ಹರಿಹರ-ಬೆಂಗಳೂರು ಇಂಟರ್ ಸಿಟಿ ರೈಲು ರೆಡಿ!
ದಾವಣಗೆರೆ,ನ.2: ಕನ್ನಡ ರಾಜ್ಯೋತ್ಸವದ ಅಂಗವಾಗಿ ಕೇಂದ್ರ ರೈಲ್ವೆ ಸಚಿವ ಡಿವಿ ಸದಾನಂದ ಗೌಡ ಅವರು ರಾಜ್ಯಕ್ಕೆ ನಾಲ್ಕು ರೈಲುಗಳನ್ನು ಕೊಡುಗೆಯಾಗಿ ನೀಡಿದ ಬೆನ್ನಲ್ಲೇ ಬಹುನಿರೀಕ್ಷಿತ ಹರಿಹರ-ಬೆಂಗಳೂರು ಇಂಟರ್ ಸಿಟಿ ರೈಲು ಸಂಚಾರಕ್ಕೆ ಸಿದ್ಧವಾಗಿರುವ ಸಿಹಿ ಸುದ್ದಿ ಬಂದಿದೆ.
ಹರಿಹರ, ದಾವಣಗೆರೆ, ಕಡೂರು, ಬೀರೂರು, ಅರಸೀಕೆರೆ ಹಾಗೂ ತುಮಕೂರು ಭಾಗದ ಜನರ ಬಹುದಿನಗಳ ಬೇಡಿಕೆಗೆ ಭಾರತೀಯ ರೈಲ್ವೆ ಸ್ಪಂದಿಸಿದ್ದು, ಹರಿಹರ -ಬೆಂಗಳೂರು ಇಂಟರ್ ಸಿಟಿ ರೈಲಿಗೆ ಹಸಿರು ನಿಶಾನೆ ತೋರಿದೆ. ನ.7ರಂದು ಇಂಟರ್ ಸಿಟಿ ರೈಲು ಸಂಚಾರ ಆರಂಭಿಸಲಿದೆ.
ನ.7ರಂದು ಹರಿಹರ -ಬೆಂಗಳೂರು ನಡುವೆ ಇಂಟರ್ ಸಿಟಿ ರೈಲಿನ ಸಂಚಾರಕ್ಕೆ ಅಧಿಕೃತವಾಗಿ ಚಾಲನೆ ಸಿಗಲಿದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜಿ.ಎಂ ಸಿದ್ದೇಶ್ವರ ಹೇಳಿದ್ದಾರೆ.ವಾರದಲ್ಲಿ ಮೂರು ದಿನ ರೈಲು ಸಂಚರಿಸಲಿದ್ದು, ಹರಿಹರದಿಂದ ಬೆಳಗ್ಗೆ 5.30ಕ್ಕೆ ಸಂಚಾರ ಆರಂಭಿಸಲಿದೆ ಎಂದು ಸಿದ್ದೇಶ್ವರ್ ಅವರು ವಿವರಿಸಿದರು. [ನಾಲ್ಕು ನೂತನ ರೈಲುಗಳ ವೇಳಾಪಟ್ಟಿ]

ಉದ್ಘಾಟನಾ ದಿನ ಬೆಳಗ್ಗೆ 8.30ಕ್ಕೆ ಹರಿಹರ ರೈಲು ನಿಲ್ದಾಣ ಬಿಡಲಿರುವ ರೈಲು 9 ಗಂಟೆ ಸುಮಾರಿಗೆ ದಾವಣಗೆರೆ ತಲುಪಲಿದೆ. ರೈಲಿನ ವೇಳಾಪಟ್ಟಿ ಬಗ್ಗೆ ಇನ್ನೂ ವಿವರಗಳು ಲಭ್ಯವಾಗಿಲ್ಲ. [ತುಂಗಭದ್ರೆ ಉಸಿರುಗಟ್ಟಿಸುತ್ತಿರುವ ಗಟಾರದ ನೀರು]
ನ.7ರಂದು ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆ ನಡೆಸಲಾಗುತ್ತದೆ., ಎಪಿಎಂಸಿ ಬಳಿ ರಸ್ತೆಗೆ ಪರ್ಯಾಯ ಸೇತುವೆ ನಿರ್ಮಾಣ, ಅಶೋಕ ರಸ್ತೆ ರೈಲ್ವೆ ಮೇಲ್ಸೇತುವೆ ಶಂಕುಸ್ಥಾಪನೆ ನಡೆಯಲಿದೆ. ಎಲ್ಲಾ ಕಾರ್ಯಕ್ರಮಗಳಿಗೆ ಕೇಂದ್ರ ರೈಲ್ವೆ ಸಚಿವ ಡಿವಿ ಸದಾನಂದ ಗೌಡ ಅವರು ಚಾಲನೆ ನೀಡಲಿದ್ದಾರೆ ಎಂದು ಜಿಎಂ ಸಿದ್ದೇಶ್ವರ್ ಅವರು ಹೇಳಿದರು.
-
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ












Click it and Unblock the Notifications