ಬಿಪಿಎಲ್ ಕಾರ್ಡ್ ಇಲ್ಲದೆ ಚಿಕಿತ್ಸೆ ವಂಚಿತ ಬಾಲಕ

ಆದರೆ, ಕಡುಬಡವರ ಮಗನಾದ ಈ ಬಾಲಕನಿಗೆ ಚಿಕಿತ್ಸೆ ನೀಡಲು ಬೆಂಗಳೂರಿನ ವೈದ್ಯರು ಹಿಂದೇಟು ಹಾಕುತ್ತಿದ್ದಾರೆ. ಇದಕ್ಕೆ ಕಾರಣ ಬಾಲಕನ ಪಾಲಕರ ಬಳಿ ಬಿಪಿಎಲ್ ಕಾರ್ಡ್ ಇಲ್ಲದೇ ಇರುವುದು! ಜೀವನ್ಮರಣದೊಂದಿಗೆ ಹೋರಾಟ ನಡೆಸಿರುವ ಬಾಲಕ ಬಿಪಿಎಲ್ ಕಾರ್ಡ್ ಇಲ್ಲದ್ದರಿಂದ ಚಿಕಿತ್ಸೆಯಿಂದ ವಂಚಿತನಾಗಿದ್ದಾನೆ.
ಬಡವರ ಬಳಿ ಬಿಪಿಎಲ್ ಕಾರ್ಡ್ ಇದ್ದರೆ ಮಾತ್ರ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲು ಸಾಧ್ಯವಾ? ಬಾಲಕನ ಈ ಪರಿಸ್ಥಿತಿಯನ್ನು ಗಮನಿಸಿರುವ ಗುರುಮಿಠಕಲ್ ಶಾಸಕ, ಜವಳಿ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಬಾಬುರಾವ್ ಚಿಂಚನಸೂರ್ ಅವರು ಖರ್ಚುವೆಚ್ಚಗಳನ್ನು ಭರಿಸಲು ಮುಂದೆ ಬಂದಿರುವುದು ಪಾಲಕರಿಗೆ ಹೋದ ಜೀವ ಮರಳಿ ಬಂದಂತಾಗಿದೆ.
ಯಾದಗಿರಿ ತಾಲೂಕಿನ ಸಾವೂರ ಗ್ರಾಮದ ನಿವಾಸಿ ಮರೆಪ್ಪಾ ಎಂಬಾತನ ಮಗ ಮರಿಯಪ್ಪ ಊರ್ಫ್ ಮಹೇಂದ್ರ. ಈತ ಕಳೆದ ಮೂರು ವರ್ಷಗಳಿಂದ ಲೀವರ್ ಸಮಸ್ಯೆಯಿಂದ ಬಳಲುತ್ತಿದ್ದಾನೆ. ಮೂರು ವರ್ಷಗಳಿಂದ ಯಾದಗಿರಿಯಿಂದ ಬೆಂಗಳೂರಿಗೆ ಬಂದು ಕೂಲಿನಾಲಿ ಮಾಡಿ ಬಾಲಕನಿಗೆ ಚಿಕಿತ್ಸೆ ಕೊಡಿಸಲು ಪಾಲಕರು ಯತ್ನಿಸುತ್ತಿದ್ದಾರೆ.
ಚಿಕಿತ್ಸೆಗೆ 10ರಿಂದ 12 ಲಕ್ಷ ರು. ಖರ್ಚಾಗುತ್ತದೆಂದು ವೈದ್ಯರು ಹೇಳಿದ್ದಾರೆ. ಅಷ್ಟುಇಷ್ಟು ಚಿಕಿತ್ಸೆ ಕೊಡಿಸಲಾಗಿದೆಯಾದರೂ ಶಸ್ತ್ರಚಿಕಿತ್ಸೆ ಇಲ್ಲದೆ ಸಂಪೂರ್ಣ ಗುಣವಾಗುವುದಿಲ್ಲ ಎಂದು ವೈದ್ಯರು ಹೇಳಿದ್ದಾರೆ. ದಿನದಿಂದ ದಿನಕ್ಕೆ ಕಾಯಿಲೆ ಗಂಭೀರ ಸ್ವರೂಪ ಪಡೆಯುತ್ತಿದ್ದು, ಹೊಟ್ಟೆ ಊದಿಕೊಳ್ಳುತ್ತಿದೆ. ಮಗನ ಯಾತನೆ ನೋಡಲಾಗದೆ ಮರೆಪ್ಪಾ ದಂಪತಿ ಒದ್ದಾಡುತ್ತಿದೆ.
ಹೊಟ್ಟೆ ತೀವ್ರವಾಗಿ ಊದಿಕೊಂಡಿದೆ. ಸರಿಯಾಗಿ ಕೂಡುವುದಕ್ಕೆ ಮತ್ತು ನಡೆಯುವುದಕ್ಕೆ ಸಾಧ್ಯವಾಗುತ್ತಿಲ್ಲ. ಬಾಲಕ ಮಲಗಿದಲ್ಲಿಯೇ ಮಲಗಿರುತ್ತಾನೆ. ಅಪೋಲೋ ಅಥವಾ ನಾರಾಯಣ ಹೃದಯಾಲಯದಲ್ಲಿ ಒಳ ರೋಗಿಯಾಗಿ ಚಿಕಿತ್ಸೆ ಕೊಡಿಸಬೇಕಾದರೆ ಬಿಪಿಎಲ್ ಕಾರ್ಡ್ ನ ಅಗತ್ಯವಿದೆ ಅಂತಾರೆ ಮರೆಪ್ಪಾ.
ಬಿಪಿಎಲ್ ಕಾರ್ಡ್ ಇಲ್ಲದ್ದರಿಂದ ಬೇರೆ ದಾರಿ ಕಾಣದೆ ಪಾಲಕರು ಮಗನ ಸಮೇತ ಊರಿಗೆ ಮರಳಿದ್ದಾರೆ. ಬಿಪಿಎಲ್ ಕಾರ್ಡ್ ಕೊಡಿಸಬೇಕೆಂದು ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿಗೆ ಬುಧವಾರ ಬಂದಿದ್ದರು. ಅರ್ಜಿ ಸಲ್ಲಿಸಿ ಬಾಲಕನ ಪರಿಸ್ಥಿತಿಯನ್ನು ಅಧಿಕಾರಿಗಳಿಗೆ ತೋರಿಸಿದರೂ ಬಿಪಿಎಲ್ ಕಾರ್ಡ್ ಸಿಕ್ಕಿಲ್ಲ.
ಸರ್ಕಾರ ಬಡವರಿಗೆ ಅನುಕೂಲವಾಗಲೆಂದು ಹಲವು ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಆದರೆ,ಯೋಜನೆಗಳು ಸರಿಯಾದ ರೀತಿಯಲ್ಲಿ ಕಾರ್ಯರೂಪಕ್ಕೆ ಬರದಿದ್ದಾಗ ಎಂತಹ ತೊಂದರೆಗೆ ಒಳಗಾಗಬೇಕಾಗುತ್ತದೆ ಎನ್ನುವುದಕ್ಕೆ ಬಿಪಿಎಲ್ ಪಡಿತರ ಚೀಟಿಯಿಂದ ವಂಚಿತರಾಗಿರುವ ಈ ಕುಟುಂಬದ ರೋಧನವೆ ಸಾಕ್ಷಿಯಾಗಿದೆ.
ಸರ್ಕಾರದ ನಿಯಮಗಳು ಏನೇ ಇರಲಿ. ಇಂತಹ ತುರ್ತು ಪರಿಸ್ಥಿತಿಯಲ್ಲಿ ದಾಖಲೆಗಳಿದ್ದಾಗ ಮಾತ್ರ ಚಿಕಿತ್ಸೆ ನೀಡುವುದು ಎಂತಹ ನ್ಯಾಯ? ದಾಖಲೆಗಳಿಲ್ಲದಿದ್ದರೆ ಚಿಕಿತ್ಸೆ ನೀಡಬಾರದೆ? ವೈದ್ಯರು ಮಾನವೀಯತೆ ತೋರಿ ತೀವ್ರವಾಗಿ ಬಳಲುತ್ತಿರುವ ಬಾಲಕನಿಗೆ ತುರ್ತು ಶಸ್ತ್ರಚಿಕಿತ್ಸೆ ನೀಡಬೇಕು ಎಂದು ಆ ಬಾಲಕನ ಪರಿಸ್ಥಿತಿ ನೋಡಿದವರು ಹೇಳುತ್ತಿದ್ದಾರೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications