IPS Transfer; ಧಾರವಾಡ, ಯಾದಗಿರಿಗೆ ಹೊಸ ಎಸ್ಪಿ ನೇಮಕ
ಬೆಂಗಳೂರು, ಆಗಸ್ಟ್ 29; ಕರ್ನಾಟಕ ಸರ್ಕಾರ ಮತ್ತೆ ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಯಾದಗಿರಿ ಮತ್ತು ಧಾರವಾಡಕ್ಕೆ ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನೇಮಕ ಮಾಡಲಾಗಿದೆ.
ಮಂಗಳವಾರ ಕರ್ನಾಟಕ ಸರ್ಕಾರ ಗೃಹ ಇಲಾಖೆಯಲ್ಲಿ ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದೆ. ಜಿ. ಸಂಗೀತಾ, ಐಪಿಎಸ್ (ಕೆಎನ್- 2011) ಯಾದಗಿರಿಯ ನೂತನ ಎಸ್ಪಿಯಾಗಿ ನೇಮಗೊಂಡಿದ್ದಾರೆ.

ಧಾರವಾಡದ ಎಸ್ಪಿಯಾಗಿ ಗೋಪಾಲ್ ಎಂ. ಬ್ಯಾಕೋಡ್, ಐಪಿಎಸ್ (ಸೆಲೆಕ್ಟ್ ಲಿಸ್ಟ್- 2021) ನೇಮಕಗೊಂಡಿದ್ದಾರೆ. ಧಾರವಾಡ ಎಸ್ಪಿಯಾಗಿದ್ದ ಲೋಕೇಶ್ ಬಿ. ಜಗಲಾಸರ್ ವರ್ಗಾವಣೆಗೊಂಡಿದ್ದಾರೆ.
ಜಿ. ಸಂಗೀತಾ ಅವರು ಡಿಸಿಆರ್ಇ, ಬೆಂಗಳೂರು ಎಸ್ಪಿಯಾಗಿದ್ದರು. ತಕ್ಷಣದಿಂದ ಜಾರಿಗೆ ಬರುವಂತೆ ಅವರನ್ನು ಯಾದಗಿರಿ ಎಸ್ಪಿಯಾಗಿ ವರ್ಗಾವಣೆ ಮಾಡಲಾಗಿದೆ. ಯಾದಗಿರಿಯ ಎಸ್ಪಿಯಾಗಿದ್ದ ಸಿ. ಬಿ. ವೇದಮೂರ್ತಿ ವರ್ಗಾವಣೆಗೊಂಡಿದ್ದಾರೆ. ಸ್ಥಳ ನಿಯೋಜನೆ ಮಾಡಿಲ್ಲ.
ಧಾರವಾಡ ಎಸ್ಪಿಯಾಗಿದ್ದ ಲೋಕೇಶ್ ಬಿ. ಜಗಲಾಸರ್ ವರ್ಗಾವಣೆಗೊಂಡಿದ್ದಾರೆ. ಅವರನ್ನು ಕರ್ನಾಟಕ ಪೊಲೀಸ್ ಅಕಾಡಮಿ, ಮೈಸೂರು ನಿರ್ದೇಶಕರಾಗಿ ನೇಮಕ ಮಾಡಲಾಗಿದೆ.
ಧಾರವಾಡದ ನೂತನ ಎಸ್ಪಿಯಾಗಿ ಗೋಪಾಲ್ ಎಂ. ಬ್ಯಾಕೋಡ್ ನೇಮಕ ಮಾಡಲಾಗಿದೆ. ಇವರು ಹೆಚ್ಚುವರಿ ಪೊಲೀಸ್ ಆಯುಕ್ತ ಅಪರಾಧ & ಸಂಚಾರ, ಹುಬ್ಬಳ್ಳಿ-ಧಾರವಾಡ ನಗರ ಹುದ್ದೆಯಲ್ಲಿ ಕಾರ್ಯ ನಿರ್ವಹಣೆ ಮಾಡುತ್ತಿದ್ದರು.
ಕಳೆದ ಮೂರು ವಾರಗಳಿಂದ ಪ್ರತಿ ವಾರ ಐಪಿಎಸ್ ಅಧಿಕಾರಿಗಳ ವರ್ಗಾವಣೆಯನ್ನು ಕರ್ನಾಟಕ ಸರ್ಕಾರ ಮಾಡುತ್ತಲೇ ಇದೆ. ಹಲವು ಜಿಲ್ಲೆಗಳ ಎಸ್ಪಿಗಳು ಬದಲಾವಣೆಗೊಂಡಿದ್ದಾರೆ.
ಆಗಸ್ಟ್ 22ರಂದು ಐಪಿಎಸ್ ಅಧಿಕಾರಿಗಳ ವರ್ಗಾವಣೆಯಾಗಿತ್ತು. ಚಿಕ್ಕಮಗಳೂರು ಎಸ್ಪಿಯಾಗಿ ಆಮಟೆ ವಿಕ್ರಂ ನೇಮಕ ಮಾಡಲಾಗಿತ್ತು. ಚಿಕ್ಕಮಗಳೂರು ಎಸ್ಪಿಯಾಗಿದ್ದ ಉಮಾ ಪ್ರಶಾಂತ್ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿತ್ತು.
ಚಿಕ್ಕಮಗಳೂರು ಎಸ್ಪಿಯಾಗಿದ್ದ ಉಮಾ ಪ್ರಶಾಂತ್ ಅವರನ್ನು ಕರ್ನಾಟಕ ಸರ್ಕಾರ ದಾವಣಗೆರೆ ಎಸ್ಪಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಿತ್ತು. ಆಗಸ್ಟ್ 8ರಂದು ದಾವಣಗೆರೆ ಎಸ್ಪಿಯಾಗಿದ್ದ ಡಾ. ಕೆ. ಅರುಣ್ ಅವರನ್ನು ವರ್ಗಾವಣೆಗೊಳಿಸಲಾಗಿತ್ತು.
ದಾವಣಗೆರೆ ಎಸ್ಪಿ ಡಾ. ಕೆ. ಅರುಣ್ ಅವರನ್ನು ಕಲಬುರಗಿಯ ಪೊಲೀಸ್ ತರಬೇತಿ ಕೇಂದ್ರದ ಪ್ರಾಚಾರ್ಯರಾಗಿ ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿತ್ತು. ಡಾ. ಕೆ. ಅರುಣ್ ವರ್ಗಾವಣೆಯಿಂದ ತೆರವಾದ ಸ್ಥಾನಕ್ಕೆ ಉಮಾ ಪ್ರಶಾಂತ್ ನೇಮಕ ಮಾಡಲಾಗಿತ್ತು.
ಆಗಸ್ಟ್ 9ರಂದು ಕರ್ನಾಟಕ ಸರ್ಕಾರ ಹುಬ್ಬಳ್ಳಿ-ಧಾರವಾಡ ಅವಳಿ ನಗರದ ಪೊಲೀಸ್ ಆಯುಕ್ತರಾಗಿ ರೇಣುಕಾ ಕೆ. ಸುಕುಮಾರ ನೇಮಕ ಮಾಡಿತ್ತು. 2011ನೇ ಬ್ಯಾಚ್ ಐಪಿಎಸ್ ಅಧಿಕಾರಿ ರೇಣುಕಾ ಕೆ. ಸುಕುಮಾರ ಅವಳಿ ನಗರದ ಮೊದಲ ಮಹಿಳಾ ಪೊಲೀಸ್ ಆಯುಕ್ತರಾಗಿ ಅಧಿಕಾರವಹಿಸಿಕೊಂಡಿದ್ದಾರೆ. ಈ ಹಿಂದೆ ಅವರು ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಡಿಸಿಪಿಯಾಗಿ ಕಾರ್ಯ ನಿರ್ವಹಣೆ ಮಾಡಿದ್ದರು.
-
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್












Click it and Unblock the Notifications