ಇಲಾಖೆ ಭ್ರಷ್ಚಾಚಾರ ಬಯಲಿಗೆಳೆದ್ದಿದ್ದೇ ತಿವಾರಿ ಸಾವಿಗೆ ಕಾರಣವಾಯ್ತೆ?
ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ಅವರು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಆಯುಕ್ತರಾಗಿ ಬಂದ ನಂತರ ಕೆಲವು ಕಠಿಣ ಕ್ರಮಗಳನ್ನು ಕೈಗೊಂಡಿದ್ದರು. ಇಲಾಖೆಯ ಭ್ರಷ್ಟಾಚಾರ ತಡೆಗಟ್ಟಿದ್ದೇ ಅವರ ಸಾವಿಗೆ ಕಾರಣವಾಯಿತೆ?
ಬೆಂಗಳೂರು, ಮೇ 19: ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ಅವರು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಆಯುಕ್ತರಾಗಿ ಬಂದ ನಂತರ ಕೆಲವು ಕಠಿಣ ಕ್ರಮಗಳನ್ನು ಕೈಗೊಂಡಿದ್ದರು. ಇಲಾಖೆಯ ಭ್ರಷ್ಟಾಚಾರ ತಡೆಗಟ್ಟಿದ್ದೇ ಅವರ ಸಾವಿಗೆ ಕಾರಣವಾಯಿತೆ? ನಿಜಕ್ಕೂ ಇದು 2,000 ಕೋಟಿ ರು ಅಧಿಕ ಮೌಲ್ಯ ಹಗರಣವೇ? ಸಿದ್ದರಾಮಯ್ಯರಿಂದ ಮೆಚ್ಚುಗೆ ಪಡೆದ ಅಧಕಾರಿಗೆ ನಿಜಕ್ಕೂ ಕಿರುಕುಳ ನೀಡಲಾಗಿತ್ತೆ? ಅನೇಕ ಪ್ರಶ್ನೆಗಳು ಕಾಡುತ್ತಿವೆ.
ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯಲ್ಲಿ ಸೋರಿಕೆಯಾಗುತ್ತಿದ್ದ ಪಡಿತರ ಧಾನ್ಯಗಳನ್ನು ನಿಯಂತ್ರಣಕ್ಕೆ ತಂದಿದ್ದು, ನಕಲಿ ಕಾರ್ಡ್ಗಳನ್ನು ಪತ್ತೆಹಚ್ಚಿದ್ದು, ಕಾಳಸಂತೆಯಲ್ಲಿ ಮಾರಾಟಗಾರ ಮೇಲೆ ನಿಯಂತ್ರಣ,ನ್ಯಾಯಬೆಲೆ ಅಂಗಡಿಗಳ ಮೇಲೆ ದಾಳಿ, ಅನ್ನಭಾಗ್ಯ ಅಕ್ರಮವನ್ನು ತಡೆಗಟ್ಟಿದ್ದು ಸೇರಿದಂತೆ ಹಲವು ಬಿಗಿ ಕ್ರಮಗಳನ್ನು ಕೈಗೊಂಡಿದ್ದರು. [ತಿವಾರಿ ಸಾವು: ತನಿಖೆಗೆ ಕೋರಿ ಯೋಗಿಗೆ ಪತ್ರ ಬರೆದ ಸಿದ್ದರಾಮಯ್ಯ]
ಕುಟುಂಬದಿಂದ ಆರೋಪ: ಅನುರಾಗ್ ತಿವಾರಿ ಅವರ ವರ್ಗಾವಣೆಗಾಗಿ ಆಹಾರ ಇಲಾಖೆ ಸಚಿವ ಯು.ಟಿ ಖಾದರ್ ಅವರ ಮೇಲೆ ಅನೇಕ ಬಾರಿ ಒತ್ತಡ ಬಂದಿತ್ತು. ನನ್ನ ಸೋದರ ತಿವಾರಿ ಜೀವಕ್ಕೆ ಅಪಾಯವಿತ್ತು.

ಇದೇ ಕಾರಣಕ್ಕೆ ಕರ್ನಾಟಕದಿಂದ ಬೇರೆ ರಾಜ್ಯಕ್ಕೆ ವರ್ಗಾವಣೆ ಬಯಸಿದ್ದರು. ಒಂದು ತಿಂಗಳು ರಜೆ ಕೇಳಿದರೆ ನಾಲ್ಕು ದಿನ ಮಾತ್ರ ರಜೆ ಸಿಕ್ಕಿತ್ತು. ಹಿರಿಯ ಅಧಿಕಾರಿಗಳಿಂದ ಸಾಕಷ್ಟು ಒತ್ತಡಕ್ಕೆ ಸಿಲುಕಿದ್ದ. ತಿವಾರಿ ಸಾವಿನ ತನಿಖೆಯನ್ನು ಸಿಬಿಐಗೆ ವಹಿಸಿ ನ್ಯಾಯ ಒದಗಿಸಿಕೊಡಿ ಎಂದು ಅನುರಾಗ್ ತಿವಾರಿ ಅವರ ಸೋದರ ಮಾಯಾಂಕ್, ತಿವಾರಿ ಅವರ ತಂದೆ, ನಿವೃತ್ತ ಪ್ರೊ . ಬಿ.ಎನ್. ತಿವಾರಿ ಹೇಳಿದ್ದಾರೆ.
ಭ್ರಷ್ಟಾಚಾರವನ್ನು ಸಿಬಿಐಗೆ ವಹಿಸುವಂತೆ ಸಚಿವರಿಗೆ ಪತ್ರ ಬರೆದಿದ್ದರು. ಸಿಬಿಐಗೆ ನೀಡಿದರೆ ಅನೇಕರ ಅವಕೃಪೆಗೆ ಒಳಗಾಗಬಹುದು ಎಂಬ ಕಾರಣಕ್ಕೆ ಸಚಿವರು ಒಪ್ಪಿರಲಿಲ್ಲ. ಇದರಿಂದ ಆತ ಬೇಸರಗೊಂಡು ಕೆಲ ದಿನಗಳವರೆಗೆ ರಜಾ ಹಾಕಿ ಡೆಹ್ರಾಡೂನ್ಗೆ ಹೆಚ್ಚಿನ ತರಬೇತಿಗೆ ಹೋಗಿದ್ದರು ಎಂದು ತಿಳಿಸಿದ್ದಾರೆ.[ತಿವಾರಿ ಸಾವಿನ ಕೇಸ್, ಶೋಭಾ ಮನವಿ ಪುರಸ್ಕರಿಸಿದ ಸಿಎಂ ಯೋಗಿ]

ಅನುರಾಗ್ ತಿವಾರಿ ಮೇಲೆ ಸರ್ಕಾರದ ಯಾವುದೇ ಒತ್ತಡ ಇರಲಿಲ್ಲ. ಸಿಎಂ ಸಿದ್ದರಾಮಯ್ಯರ ಆಪ್ತ ಅಧಿಕಾರಿಗಳಲ್ಲಿ ಒಬ್ಬರಾಗಿದ್ದರು. ಹೆಚ್ಚುವರಿ ಆಯುಕ್ತರಾಗಿ, ಕೊಡಗು ಜಿಲ್ಲೆಯ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ, ಹಣಕಾಸು ಇಲಾಖೆಯ ಉಪ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. 2015ರಲ್ಲಿ ಅವರನ್ನು ಬೀದರ್ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿತ್ತು.
ಅನುರಾಗ್ರನ್ನು ರಾಜ್ಯ ಸರ್ಕಾರ ಸರಿಯಾಗಿಯೇ ನೋಡಿಕೊಂಡಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಯು.ಟಿ. ಖಾದರ್ ಹೇಳಿದ್ದಾರೆ. ಸಿದ್ದರಾಮಯ್ಯ ಅವರು ಪತ್ರ ಬರೆದು ಸಮಗ್ರ ತನಿಖೆ ನಡೆಸುವಂತೆ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಗೆ ಪತ್ರ ಬರೆದಿದ್ದಾರೆ.
-
ಮಾರ್ಚ್ 26ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್












Click it and Unblock the Notifications