IPS Transfer; ಹಾವೇರಿಗೆ ನೂತನ ಎಸ್ಪಿ ನೇಮಕ
ಬೆಂಗಳೂರು, ನವೆಂಬರ್ 16: ಕರ್ನಾಟಕ ಸರ್ಕಾರ ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದೆ. ಒಟ್ಟು ಮೂವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದು, ಹಾವೇರಿಗೆ ನೂತನ ಎಸ್ಪಿ ನೇಮಕ ಮಾಡಲಾಗಿದೆ.
ಸರ್ಕಾರ ಹಾವೇರಿ ಎಸ್ಪಿಯಾಗಿದ್ದ ಡಾ. ಶಿವಕುಮಾರ್ ವರ್ಗಾವಣೆ ಮಾಡಿದೆ. ಅನೂಷ್ ಕುಮಾರ್ ಅವರನ್ನು ನೂತನ ಎಸ್ಪಿಯಾಗಿ ನೇಮಕ ಮಾಡಿದೆ. ರಶ್ಮಿ ಬಿ. ಪರಡ್ಡಿ ಅವರಿಗೆ ಸಹ ಸ್ಥಳ ನಿಯೋಜನೆ ಮಾಡಲಾಗಿದೆ.

ಅಧಿಕಾರಿಗಳ ವರ್ಗಾವಣೆ
* ಸ್ಥಳ ನಿಯೋಜನೆಗಾಗಿ ಕಾಯುತ್ತಿದ್ದ ರಶ್ಮಿ ಬಿ. ಪರಡ್ಡಿ, ಐಪಿಎಸ್ (ಕೆಎನ್-2014) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದ ತನಕ ಸಿಐಡಿಯ ಎಸ್ಪಿಯಾಗಿ ನೇಮಕ ಮಾಡಲಾಗಿದೆ. ಈ ಹುದ್ದೆ ಖಾಲಿ ಇತ್ತು.
* ಡಾ. ಶಿವಕುಮಾರ್, ಐಪಿಎಸ್ (ಕೆಎನ್-2016). ಹಾವೇರಿ ಎಸ್ಪಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದ ತನಕ ಡಿಸಿಪಿ, ವೈಟ್ಫೀಲ್ಡ್ ವಿಭಾಗ, ಬೆಂಗಳೂರು ನಗರ ಇಲ್ಲಿಗೆ ನಿಯೋಜನೆ ಮಾಡಲಾಗಿದೆ. ಈ ಹುದ್ದೆಯಲ್ಲಿದ್ದ ಸಂಜೀವ್ ಎಂ. ಪಾಟೀಲ್ ವರ್ಗಾವಣೆ ಮಾಡಲಾಗಿದೆ.
* ಅನೂಷ್ ಕುಮಾರ್, ಐಪಿಎಸ್ (ಕೆಎನ್-2018). ಎಸ್ಪಿ ಕರಾವಳಿ ಭದ್ರತಾ ಪಡೆ, ಉಡುಪಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದ ತನಕ ಹಾವೇರಿ ಎಸ್ಪಿಯಾಗಿ ನೇಮಕ ಮಾಡಲಾಗಿದೆ.
ಈ ಮೊದಲು ಹಾವೇರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಹನುಮಂತರಾಯ ಕೆಲಸ ಮಾಡುತ್ತಿದ್ದರು. ಜನವರಿಯಲ್ಲಿ ಅವರನ್ನು ವರ್ಗಾವಣೆ ಮಾಡಿ ತಕ್ಷಣದಿಂದ ಜಾರಿಗೆ ಬರುವಂತೆ ಡಾ. ಶಿವಕುಮಾರ್ ನೇಮಕ ಮಾಡಲಾಗಿತ್ತು.
ಆಗ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿತ್ತು. ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದರು. ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಾಗ ಮುಖ್ಯಮಂತ್ರಿಗಳ ತವರು ಜಿಲ್ಲೆಯ ಎಸ್ಪಿಯನ್ನೇ ವರ್ಗಾವಣೆ ಮಾಡಲಾಗಿತ್ತು.
ಮತ್ತೊಂದು ಕಡೆ ಕರ್ನಾಟಕ ಸರ್ಕಾರ ಮೂವರು ಐಪಿಎಸ್ ಅಧಿಕಾರಿಗಳನ್ನು ಈಗಿರುವ ಹುದ್ದೆಯ ಜೊತೆಗೆ ಮುಂದಿನ ಆದೇಶದ ತನಕ ರಾಜ್ಯದಲ್ಲಿ ಮುಂಬರುವ ಲೋಕಸಭೆ, ವಿಧಾನಸಭೆ ಚುನಾವಣೆಗೆ ನೋಡಲ್ ಅಧಿಕಾರಿಗಳಾಗಿ ಕಾರ್ಯ ನಿರ್ವಹಣೆ ಮಾಡಲು ನೇಮಕ ಮಾಡಿ ಆದೇಶ ಹೊರಡಿಸಿದೆ.
ಆರ್. ಹಿತೇಂದ್ರ, ಐಪಿಎಸ್ (ಕೆಎನ್: 1996) ಎಡಿಜಿಪಿ (ಕಾನೂನು ಮತ್ತು ಸುವ್ಯವಸ್ಥೆ) ಕರ್ನಾಟಕದ ಮುಂಬರುವ ಲೋಕಸಭೆ, ವಿಧಾನಸಭೆ ಚುನಾವಣೆಯ ರಾಜ್ಯ ನೋಡಲ್ ಅಧಿಕಾರಿ (SPNO) ಆಗಿ ಅವರ ಈಗಿರುವ ಹುದ್ದೆಗೆ ಹೆಚ್ಚುವರಿಯಾಗಿ ನೇಮಕಗೊಂಡಿದ್ದಾರೆ. ಈ ನೇಮಕಾತಿ ಅವಧಿ ತಕ್ಷಣದಿಂದ ಜಾರಿಗೆ ಬರುವಂತೆ 3 ವರ್ಷಗಳು.
ಸಂದೀಪ್ ಪಾಟೀಲ್, ಐಪಿಎಸ್. ಐಜಿಪಿ, ಕೆಎಸ್ಆರ್ಪಿ ಬೆಂಗಳೂರು. ಕರ್ನಾಟಕದ ಮುಂಬರುವ ಲೋಕಸಭೆ, ವಿಧಾನಸಭೆ ಚುನಾವಣೆಯ ರಾಜ್ಯ CARF ನೋಡಲ್ ಅಧಿಕಾರಿಯಾಗಿ ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಗೊಂಡಿದ್ದಾರೆ.
ದೇವಜ್ಯೋತಿ ರೇ, ಐಪಿಎಸ್. ಐಜಿಪಿ ಜಿ & ಹೆಚ್ ಆರ್ ಬೆಂಗಳೂರು. ಕರ್ನಾಟಕದ ಮುಂಬರುವ ಲೋಕಸಭೆ, ವಿಧಾನಸಭೆ ಚುನಾವಣೆಯ ನೋಡಲ್ ಅಧಿಕಾರಿ (ವೆಚ್ಚ) ಆಗಿ ನೇಮಕಗೊಂಡಿದ್ದಾರೆ.
-
ಏಪ್ರಿಲ್ 14ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಏಪ್ರಿಲ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
CRPF Recruitment 2026: 9,000ಕ್ಕೂ ಹೆಚ್ಚು ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ; ಕನ್ನಡಿಗರಿಗೂ ಇದೆ ಮೀಸಲಾತಿ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ












Click it and Unblock the Notifications