ಅಂತರರಾಜ್ಯ ಜಲವಿವಾದ: ದೆಹಲಿಯಲ್ಲಿ ಕಾನೂನು ತಜ್ಞರೊಂದಿಗೆ ಸಭೆ: ಬಸವರಾಜ ಬೊಮ್ಮಾಯಿ
ಬೆಂಗಳೂರು, ಆ. 24: ಅಂತರರಾಜ್ಯ ಜಲ ವಿವಾದಗಳ ಬಗ್ಗೆ ನವದೆಹಲಿಯಲ್ಲಿ ಕಾನೂನು ತಜ್ಞರ ಜತೆ ಸಭೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾದ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ್ದಾರೆ.
ರಾಜ್ಯ ಸರ್ಕಾರದ ಅಡ್ವೋಕೇಟ್ ಜನರಲ್, ರಾಜ್ಯದ ಹಿರಿಯ ವಕೀಲರು, ಕಾನೂನು ತಜ್ಞರು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ. ರಾಜ್ಯದ ನೀರಾವರಿ ವಿವಾದದ ಬಗ್ಗೆ ರಾಜ್ಯದ ಮುಂದಿನ ನಡೆಯ ಬಗ್ಗೆ ಈ ಸಭೆಯಲ್ಲಿ ತೀರ್ಮಾನಿಸಲಾಗುವುದು. ಕರ್ನಾಟಕದ ನೆಲ, ಜಲ, ಭಾಷೆಯ ಹಿತರಕ್ಷಣೆ ಗೆ ಸರ್ವ ಪ್ರಯತ್ನ ಮಾಡಲಾಗುವುದು, ಈ ವಿಷಯದಲ್ಲಿ ಯಾವುದೇ ರೀತಿಯ ಆತಂಕ ಬೇಡ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಇದೆ ತಿಂಗಳ 25 ನೇ ತಾರೀಖಿನಂದು ನವದೆಹಲಿಗೆ ತೆರಳಿ 26 ರಂದು ಎಲ್ಲ ಕೇಂದ್ರ ಸಚಿವರನ್ನು ಭೇಟಿ ಮಾಡಿ ರಾಜ್ಯದ ಅಭಿವೃದ್ಧಿಯ ಬಗ್ಗೆ ಚರ್ಚಿಸಲಾಗುವುದು. ಕೇಂದ್ರ ಆರೋಗ್ಯ, ಹಣಕಾಸು, ಜಲಶಕ್ತಿ , ಕೃಷಿ ಹಾಗೂ ರಕ್ಷಣಾ ಸಚಿವರ ಸಮಯ ಕೇಳಿದ್ದು, ಅವರನ್ನು ನವದೆಹಲಿಯಲ್ಲಿ ಭೇಟಿಯಾಗಲಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇರುವ ತಜ್ಞರ ಸಮಿತಿ ಮುಂದುವರೆಯಲಿದೆ. ಕೇಂದ್ರ ವಿಪತ್ತು ನಿರ್ವಹಣಾ ಸಮಿತಿ ಆಕ್ಟೊಬರ್ ಮಾಹೆಯಲ್ಲಿ ರಾಜ್ಯಕ್ಕೆ ಬರಬಹುದು. ಕೋವಿಡ್ ಮೂರನೇ ಅಲೆಯ ನಿಯಂತ್ರಣ ಕ್ಕೆ ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚಿಸಲು ಕೋವಿಡ್ ತಜ್ಞರ ಸಮಿತಿ ಹಾಗೂ ಸಂಬಂಧ ಪಟ್ಟ ಸಚಿವರೊಂದಿಗೆ ಸಭೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬೊಮ್ಮಾಯಿ ತಿಳಿಸಿದ್ದಾರೆ.
ಮೊದಲ ದಿನವೇ ವಿದ್ಯಾರ್ಥಿಗಳ ಉತ್ತಮ ಹಾಜರಾತಿ; ಸಿಎಂ ಬೊಮ್ಮಾಯಿ ಹರ್ಷ:
ರಾಜ್ಯದಲ್ಲಿ ಆ. 23ರಿಂದ 9, 10, 11 ಮತ್ತು 12ನೇ ತರಗತಿಗಳು ಪ್ರಾರಂಭವಾಗಿದ್ದು, ಮೊದಲ ದಿನವೇ ವಿದ್ಯಾರ್ಥಿಗಳು ಬಹಳ ಉತ್ಸಾಹದಿಂದ ತರಗತಿಗಳಿಗೆ ಹಾಜರಾಗಿರುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇದೇವ ಸಂದರ್ಭದಲ್ಲಿ ಹರ್ಷ ವ್ಯಕ್ತಪಡಿಸಿದ್ದಾರೆ. ಮೊದಲ ದಿನ ಬೆಂಗಳೂರಿನ ಮಲ್ಲೇಶ್ವರದ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ನಿರ್ಮಲಾರಾಣಿ ಪ್ರೌಢ ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ್ದೆ.
ನೇರ ತರಗತಿ ನಡೆಸುವುದಕ್ಕೆ ವಿದ್ಯಾರ್ಥಿಗಳು ಬೆಂಬಲ ವ್ಯಕ್ತಪಡಿಸಿದ್ದರು ಎಂದರು. ವಿದ್ಯಾರ್ಥಿಗಳ ಹಾಜರಾತಿಯಿಂದ ಮುಂದಿನ ದಿನಗಳಲ್ಲಿ ಗಡಿ ಜಿಲ್ಲೆಗಳಲ್ಲಿಯೂ ಶಾಲೆ ಆರಂಭಿಸಲು ಚಿಂತನೆ ಮಾಡುವಂತಾಗಿದೆ. ಹೀಗಾಗಿ ಶಾಲಾ-ಕಾಲೇಜುಗಳನ್ನು ಪ್ರಾರಂಭಿಸುವ ಬಗ್ಗೆ ಜಿಲ್ಲಾಧಿಕಾರಿಗಳಿಂದ ವರದಿಯನ್ನು ಪಡೆದು ಈ ತಿಂಗಳ ಕೊನೆಯ ವಾರದಲ್ಲಿ ತಜ್ಞರುಗಳೊಂದಿಗೆ ಚರ್ಚಿಸಿ ಕ್ರಮಗಳನ್ನು ತೆಗೆದುಕೊಳ್ಳುಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
-
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್












Click it and Unblock the Notifications