ಹರಿಹರ-ಬೆಂಗಳೂರು ಇಂಟರ್ ಸಿಟಿ ರೈಲು ರೆಡಿ!
ದಾವಣಗೆರೆ,ನ.2: ಕನ್ನಡ ರಾಜ್ಯೋತ್ಸವದ ಅಂಗವಾಗಿ ಕೇಂದ್ರ ರೈಲ್ವೆ ಸಚಿವ ಡಿವಿ ಸದಾನಂದ ಗೌಡ ಅವರು ರಾಜ್ಯಕ್ಕೆ ನಾಲ್ಕು ರೈಲುಗಳನ್ನು ಕೊಡುಗೆಯಾಗಿ ನೀಡಿದ ಬೆನ್ನಲ್ಲೇ ಬಹುನಿರೀಕ್ಷಿತ ಹರಿಹರ-ಬೆಂಗಳೂರು ಇಂಟರ್ ಸಿಟಿ ರೈಲು ಸಂಚಾರಕ್ಕೆ ಸಿದ್ಧವಾಗಿರುವ ಸಿಹಿ ಸುದ್ದಿ ಬಂದಿದೆ.
ಹರಿಹರ, ದಾವಣಗೆರೆ, ಕಡೂರು, ಬೀರೂರು, ಅರಸೀಕೆರೆ ಹಾಗೂ ತುಮಕೂರು ಭಾಗದ ಜನರ ಬಹುದಿನಗಳ ಬೇಡಿಕೆಗೆ ಭಾರತೀಯ ರೈಲ್ವೆ ಸ್ಪಂದಿಸಿದ್ದು, ಹರಿಹರ -ಬೆಂಗಳೂರು ಇಂಟರ್ ಸಿಟಿ ರೈಲಿಗೆ ಹಸಿರು ನಿಶಾನೆ ತೋರಿದೆ. ನ.7ರಂದು ಇಂಟರ್ ಸಿಟಿ ರೈಲು ಸಂಚಾರ ಆರಂಭಿಸಲಿದೆ.
ನ.7ರಂದು ಹರಿಹರ -ಬೆಂಗಳೂರು ನಡುವೆ ಇಂಟರ್ ಸಿಟಿ ರೈಲಿನ ಸಂಚಾರಕ್ಕೆ ಅಧಿಕೃತವಾಗಿ ಚಾಲನೆ ಸಿಗಲಿದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜಿ.ಎಂ ಸಿದ್ದೇಶ್ವರ ಹೇಳಿದ್ದಾರೆ.ವಾರದಲ್ಲಿ ಮೂರು ದಿನ ರೈಲು ಸಂಚರಿಸಲಿದ್ದು, ಹರಿಹರದಿಂದ ಬೆಳಗ್ಗೆ 5.30ಕ್ಕೆ ಸಂಚಾರ ಆರಂಭಿಸಲಿದೆ ಎಂದು ಸಿದ್ದೇಶ್ವರ್ ಅವರು ವಿವರಿಸಿದರು. [ನಾಲ್ಕು ನೂತನ ರೈಲುಗಳ ವೇಳಾಪಟ್ಟಿ]

ಉದ್ಘಾಟನಾ ದಿನ ಬೆಳಗ್ಗೆ 8.30ಕ್ಕೆ ಹರಿಹರ ರೈಲು ನಿಲ್ದಾಣ ಬಿಡಲಿರುವ ರೈಲು 9 ಗಂಟೆ ಸುಮಾರಿಗೆ ದಾವಣಗೆರೆ ತಲುಪಲಿದೆ. ರೈಲಿನ ವೇಳಾಪಟ್ಟಿ ಬಗ್ಗೆ ಇನ್ನೂ ವಿವರಗಳು ಲಭ್ಯವಾಗಿಲ್ಲ. [ತುಂಗಭದ್ರೆ ಉಸಿರುಗಟ್ಟಿಸುತ್ತಿರುವ ಗಟಾರದ ನೀರು]
ನ.7ರಂದು ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆ ನಡೆಸಲಾಗುತ್ತದೆ., ಎಪಿಎಂಸಿ ಬಳಿ ರಸ್ತೆಗೆ ಪರ್ಯಾಯ ಸೇತುವೆ ನಿರ್ಮಾಣ, ಅಶೋಕ ರಸ್ತೆ ರೈಲ್ವೆ ಮೇಲ್ಸೇತುವೆ ಶಂಕುಸ್ಥಾಪನೆ ನಡೆಯಲಿದೆ. ಎಲ್ಲಾ ಕಾರ್ಯಕ್ರಮಗಳಿಗೆ ಕೇಂದ್ರ ರೈಲ್ವೆ ಸಚಿವ ಡಿವಿ ಸದಾನಂದ ಗೌಡ ಅವರು ಚಾಲನೆ ನೀಡಲಿದ್ದಾರೆ ಎಂದು ಜಿಎಂ ಸಿದ್ದೇಶ್ವರ್ ಅವರು ಹೇಳಿದರು.
-
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ












Click it and Unblock the Notifications