ಟೀಯೆಸ್ಸಾರ್ ಸ್ಮಾರಕ, ಮೊಹರೆ ಹಣಮಂತರಾಯ ಪ್ರಶಸ್ತಿಗಳಿಗೆ ಸಮಿತಿ ರಚನೆ: ನಾಮ ನಿರ್ದೇಶನಗಳ ಆಹ್ವಾನ
ಟೀಯೆಸ್ಸಾರ್ ಸ್ಮಾರಕ ಪ್ರಶಸ್ತಿ ಹಾಗೂ ಮೊಹರೆ ಹಣಮಂತರಾಯ ಪ್ರಶಸ್ತಿಗಳಿಗೆ ಆಯ್ಕೆ ಸಮಿತಿ ರಚಿಸಲಾಗಿದ್ದು, ಪ್ರಶಸ್ತಿಗೆ ನಾಮ ನಿರ್ದೇಶನಗಳನ್ನು ಆಹ್ವಾನಿಸಲಾಗಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ 2019ನೇ ರಿಂದ 2023ನೇ ವರೆಗೆ ಪ್ರಶಸ್ತಿಗೆ ಆಹ್ವಾನಿಸಿದೆ.
ಪ್ರಶಸ್ತಿಗಳಿಗೆ ನಾಮನಿರ್ದೇಶನಗಳನ್ನು, ಮಾಧ್ಯಮ ಸಂಸ್ಥೆಗಳು ಹಾಗೂ ಇತರೆ ಸಂಘ ಸಂಸ್ಥೆಗಳು ಮತ್ತು ವ್ಯಕ್ತಿಗಳು ಪೂರ್ಣ ದಾಖಲೆಗಳೊಂದಿಗೆ ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವಾರ್ತಾಸೌಧ, ನಂ. 17, ಭಗವಾನ್ ಮಹಾವೀರರಸ್ತೆ, ಬೆಂಗಳೂರು - 560 001 ಇಲ್ಲಿಗೆ 2024ನೇ ಜುಲೈ 25ರ ಸಂಜೆ 5.30 ಗಂಟೆ ಒಳಗಾಗಿ ಕಳುಹಿಸಿಕೊಡಬಹುದಾಗಿದೆ. ಅಥವಾ ಜಿಲ್ಲಾ ವಾರ್ತಾಧಿಕಾರಿಗಳ ಕಚೇರಿ ಮೂಲಕ ಇಲ್ಲವೇ [email protected] ಇಮೇಲ್ ವಿಳಾಸಕ್ಕೆ ಕೊನೆಯ ದಿನಾಂಕದೊಳಗೆ ಕಳುಹಿಸಿಕೊಡಬಹುದಾಗಿದೆ.

ಟಿಯೆಸ್ಸಾರ್ ಸ್ಮಾರಕ ಪತ್ರಿಕೋದ್ಯಮ ಪ್ರಶಸ್ತಿ
ಕನ್ನಡದ ಖ್ಯಾತ ಪರ್ತಕರ್ತ ಟಿ.ಎಸ್. ರಾಮಚಂದ್ರರಾವ್ ಅವರ ಸವಿ ನೆನಪಿಗಾಗಿ ಸರ್ಕಾರ ಟಿಯೆಸ್ಸಾರ್ ಪ್ರಶಸ್ತಿ ನೀಡುತ್ತಾ ಬಂದಿದೆ. ಈ ಪ್ರಶಸ್ತಿ ಫಲಕ ಹಾಗೂ 2 ಲಕ್ಷ ನಗದು ಹೊಂದಿರುತ್ತದೆ. ಆಕಾಂಕ್ಷಿ ಕನಿಷ್ಠ ಪತ್ರಿಕೋದ್ಯಮದಲ್ಲಿ 30 ವರ್ಷಗಳ ಸೇವೆ ಸಲ್ಲಿಸಿರಬೇಕು. ಅಲ್ಲದೆ ಕನ್ನಡ ಕ್ಷೇತ್ರಕ್ಕೆ ಭಾಷೆಯ ಬೆಳವಣಿಗೆಗೆ ವಿಶೇಷ ಕೊಡುಗೆ ನೀಡಿರಬೇಕು. ಪ್ರತಿ ವರ್ಷಕ್ಕೆ ಒಬ್ಬರಿಗೆ ಮಾತ್ರ ಈ ಪ್ರಶಸ್ತಿಯನ್ನು ನೀಡಲಾಗುವುದು.
ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿ
ಪತ್ರಿಕಾ ರಂಗದ ಭೀಷ್ಮ ಎಂದೇ ಖ್ಯಾತಿ ಪಡೆದಿರುವ ಮೊಹರೆ ಹಣಮಂತರಾಯ ಅವರ ನೆನಪಿನಲ್ಲಿ ಸರ್ಕಾರವು ಪ್ರಶಸ್ತಿ ನೀಡುತ್ತಾ ಬಂದಿದೆ. ಪ್ರಶಸ್ತಿಯ ಮೊತ್ತವು 2 ಲಕ್ಷ ರೂ ಆಗಿದ್ದು, ಕನ್ನಡದ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಯಾವುದೇ ಪತ್ರಿಕೆಯನ್ನು ಅಥವಾ ಪತ್ರಿಕಾ ಸಮೂಹವನ್ನು ಸಮರ್ಥವಾಗಿ ಕಟ್ಟಿ ಬೆಳೆಸಿದ ಹಾಗೂ ಪ್ರವೃತ್ತಿಯಲ್ಲಿ ಪತ್ರಕರ್ತರಾಗಿ, ವೃತ್ತಿಯಲ್ಲಿ ಪತ್ರಿಕಾಲಯದ ಮಾಲೀಕರು, ಆಡಳಿತಗಾರರಾಗಿ ಕನಿಷ್ಠ 30 ವರ್ಷ ಸೇವೆ ಸಲ್ಲಿಸಿರಬೇಕು.
ಆಯ್ಕೆ ಸಮಿತಿ
ಹೈಕೋರ್ಟ್ ನಿವೃತ್ತ ನ್ಯಾಯಾಧೀಶರಾದ ಪಿ.ಎನ್.ದೇಸಾಯಿ ಅವರ ಅಧ್ಯಕ್ಷತೆಯ ಆಯ್ಕೆ ಸಮಿತಿಯಲ್ಲಿ ಹಿರಿಯ ಪತ್ರಕರ್ತರಾದ ಡಾ.ಈಶ್ವರ ದೈತೋಟ, ಶಾಂತಲಾ ಧರ್ಮರಾಜ್ ಹಾಗೂ ಎಂ.ಎಸ್.ಮಣಿ ಸದಸ್ಯರಾಗಿದ್ದಾರೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರು ಸದಸ್ಯ ಕಾರ್ಯದರ್ಶಿಗಳಾಗಿರುತ್ತಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications