ಕರ್ನಾಟಕ ಬಿಜೆಪಿ ಮೇಲೆ ಬಿಎಲ್ ಸಂತೋಷ್ ಹಿಡಿತ: ಕೇಸರಿ ಪಾಳಯಕ್ಕೆ ಕೈಕೊಟ್ಟ 'ಮೊಸ್ಟ್ ಸಿಕ್ರೆಟ್ ಪೊಲಿಟಿಕ್ಸ್'
ಬೆಂಗಳೂರು, ಮೇ 14: 2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಭಾರಿಸಿದೆ. ಆಡಳಿತಾರೂಢ ಬಿಜೆಪಿಗೆ ಭಾರೀ ಮುಖಭಂಗವಾಗಿದೆ. 65 ಸ್ಥಾನಗಳನ್ನು ಪಡೆದುಕೊಂಡ ಬಿಜೆಪಿಯಲ್ಲಿ ಈಗ ಆತ್ಮವಿಮರ್ಶೆ ನಡೆಯುತ್ತಿದೆ. ಈ ಎಲ್ಲಾ ಬೆಳವಣಿಗೆಗಳಿಗೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ( ಸಂಘಟಣೆ ) ಬಿ ಎಲ್ ಸಂತೋಷ್ ಅವರು ಕಾರಣ ಎಂದು ಹೇಳಲಾಗುತ್ತಿದೆ.
224 ಸದಸ್ಯ ಬಲದ ಅಸೆಂಬ್ಲಿಯಲ್ಲಿ 136 ಸ್ಥಾನಗಳನ್ನು ಬಿಜೆಪಿ ಗಳಿಸಿಕೊಂಡಿದೆ. ಏತನ್ಮಧ್ಯೆ, ಬಿಜೆಪಿಯು ಕೇವಲ 65 ಕ್ಷೇತ್ರಗಳಲ್ಲಿ ಜಯಗಳಿಸಿದೆ. ಇದಕ್ಕೆ ಕಾರಣವಾಗಿದ್ದು ಆಡಳಿತ ವಿರೋಧಿ ಅಲೆ, ಬೆಲೆ ಏರಿಕೆ, ಭ್ರಷ್ಟಾಚಾರ ಹಾಗೂ ವಿರೋಧ ಪಕ್ಷ ನೀಡಿದ ಭರವಸೆ ಎಂದು ಒಂದು ಕಡೆ ಮಾತುಗಳು ಕೇಳಿಬಂದಿವೆ. ಇನ್ನೊಂದು ಕಡೆಗೆ ಪಕ್ಷವು ಹೊಸಬರಿಗೆ ಮಣೆ ಹಾಕಿ, ಹಳೆಯ ಪ್ರಭಾವಿ ನಾಯಕರನ್ನು ಕೈಬಿಟ್ಟಿರುವುದು ಎಂದು ಕೇಳಲಾಗುತ್ತಿದೆ. ಇದರ ಹಿಂದೆ ಬಿಎಲ್ ಸಂತೋಷ್ ಇರುವುದನ್ನು ಪಕ್ಷದಿಂದ ಹೊರಬಂದ ನಾಯಕರು ಹೇಳಿಕೊಂಡಿದ್ದಾರೆ.

ಜಗದೀಶ್ ಶೆಟ್ಟರ್ ಹೇಳಿದ್ದೇನು?
ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಬಿಜೆಪಿಯಿಂದ ಕಾಂಗ್ರೆಸ್ಗೆ ಸೇರ್ಪಡೆಗೊಂಡ ಬಳಿಕ ಬಿಎಲ್ ಸಂತೋಷ್ ವಿರುದ್ಧ ವಾಗ್ದಾಳಿ ನಡೆಸಿದ್ದರು. ತಮಗೆ ಟಿಕೆಟ್ ಸಿಗದೇ ಇರುವುದಕ್ಕೆ ಕಾರಣ ಬಿಎಲ್ ಸಂತೋಷ್ ಹಾಗೂ ಪ್ರಹ್ಲಾದ್ ಜೋಶಿ ಎಂದು ಬಹಿರಂಗವಾಗಿ ಹೇಳಿಕೊಂಡಿದ್ದರು.
ತಮ್ಮ ಗೇಮ್ ಪ್ಲಾನ್ ಅನ್ನು ಕಾರ್ಯಗತಗೊಳಿಸಲು ಸಂತೋಷ್ ಅವರು ಸಮರ್ಥರಾಗಿದ್ದಾರೆ. ಆದರೂ, ಬಿಜೆಪಿ ಸೋಲನ್ನು ಎದುರಿಸಲಿದೆ ಎಂದು ಶೆಟ್ಟರ್ ಹೇಳಿದರು. 'ಪಕ್ಷದಲ್ಲಿ (ಬಿಜೆಪಿ) ಯಾವುದೇ ವ್ಯಕ್ತಿಗಿಂತ ಪಕ್ಷ ಮುಖ್ಯ ಎಂಬ ಮಾತಿದೆ. ಇವತ್ತಿನ ದಿನಗಳಲ್ಲಿ ಪಕ್ಷ ನಿಷ್ಠೆಗಿಂತ ವ್ಯಕ್ತಿ ನಿಷ್ಠೆ ಮುಖ್ಯವಾಗಿದೆ. ಅವರಿಗೆ ನಿಷ್ಠರಾಗಿರುವವರಿಗೆ ಆದ್ಯತೆ ನೀಡಲಾಯಿತು' ಎಂದು ಆರು ಬಾರಿ ಬಿಜೆಪಿ ಶಾಸಕರಾಗಿದ್ದ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಗುಜರಾತ್ ಮಾಡೆಲ್ ಪ್ರಯೋಗಿಸಿದ ಸಂತೋಷ್
ಕಳೆದ ವರ್ಷ ನಡೆದಿದ್ದ ಗುಜರಾತ್ ಚುನಾವಣೆಯಲ್ಲಿ ಹೆಚ್ಚು ಹೊಸಬರಿಗೆ ಮಣೆ ಹಾಕಲು ಬಿಜೆಪಿ ನಿರ್ಧರಿಸಿತ್ತು. ಆ ಪ್ರಯೋಗದಲ್ಲಿ ಬಿಜೆಪಿ ಅಭೂತಪೂರ್ವ ಯಶಸ್ಸು ಕಂಡಿತು. ಅದೇ ಪ್ರಯೋಗವನ್ನು ಕರ್ನಾಟಕದಲ್ಲಿ ಪ್ರಯೋಗಿಸಲು ಬಿಎಲ್ ಸಂತೋಷ್ ಮುಂದಾದರು. ಹಳಬರಿಗೆ ಮಣೆ ಹಾಕದೆ ತಮ್ಮ ನಿಷ್ಠರಿಗೆ ಮಣೆ ಹಾಕಲು ನೋಡಿದರು.

ಪಕ್ಷದ ಪ್ರಮುಖ ನಾಯಕರಾದ ಮಾಜಿ ಡಿಸಿಎಂ ಈಶ್ವರಪ್ಪ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹಾಗೂ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರಿಗೆ ಟಿಕೆಟ್ ನಿರಾಕರಿಸಿ ಹೊಸಬರಿಗೆ ಮಣೆ ಹಾಕಲಾಯಿತು. ಇದು ಬಿಜೆಪಿಯಲ್ಲಿ ಚುನಾವಣೆ ಮೊದಲೇ ಕಲ್ಲೋಲವನ್ನೇ ಸೃಷ್ಟಿಸಿತು. ಜಗದೀಶ್ ಶೆಟ್ಟರ್ ಅವರು ಬಿಜೆಪಿ ತೊರೆದು ಕಾಂಗ್ರೆಸ್ ತೊರೆದರು. ಶೆಟ್ಟರ್ ಚುನಾವಣೆಯಲ್ಲಿ ಸೋತರೂ ಸಹಿತ ಅವರನ್ನು ಬಿಜೆಪಿ ನಡೆಸಿಕೊಂಡ ರೀತಿಗೆ ಉತ್ತರ ಕರ್ನಾಟಕದ ಲಿಂಗಾಯತ ಸಮುದಾಯದಲ್ಲಿ ಅಸಮಾಧಾನ ಭುಗಿಲೆದ್ದಿತು.
ಅದೇ ರೀತಿ ಲಕ್ಷ್ಮಣ ಸವದಿ ಅವರು ಬಿಜೆಪಿಯಿಂದ ಹೊರ ನಡೆದು ಕಾಂಗ್ರೆಸ್ ಸೇರ್ಪಡೆಗೊಂಡರು. ಅವರು ಅಥಣಿಯಲ್ಲಿ ಭಾರೀ ಅಂತರದಿಂದ ಗೆಲುವು ಸಾಧಿಸಿದರು. ಅಥಣಿ ಪಕ್ಕದ ಎರಡು ತಾಲ್ಲೂಕುಗಳಲ್ಲಿ ಸವದಿ ಅವರು ಪ್ರಭಾವ ಬೀರಿದರು. ಸಂತೋಷ್ ಅವರ ನಡೆ ಉತ್ತರ ಕರ್ನಾಟಕದ ಲಿಂಗಾಯತ ಸಮುದಾಯದಲ್ಲಿ ಆಕ್ರೋಶವನ್ನು ಹುಟ್ಟುಹಾಕಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ.
ಇದಕ್ಕೂ ಮೊದಲು ಯಡಿಯೂರಪ್ಪನವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೈಬಿಟ್ಟಿರುವುದರ ಹಿಂದೆ ಬಿಎಲ್ ಸಂತೋಷ್ ಇದ್ದಾರೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಓಡಾಡುತ್ತಿವೆ. ಇದೂ ಸಹಿತ ಲಿಂಗಾಯತ ಸಮುದಾಯಲ್ಲಿ ಆಕ್ರೋಶವನ್ನು ಹುಟ್ಟುಹಾಕಿತು. ಇದೆಲ್ಲವೂ ಸೇರಿ ಬಿಜೆಪಿ ಹಿನ್ನೆಡೆಗೆ ಕಾರಣವಾಯಿತು. ಬಿಜೆಪಿ ಸೋತ ಬಳಿಕ ಬಿಎಲ್ ಸಂತೋಷ್ ಅವರ ಕಡೆಗೆ ಎಲ್ಲರ ಕಣ್ಣು ಹೊರಳಿವೆ.
-
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕನ್ನಡಿಗರಿಗಿಂತ ಕೇರಳದವರೇ ಅದೃಷ್ಟವಂತರು: ವಯನಾಡಿಗೆ ಸಿದ್ದರಾಮಯ್ಯರಿಂದ 10 ಕೊಟಿ ರೂ ಅನುದಾನ: ಆಕ್ರೋಶ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕಡೆ ಭರ್ಜರಿ ಬಹುಮತದೊಂದಿಗೆ ಕಾಂಗ್ರೆಸ್ ಗೆಲುವು ಎಂದ ಡಿ.ಕೆ.ಶಿವಕುಮಾರ್












Click it and Unblock the Notifications