ನಾಟಕದಲ್ಲಿ ಲಾಕ್ ಡೌನ್ ನಿಯಮ ಸಡಿಲಿಕೆ ಆಗಿದೆ. ಅಂತರ ಜಿಲ್ಲೆಗಳ ನಡುವೆ ಸರ್ಕಾರಿ ಬಸ್ ಸಂಚಾರವೂ ಆರಂಭವಾಗಿದೆ. ಆದರೆ, ಅಂತರ ಜಿಲ್ಲಾ ಸಂಚಾರಕ್ಕೆ ಪಾಸು ಬೇಕೆ?, ಬೇಡವೆ? ಎಂಬ ಗೊಂದಲ ಜನರಲ್ಲಿ ಮುಂದುವರೆದಿದೆ.
Recommended Video
ಕರ್ನಾಟಕ ಸರ್ಕಾರ ಈ ಕುರಿತು ಸ್ಪಷ್ಟನೆ ನೀಡಿದೆ. ಅಂತರ ಜಿಲ್ಲೆಗಳ ನಡುವೆ ಬಸ್ನಲ್ಲಿ ಸಂಚಾರ ನಡೆಸುವ ಪ್ರಯಾಣಿಕರಿಗೆ ಪಾಸುಗಳ ಅಗತ್ಯವಿಲ್ಲ. ಆದರೆ, ಖಾಸಗಿ ವಾಹನಗಳಲ್ಲಿ ಸಂಚಾರ ನಡೆಸುವ ಜನರು ಕಡ್ಡಾಯವಾಗಿ ಪಾಸು ಪಡೆಯಬೇಕು.
ಸೇವಾ ಸಿಂಧು ಪೋರ್ಟಲ್ ಮೂಲಕ ಜನರು ಪಾಸುಗಳನ್ನು ಪಡೆಯಬೇಕಿದೆ. ಅಂತರ ಜಿಲ್ಲೆ ನಡುವೆ ಸಂಚಾರ ನಡೆಸುವಾಗ 3ನೇ ಹಂತದ ಲಾಕ್ ಡೌನ್ ಜಾರಿಗೊಳಿಸುವಾಗ ಸೂಚಿಸಿದ ಮಾರ್ಗಸೂಚಿಗಳನ್ನು ಪಾಲನೆ ಮಾಡಲೇಬೇಕು.

ಸರ್ಕಾರಿ ನೌಕಕರರು, ಕಾರ್ಖನೆ ಕೆಲಸಕ್ಕೆ ಹೋಗುವ ಉದ್ಯೋಗಿಗಳು ಹೀಗೆ ಪ್ರತಿದಿನ ಓಡಾಡುವವರು ಪಾಸು ಪಡೆಯುವ ಅಗತ್ಯವಿಲ್ಲ. ತಮ್ಮ ಗುರುತಿನ ಚೀಟಿಯನ್ನು ತೋರಿಸಿ ಪ್ರಯಾಣ ನಡೆಸಬಹುದು. ಖಾಸಗಿ ವಾಹನದಲ್ಲಿ ಹೋಗುವವರು ಪಾಸು ಪಡೆಯಲೇಬೇಕು.
ಟ್ಯಾಕ್ಸಿಯಲ್ಲಿ ಚಾಲಕನ ಜೊತೆ ಇಬ್ಬರು. ಮ್ಯಾಕ್ಸಿ ಕ್ಯಾಬ್ನಲ್ಲಿ ಚಾಲಕನ ಜೊತೆ ಮೂವರು ಪ್ರಯಾಣ ಮಾಡಲು ಅನುಮತಿ ಇದೆ. ಸೇವಾ ಸಿಂಧು ಪೋರ್ಟಲ್ನಲ್ಲಿ ಮೊಬೈಲ್ ಸಂಖ್ಯೆಯನ್ನು ನಮೂದಿಸಿ ಸುಲಭವಾಗಿ ಪಾಸುಗಳನ್ನು ಪಡೆಯಬಹುದು.
ಮೊಬೈಲ್ ಮತ್ತು ವೆಬ್ ಸೈಟ್ ಮೂಲಕ ಜನರು ಸುಲಭವಾಗಿ ಪಾಸುಗಳನ್ನು ಪಡೆಯಬಹುದು. ಪ್ರತಿ ಜಿಲ್ಲೆಯಲ್ಲಿಯೂ ಚೆಕ್ ಪೋಸ್ಟ್ಗಳಿದ್ದು, ಖಾಸಗಿ ವಾಹನದಲ್ಲಿ ಸಂಚಾರ ನಡೆಸುವ ಜನರನ್ನು ತಪಾಸಣೆ ಮಾಡಲಾಗುತ್ತಿದೆ.
ಜನರಿಗೆ ಖಾಸಗಿ ವಾಹನದಲ್ಲಿ ಬೆಳಗ್ಗೆ 7 ರಿಂದ ಸಂಜೆ 7ಗಂಟೆ ತನಕ ಮಾತ್ರ ಸಂಚಾರ ನಡೆಸಲು ಅವಕಾಶ ನೀಡಲಾಗಿದೆ. ಯಾವುದಾದರೂ ಜಿಲ್ಲೆ ಕಂಟೈನ್ಮೆಂಟ್ ವಲಯದಲ್ಲಿದ್ದರೆ ಅಲ್ಲಿಗೆ ಯಾರೂ ಸಹ ಪ್ರಯಾಣ ಮಾಡುವಂತಿಲ್ಲ.
-
ಅಕ್ಷಯ ತೃತೀಯದ ದಿನ ಈ ಸಮಯದಲ್ಲಿ ವಾಹನ ಖರೀದಿಸಿದರೆ ಅದೃಷ್ಟ: ರಾಶಿಗೆ ಅನುಗುಣವಾಗಿ ಈ ಬಣ್ಣಕ್ಕಿರಲಿ ಆದ್ಯತೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ












Click it and Unblock the Notifications