ಅ. 23ರಂದು ಆಯೋಗದ ನೋಟಿಸಿಗೆ ಉತ್ತರಿಸಲಿರುವ ರೂಪಾ
ವಿಜಯಪುರ, ಅಕ್ಟೋಬರ್ 11: ಪರಪ್ಪನ ಅಗ್ರಹಾರ ಜೈಲಿನಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ, ಮಾನವ ಹಕ್ಕುಗಳ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಎಸ್ ಅಧಿಕಾರಿಗಳಾದ ಡಿ ರೂಪಾ, ಕೃಷ್ಣಕುಮಾರ್ ಸೇರಿದಂತೆ ನಾಲ್ವರಿಗೆ ಮಾನವ ಹಕ್ಕುಗಳ ಆಯೋಗದಿಂದ ನೋಟಿಸ್ ಜಾರಿ ಮಾಡಲಾಗಿದೆ.
ಈ ಹಿಂದೆ ನೀಡಲಾಗಿದ್ದ ನೋಟಿಸ್ ಗೆ ಉತ್ತರಿಸಲು ನಾಲ್ಕಾರು ವಾರಗಳ ಗಡುವು ನೀಡಲಾಗಿತ್ತು. ಅದರಂತೆ, ಅಕ್ಟೋಬರ್ 23 ರಂದು ಮಾನವ ಹಕ್ಕುಗಳ ಆಯೋಗದ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ನಾಲ್ವರಿಗೂ ಸೂಚಿಸಲಾಗಿದೆ ಎಂದು ಮಾನವ ಹಕ್ಕುಗಳ ಅಧ್ಯಕ್ಷೆ ಮೀರಾ ಸೆಕ್ಸನಾ ಅವರು ವಿಜಯಪುರದಲ್ಲಿಂದು ಹೇಳಿದರು.

ಕಳೆದ ಎರಡು ದಿನಗಳ ಹಿಂದೆ ಪ್ರಕರಣದ ಕುರಿತು ಪ್ರಾಥಮಿಕ ವರದಿ ಬಂದಿದೆ, ಬಂದ ವರದಿಯ ಪ್ರಕಾರ ಕೆಲ ನ್ಯೂನತೆಗಳು ಕಂಡು ಬಂದಿವೆ, ಏನೆಲ್ಲ ನ್ಯೂನತೆಗಳು ಎಂಬ ಬಗ್ಗೆ ಈಗ ಬಹಿರಂಗ ಪಡಿಸಲು ಆಗುವುದಿಲ್ಲ ಎಂದರು.
ಅಧಿಕಾರಿಗಳ ವರ್ಗಾವಣೆ ಬಗ್ಗೆ ನಮಗೆ ಯಾವುದೇ ಸಂಬಂಧವಿಲ್ಲಾ. ಆದರೆ, ಖೈದಿಗಳ ಮೇಲಿನ ಹಲ್ಲೆ ಆರೋಪದ ಬಗ್ಗೆ ವಿಚಾರಣೆ ನಡೆಸಲಾಗುವುದು ಎಂದರು. ಆಯೋಗದ ಐಜಿಪಿಯಿಂದಾ ಹಲ್ಲೆ ಪ್ರಕರಣದ ಬಗ್ಗೆ ವರದಿ ನೀಡುವಂತೆ ಕೇಳಿದ್ದೀವಿ, ಅವರು ವರದಿ ನೀಡಿ ಎರಡು ತಿಂಗಳಾಗಿದ್ದು ಅದರಲ್ಲಿ ನ್ಯೂನತೆಗಳಿವೆ ಅಂತಾ ತಿಳಿದು ಬಂದಿದೆ.
ಇದರ ಬಗ್ಗೆ ವಿವರಣೆ ನೀಡುವಂತೆ ಜೈಲು ಸೂಪರಿಟೆಂಡೆಂಟ್ ಕೃಷ್ಣಕುಮಾರ ಅವರಿಗೆ ನೋಟಿಸ್ ನೀಡಿದ್ದೆವು ಅದಕ್ಕೆ ನಾಲ್ಕುವಾರಗಳ ಗಡುವು ನೀಡಲಾಗಿತ್ತು. ಇದೀಗ ಅಕ್ಟೋಬರ್ 23 ಕ್ಕೆ ಈ ಬಗ್ಗೆ ವಿಚಾರಣೆ ನಡೆಸಲಾಗುವುದು ಎಂದರು. ಆ ಬಳಿಕ ಮುಂದಿನ ಕ್ರಮದ ಬಗ್ಗೆ ನಿರ್ಧರಿಸಲಾಗುವುದು ಎಂದರು.
ಈ ಕುರಿತಂತೆ ಒನ್ಇಂಡಿಯಾ ಪ್ರತಿನಿಧಿಗೆ ಪ್ರತಿಕ್ರಿಯೆ ನೀಡಿರುವ ಐಪಿಎಸ್ ಅಧಿಕಾರಿ ಡಿ ರೂಪಾ ಅವರು ಆಯೋಗದಿಂದ ಯಾವುದೇ ನೋಟಿಸ್ ಬಂದಿಲ್ಲ ಎಂದಿದ್ದಾರೆ.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications