Get Updates
Get notified of breaking news, exclusive insights, and must-see stories!

ಕರ್ನಾಟಕದಲ್ಲಿ ಬಂಡವಾಳ ಹೂಡಲು ಆಂಧ್ರ, ತೆಲಂಗಾಣ ಉದ್ಯಮಿಗಳಿಗೆ ಸಚಿವ ನಿರಾಣಿ ಕರೆ

ಹೈದರಾಬಾದ್‌, ಅ.15: ನವೆಂಬರ್‌ 2 ರಿಂದ 4ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ‌ ಬಂಡವಾಳ ಹೂಡಿಕೆದಾರರ ಸಮಾವೇಶದ ಭಾಗವಾಗಿ ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ ಆರ್. ನಿರಾಣಿ ಅವರು ಹೈದರಾಬಾದ್‌ನಲ್ಲಿ ಶುಕ್ರವಾರ ನಡೆಸಿದ ರೋಡ್‌ಶೋ ಯಶಸ್ವಿಯಾಗಿದೆ.

ಹೈದರಾಬಾದ್‌ನ ಖಾಸಗಿ ಹೋಟೆಲ್‌ನಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಮಾತನಾಡಿದ ಸಚಿವ ನಿರಾಣಿ," ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಪೂರ್ವಭಾಗವಾಗಿ ದಿಲ್ಲಿಯಲ್ಲಿ ಚಾಲನೆ ನೀಡಿದ ದೇಶೀಯ ರೋಡ್‌ ಶೋ ಯಶಸ್ವಿಯಾಗಿದೆ. ಅದೇ ರೀತಿ, ಹೈದರಾಬಾದ್‌ ರೋಡ್‌ ಶೋ ವೇಳೆ ಉದ್ಯಮಿಗಳ ಜತೆ ಇಂದು ನಡೆಸಿದ ಮಾತುಕತೆ ಫಲಪ್ರದವಾಗಿದೆ" ಎಂದಿದ್ದಾರೆ.

"ರಾಜ್ಯದಲ್ಲಿ ಹೂಡಿಕೆಗೆ ಇರುವ ಅವಕಾಶಗಳು ನಮ್ಮ ಕೈಗಾರಿಕಾ ನೀತಿ ಕುರಿತು ಆಂಧ್ರ ಹಾಗೂ ತೆಲಂಗಾಣದ ಉದ್ಯಮಿಗಳಿಗೆ ಮಾಹಿತಿ ನೀಡಲಾಗಿದೆ. ರಾಜ್ಯದಲ್ಲಿ ಬಂಡವಾಳ ಹೂಡಲು ಹಾಗೂ ಉದ್ಯಮ ವಿಸ್ತರಣೆಗೆ ಹಲವು ಕಂಪನಿಗಳ ಮುಖ್ಯಸ್ಥರು ಒಲವು ತೋರಿದ್ದಾರೆ" ಎಂದು ಸಚಿವ ನಿರಾಣಿ ಹೇಳಿದ್ದಾರೆ.

ಸಮಾವೇಶದಲ್ಲಿ 5,000ಕ್ಕೂ ಹೆಚ್ಚು ಗಣ್ಯರು ಭಾಗವಹಿಸುವ ನಿರೀಕ್ಷೆ

ಸಮಾವೇಶದಲ್ಲಿ 5,000ಕ್ಕೂ ಹೆಚ್ಚು ಗಣ್ಯರು ಭಾಗವಹಿಸುವ ನಿರೀಕ್ಷೆ

"ಜಾಗತಿ ಹೂಡಿಕೆದಾರರ ಸಮಾವೇಶದ ಅಂತಾರಾಷ್ಟ್ರೀಯ ರೋಡ್‌ಶೋನ ಭಾಗವಾಗಿ ಜಪಾನ್‌, ದಕ್ಷಿಣ ಕೊರಿಯಾ, ಅಮೆರಿಕ ಹಾಗೂ ಯೂರೋಪ್‌ಗೆ ಭೇಟಿ ನೀಡಲಾಗಿದೆ. ಈ ದೇಶಗಳಿಂದ ದೊಡ್ಡ ಮಟ್ಟದ ವಿದೇಶಿ ಬಂಡವಾಳ ಹರಿದು ಬರುವ ನಿರೀಕ್ಷೆ ಇದೆ. ದೇಶೀಯ ರೋಡ್‌ ಶೋಮುಂಬಯಿನಲ್ಲಿ ಮುಕ್ತವಾಗಲಿದೆ" ಎಂದು ನಿರಾಣಿ ತಿಳಿಸಿದ್ದಾರೆ.

"ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ 5,000ಕ್ಕೂ ಹೆಚ್ಚು ಗಣ್ಯರು ಭಾಗವಹಿಸುವ ನಿರೀಕ್ಷೆ ಇದೆ. 5 ಲಕ್ಷ ಕೋಟಿ ರೂಪಾಯಿ ಬಂಡವಾಳ ಹೂಡಿಕೆಯಾಗುವ ನಿರೀಕ್ಷೆ ಇದ್ದು, ಇದರಿಂದ 5 ಲಕ್ಷ ಜನರಿಗೆ ಉದ್ಯೋಗ ದೊರೆಯಲಿದೆ. ಜಾಗತಿಕ ಹೂಡಿಕೆದಾರರ ಸಮಾವೇಶ 'ಬ್ಯುಲ್ಡ್‌ ಫಾರ್‌ ದ ವರ್ಲ್ಡ್‌' ಎಂಬ ಪರಿಕಲ್ಪನೆಯಡಿ ಅನಾವರಣಗೊಳ್ಳುತ್ತಿದೆ. ಅತ್ಯುತ್ತಮ ಕೈಗಾರಿಕಾ ಪರಿಸರ ವ್ಯವಸ್ಥೆ ಹೊಂದಿರುವ ಕರ್ನಾಟಕ, ಜಾಗತಿಕ ಹೂಡಿಕೆದಾರರ ನೆಚ್ಚಿನ ತಾಣ" ಎಂದಿದ್ದಾರೆ.

3 ಲಕ್ಷ ಕೋಟಿ ರೂಪಾಯಿಗೂ ಹೆಚ್ಚು ಹೂಡಿಕೆ ಪ್ರಸ್ತಾವನೆಗಳು

3 ಲಕ್ಷ ಕೋಟಿ ರೂಪಾಯಿಗೂ ಹೆಚ್ಚು ಹೂಡಿಕೆ ಪ್ರಸ್ತಾವನೆಗಳು

"ನಮ್ಮ ಸರ್ಕಾರದ ಹಲವು ಸುಧಾರಣಾ ಕ್ರಮಗಳ ಪರಿಣಾಮವಾಗಿ ಕರ್ನಾಟಕವು ದೇಶದ ಆಕರ್ಷಕ ಹೂಡಿಕೆ ತಾಣವಾಗಿ ಹೊರಹೊಮ್ಮಿದೆ. 2021ರ ಜುಲೈನಿಂದೀಚೆಗೆ ಬರೋಬ್ಬರಿ 3 ಲಕ್ಷ ಕೋಟಿ ರೂಪಾಯಿಗೂ ಹೆಚ್ಚು ಹೂಡಿಕೆ ಪ್ರಸ್ತಾವನೆಗಳು ರಾಜ್ಯಕ್ಕೆ ಬಂದಿವೆ. ದೇಶದ ಒಟ್ಟಾರೆ ವಿದೇಶಿ ಹೂಡಿಕೆಯಲ್ಲಿ ರಾಜ್ಯದ ಪಾಲು 38%. ಬರೋಬ್ಬರಿ 22 ಶತಕೋಟಿ ಡಾಲರ್ ವಿದೇಶಿ ನೇರ ಹೂಡಿಕೆ ರಾಜ್ಯಕ್ಕೆ ಹರಿದು ಬಂದಿದೆ" ಎಂದು ಅವರು ವಿವರಿಸಿದ್ದಾರೆ.

'ಈಸ್ ಆಫ್ ಲ್ಯಾಂಡ್ ಅಲಾಟ್‌ಮೆಂಟ್' ಕ್ರಮ ಜಾರಿ

'ಈಸ್ ಆಫ್ ಲ್ಯಾಂಡ್ ಅಲಾಟ್‌ಮೆಂಟ್' ಕ್ರಮ ಜಾರಿ

"ಸುಲಲಿತ ವ್ಯವಹಾರಕ್ಕೆ ಅಫಿಡವಿಟ್‌ ಬೇಸ್ಡ್‌ ಕ್ಲಿಯರೆನ್ಸ್‌ ಯೋಜನೆಯ ಜಾರಿಗೊಳಿಸಿರುವ ಕರ್ನಾಟಕ, ಈಸ್‌ ಆಫ್‌ ಡೂಯಿಂಗ್‌ ಬ್ಯುಸಿನೆಸ್‌ಗೆ ಶ್ರೇಯಾಂಕ ಪಟ್ಟಿಯಲ್ಲಿ "ಟಾಪ್‌ ಅಚೀವರ್" ಆಗಿ ಹೊರಹೊಮ್ಮಿದೆ. ಜತೆಗೆ, ಹೂಡಿಕೆದಾರರಿಗೆ ಭೂ ಹಂಚಿಕೆಗೆ ಅನುಕೂಲವಾಗುವಂತೆ 'ಈಸ್ ಆಫ್ ಲ್ಯಾಂಡ್ ಅಲಾಟ್‌ಮೆಂಟ್' ಕ್ರಮ ಜಾರಿಗೊಳಿಸಲಾಗಿದೆ" ಎಂದಿದ್ದಾರೆ.

"ಜಾಗತಿಕ ಹೂಡಿಕೆದಾರರ ಸಮಾವೇಶದ ಸಂದರ್ಭದಲ್ಲಿ ಭೂ ಹಂಚಿಕೆಗೆ ಅನುಕೂಲವಾಗುವಂತೆ ರಾಜ್ಯದಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಹೆಚ್ಚುವರಿಯಾಗಿ 50 ಸಾವಿರ ಎಕರೆ ಭೂ ಸ್ವಾಧೀನ ಪಡಿಸಿಕೊಳ್ಳಲಾಗುತ್ತಿದೆ. ಬೆಂಗಳೂರಿನಲ್ಲಿ 20 ಸಾವಿರ ಮತ್ತು ಇತರ ಜಿಲ್ಲೆಗಳಲ್ಲಿ 30 ಸಾವಿರ ಎಕರೆ ಭೂಮಿ ಸ್ವಾಧೀನಕ್ಕೆ ಕ್ರಮ ವಹಿಸಲಾಗಿದೆ" ಎಂದು ಸಚಿವರು ತಿಳಿಸಿದ್ದಾರೆ.

ಸಮಾವೇಶದಲ್ಲಿ ವೈನ್‌ ಮತ್ತು ಆಹಾರ ಮೇಳ

ಸಮಾವೇಶದಲ್ಲಿ ವೈನ್‌ ಮತ್ತು ಆಹಾರ ಮೇಳ

" ಹೈದರಾಬಾದ್‌ ರೋಡ್‌ಶೋನಲ್ಲಿ ಭಾರತ್ ಬಯೋಟೆಕ್, ವಿಮತ ಲ್ಯಾಬ್ಸ್, ಲೌರಸ್ ಲ್ಯಾಬ್ಸ್, ಪೆಂಟಗನ್ ರಗ್ಗಡ್ ಸಿಸ್ಟಮ್, ವೈಬ್ರೆಂಟ್ ಎನರ್ಜಿ‌ ಸೇರಿದಂತೆ ಹಲವು ಕಂಪನಿಗಳ ಪ್ರತಿನಿಧಿಗಳ ಜತೆ ಮಾತುಕತೆ ನಡೆಸಲಾಗಿದೆ" ಎಂದು ಸಚಿವರು ತಿಳಿಸಿದ್ದಾರೆ.

ಈ ಸಮಾವೇಶ ಬಂಡವಾಳ ಹೂಡಿಕೆಗಷ್ಟೇ ಸೀಮಿತವಾಗಿಲ್ಲ. ಕರ್ನಾಟಕದ ಸಾಂಸ್ಕೃತಿ ಲೋಕ ಅಲ್ಲಿ ಅನಾವರಣಗೊಳ್ಳಲ್ಲಿದೆ. ವೈನ್ ಮತ್ತು ಆಹಾರ‌ ಮೇಳದಲ್ಲಿ ಕರ್ನಾಟಕದ ವಿಶೇಷ ಖಾದ್ಯಗಳನ್ನು ಸವಿಯಬಹುದು," ಎಂದು ಸಚಿವರು ವಿವರಿಸಿದ್ದಾರೆ.

ಅಸೋಚಾಮ್‌ ತೆಲಂಗಾಣ ರಾಜ್ಯ ಅಭಿವೃದ್ಧಿ ಮಂಡಳಿ ಅಧ್ಯಕ್ಷ ರವಿ ಕುಮಾರ್‌ ರೆಡ್ಡಿ, ಅಸೋಚಾಮ್ ಪ್ರಧಾನ ಕಾರ್ಯದರ್ಶಿ ಪೂಜಾ ಅಹ್ಲುವಾಲಿಯಾ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಡಾ. ಇ.ವಿ ರಮಣರೆಡ್ಡಿ, ಕೈಗಾರಿಕಾಭಿವೃದ್ಧಿ ಆಯುಕ್ತರಾದ ಗುಂಜನ್‌ ಕೃಷ್ಣ ಹಾಗೂ ಹಿರಿಯ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+