IPS Transfer; ರವಿ ಡಿ. ಚನ್ನಣ್ಣನವರ್ಗೆ ಹೊಸ ಹುದ್ದೆ
ಬೆಂಗಳೂರು, ಅಕ್ಟೋಬರ್ 01: ಕರ್ನಾಟಕ ಸರ್ಕಾರ ಮತ್ತೆ ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದೆ. ಕೆಲವು ದಿನಗಳ ಹಿಂದಷ್ಟೇ ವರ್ಗಾವಣೆಗೊಂಡಿದ್ದ ರವಿ ಡಿ. ಚನ್ನಣ್ಣನವರ್ ವರ್ಗಾವಣೆ ಆದೇಶದಲ್ಲಿ ಬದಲಾವಣೆ ಮಾಡಲಾಗಿದೆ. ಹೊಸ ಹುದ್ದೆಗೆ ಅವರನ್ನು ನಿಯೋಜನೆ ಮಾಡಲಾಗಿದೆ.
ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಶನಿವಾರ ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ ವರ್ಗಾವಣೆ ಕುರಿತು ಪರಿಷ್ಕೃತ ಆದೇಶ ಹೊರಡಿಸಿದೆ. ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ, ಬೆಂಗಳೂರು ಡಿಐಜಿಯಾಗಿ ಅವರನ್ನು ತಕ್ಷಣದಿಂದ ಮತ್ತು ಮುಂದಿನ ಆದೇಶದ ತನಕ ವರ್ಗಾವಣೆ ಮಾಡಲಾಗಿದೆ.

ರವಿ ಡಿ. ಚನ್ನಣ್ಣನವರ್ ಅವರನ್ನು ಕೆಲವು ದಿನಗಳ ಹಿಂದೆ ವರ್ಗಾವಣೆ ಮಾಡಲಾಗಿತ್ತು. ಆಂತರಿಕ ಭದ್ರತಾ ವಿಭಾಗದ ಡಿಐಜಿಯಾಗಿ ನಿಯೋಜನೆ ಮಾಡಲಾಗಿತ್ತು. ಈ ಆದೇಶವನ್ನು ಪರಿಷ್ಕರಣೆ ಮಾಡಿ ಅಕ್ಟೋಬರ್ 30ರಂದು ಆದೇಶ ಹೊರಡಿಸಲಾಗಿದೆ.
ಕರ್ನಾಟಕ ಸರ್ಕಾರ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ, ಬೆಂಗಳೂರು ಡಿಐಜಿಯಾಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದ ಐಪಿಎಸ್ ಅಧಿಕಾರಿ ಡಿ. ಆರ್. ಸಿರಿ ಗೌರಿ ಅವರನ್ನು ವರ್ಗಾವಣೆ ಮಾಡಿದೆ. ಆ ಜಾಗಕ್ಕೆ ರವಿ ಡಿ. ಚನ್ನಣ್ಣನವರ್ ನೇಮಕಗೊಂಡಿದ್ದಾರೆ.
ವರ್ಗಾವಣೆ ಆದೇಶ ಬದಲು; ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ (ಕೆಎನ್-2009) ಅವರನ್ನು e-DPAR 162 SPS 2023, Date 8/6/2023ರ ಆದೇಶದಲ್ಲಿ ಆಂತರಿಕ ಭದ್ರತಾ ವಿಭಾಗದ ಡಿಐಜಿಯಾಗಿ ನಿಯೋಜನೆ ಮಾಡಲಾಗಿತ್ತು. ಶನಿವಾರ ಈ ಆದೇಶವನ್ನು ಪರಿಷ್ಕರಣೆ ಮಾಡಲಾಗಿದೆ.
ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದ ತನಕ ಡಿಐಜಿ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ, ಬೆಂಗಳೂರು ಆಗಿ ನೇಮಕ ಮಾಡಲಾಗಿದೆ. ಆದ್ದರಿಂದ ಕೆಲವೇ ದಿನಗಳಲ್ಲಿ ರವಿ ಡಿ. ಚನ್ನಣ್ಣನವರ್ ಎರಡು ಬಾರಿ ವರ್ಗಾವಣೆಗೊಂಡಿದ್ದಾರೆ.
ಅಲೋಕ್ ಕುಮಾರ್ ವರ್ಗಾವಣೆ; ಶುಕ್ರವಾರ ಕರ್ನಾಟಕ ಸರ್ಕಾರ ಕೆಲವು ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿತ್ತು. ಅದರಲ್ಲಿ ಅಲೋಕ್ ಕುಮಾರ್ ಸೇರಿದ್ದರು. ಬೆಂಗಳೂರು ಸಂಚಾರ ಮತ್ತು ರಸ್ತೆ ಸುರಕ್ಷತೆ ವಿಭಾಗದ ಎಡಿಜಿಪಿಯಾಗಿದ್ದ ಅಲೋಕ್ ಕುಮಾರ್ ಅವರನ್ನು ಪೊಲೀಸ್ ತರಬೇತಿ ಕೇಂದ್ರಕ್ಕೆ ವರ್ಗಾಯಿಸಲಾಗಿತ್ತು.
ಪಿ. ರವೀಂದ್ರನಾಥ್ ಅವರ ನಿವೃತ್ತಿಯಿಂದ ತೆರವಾಗಿದ್ದ ಹುದ್ದೆಗೆ ಅಲೋಕ್ ಕುಮಾರ್ ಅವರನ್ನು ಸರ್ಕಾರ ನಿಯೋಜನೆ ಮಾಡಿ ಆದೇಶ ಹೊರಡಿಸಿತ್ತು. ಶನಿವಾರ ರವಿ ಡಿ. ಚನ್ನಣ್ಣನವರ್ ವರ್ಗಾವಣೆ ಮಾಡಿದೆ.
ಗೃಹ ಇಲಾಖೆ ವರ್ಗಾವಣೆ ಬಗ್ಗೆ ರಾಜ್ಯದ ಪ್ರತಿಪಕ್ಷ ಬಿಜೆಪಿ ಮತ್ತು ಜೆಡಿಎಸ್ ಹಲವು ಬಾರಿ ಆರೋಪ ಮಾಡಿವೆ. ಸರ್ಕಾರ ವರ್ಗಾವಣೆ ದಂಧೆ ಮಾಡುತ್ತಿದೆ ಎಂದು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಟೀಕಿಸಿವೆ. ಭಾನುವಾರ ಕೂಡಾ ಬಿಜೆಪಿ ಟ್ವೀಟ್ ಮಾಡಿ, 'ಸಿದ್ದರಾಮಯ್ಯರವರ ನೇತೃತ್ವದ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ರಾಜ್ಯದ ಆರು ಕೋಟಿ ಕನ್ನಡಿಗರು ನೆಮ್ಮದಿಯಲ್ಲಿಲ್ಲ ಎಂಬುದು ಎಷ್ಟು ಸತ್ಯವೋ, ಕೈ ಪಕ್ಷದ ನಾಯಕರಿಗೂ ಸಿದ್ದರಾಮಯ್ಯ ಅವರ ಆಡಳಿತ ತೃಪ್ತಿ ತಂದಿಲ್ಲ ಎಂಬುದೂ ಅಷ್ಟೇ ಸತ್ಯ' ಎಂದು ಹೇಳಿತ್ತು.
'ಮತ್ತೊಬ್ಬರನ್ನು ರಾಜಕೀಯವಾಗಿ ತುಳಿಯುವ ಗುಣದ ಸಿದ್ದರಾಮಯ್ಯರವರು 2013ರಲ್ಲಿ ಕೊರಟಗೆರೆಯಲ್ಲಿ ಡಾ. ಪರಮೇಶ್ವರ್ ಅವರು ಸೋಲುವಂತೆ ನೋಡಿಕೊಂಡಿದ್ದೂ ಅಲ್ಲದೆ, ಇದೀಗ ಅವರ ಗೃಹ ಇಲಾಖೆಗೆ ಉಳಿದವರು ಹಸ್ತಕ್ಷೇಪ ಮಾಡಲು ಕುಮ್ಮಕ್ಕು ನೀಡಿ ಉದ್ದೇಶಪೂರ್ವಕವಾಗಿ ಪರಮೇಶ್ವರರನ್ನು ಡಮ್ಮಿ ಮಂತ್ರಿ ಮಾಡಿ ಕೂರಿಸಿದ್ದಾರೆ' ಎಂದು ಗೃಹ ಇಲಾಖೆ ಬಗ್ಗೆ ಟ್ವೀಟ್ ಮಾಡಿ ಗಮನ ಸೆಳೆದಿತ್ತು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಬಳ್ಳಾರಿ ಹಾಸ್ಟೆಲ್ ಹಲ್ಲೆ ಪ್ರಕರಣ: ತಲೆಮರೆಸಿಕೊಂಡಿದ್ದ ಅಪ್ರಾಪ್ತ ಆರೋಪಿ ಪೊಲೀಸ್ ವಶಕ್ಕೆ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು












Click it and Unblock the Notifications