ಹೊಸ ಅಭ್ಯರ್ಥಿಗೆ ಬಿಜೆಪಿ ಮಣೆ: ಪಕ್ಷ ಬದಲಿಸಿದ ಜಯಪ್ರಕಾಶ್ ಹೆಗ್ಡೆಗೆ 'ಕೈ' ತಪ್ಪುತ್ತಾ ಟಿಕೆಟ್?
ಉಡುಪಿ, ಮಾರ್ಚ್ 16: ಕಾಂಗ್ರೆಸ್ಗೂ ಮೊದಲು ಅಭ್ಯರ್ಥಿ ಘೋಷಣೆ ಮಾಡುವ ಮೂಲಕ ಬಿಜೆಪಿ ಕಾಂಗ್ರೆಸ್ ಪಕ್ಷದ ತಲೆನೋವು ಹೆಚ್ಚು ಮಾಡಿದೆ. ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಹಾಲಿ ಸಂಸದೆ ಶೋಭಾ ಕರಂದ್ಲಾಜೆಗೆ ಟಿಕೆಟ್ ಸಿಗಬಹುದು ಎನ್ನುವ ಲೆಕ್ಕಾಚಾರ ಹಾಕಿದ ಕಾಂಗ್ರೆಸ್ ಜಯಪ್ರಕಾಶ್ ಹೆಗ್ಡೆಯನ್ನು ಪಕ್ಷಕ್ಕೆ ಸೆಳೆದುಕೊಂಡಿತ್ತು.
ಈ ನಡುವೆ ಹಿಂದುಳಿದ ವರ್ಗದ ನಾಯಕನಿಗೆ ಟಿಕೆಟ್ ಕೊಟ್ಟು ಬಿಜೆಪಿ ಹೊಸ ದಾಳ ಉರುಳಿಸಿದೆ. ಅನಿರೀಕ್ಷಿತ ಅಚ್ಚರಿ ಎಂಬಂತೆ ಬಿಜೆಪಿ ಕೋಟ ಶ್ರೀನಿವಾಸ ಪೂಜಾರಿಗೆ ಉಡುಪಿ ಚಿಕ್ಕಮಗಳೂರು ಬಿಜೆಪಿ ಟಿಕೆಟ್ ನೀಡಿದೆ. ಹೀಗಾಗಿ ಕಾಂಗ್ರೆಸ್ ಮತ್ತೆ ಹೊಸದಾಗಿ ಕೂಡಿ ಕಳೆಯುವ ಲೆಕ್ಕಾಚಾರ ಮಾಡುತ್ತಿದೆ.

ಹೊಸ ಅಭ್ಯರ್ಥಿ ಘೋಷಣೆ ಮಾಡಿ ಬಿಜೆಪಿ ಕಾಂಗ್ರೆಸ್ ತಂತ್ರ ಬುಡಮೇಲು ಮಾಡಿದೆ. ಜಾತಿ ಲೆಕ್ಕಾಚಾರ ಮಾಡಿ ಬಿಜೆಪಿ ಟಿಕೆಟ್ ನೀಡಿದ್ದು, ಕಾಂಗ್ರೆಸ್ ಹೊಸ ಲೆಕ್ಕ ಶುರು ಮಾಡಿದೆ. ಬಿಜೆಪಿ ಗೌಡ ಸಮುದಾಯದ ಶೋಭಾ ಕರಂದ್ಲಾಜೆಗೆ ಟಿಕೆಟ್ ಎಂದು ಭಾವಿಸಿದ್ದ ಕಾಂಗ್ರೆಸ್, ಬಂಟ ಸಮುದಾಯದ ಜಯಪ್ರಕಾಶ್ ಹೆಗ್ಡೆಯನ್ನು ಪಕ್ಷಕ್ಕೆ ಸೆಳೆದಿತ್ತು. ಬದಲಾದ ಪರಿಸ್ಥಿತಿಯಲ್ಲಿ ಶೋಭಾ ಕರಂದ್ಲಾಜೆ ಬೆಂಗಳೂರು ಉತ್ತರಕ್ಕೆ ಶಿಫ್ಟ್ ಆದರು. ಶೋಭಾ ಸ್ಥಾನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಅಭ್ಯರ್ಥಿಯಾಗಿದ್ದಾರೆ.
ಹೀಗಾಗಿ ಕಾಂಗ್ರೆಸ್ ಹೊಸದಾಗಿ ಎಲ್ಲಾ ಸಾಧ್ಯತೆಗಳನ್ನು ಅಳೆದು ತೂಗುತ್ತಿದೆ. ಟಿಕೆಟ್ ಜಯಪ್ರಕಾಶ್ ಹೆಗ್ಡೆಗೇ ಕೊಡಬೇಕಾ? ಮಾಜಿ ಸಚಿವ ಮಾಜಿ ಸಂಸದ ವಿನಯಕುಮಾರ್ ಸೊರಕೆಗೋ? ಈ ನಡುವೆ ಆಕಾಂಕ್ಷಿಗಳಾಗಿರುವ ಡಾ. ಅಂಶುಮಂತ್- ಸುಧೀರ್ ಕುಮಾರ್ ಮರೋಳ್ಳಿ ಹೆಸರು ಮತ್ತೆ ಚರ್ಚೆಗೆ ಬಂದಿದೆ. ಬಿಲ್ಲವ ಅಭ್ಯರ್ಥಿ ಎದುರು ಯಾರನ್ನು ಕಣಕ್ಕಿಳಿಸಬೇಕು ಎಂಬ ಚರ್ಚೆ ಕಾಂಗ್ರೆಸ್ನಲ್ಲಿ ನಡೆಯುತ್ತಿದೆ.

ಈವರೆಗೆ ಜಯಪ್ರಕಾಶ್ ಹೆಗ್ಡೆಯ ಒಂದು ಹೆಸರನ್ನು ಮಾತ್ರ ಹೈಕಮಾಂಡ್ಗೆ ಕಳುಹಿಸಿರುವ ರಾಜ್ಯ ನಾಯಕರು ಈಗ ಪುನರ್ ವಿಮರ್ಷೆ ಮಾಡುತ್ತಿದ್ದಾರಂತೆ. ಬಿಜೆಪಿಯನ್ನು ಎದುರಿಸಲು ಚಿಕ್ಕಮಗಳೂರು ಮೂಲದ ಅಭ್ಯರ್ಥಿಗೆ ಅವಕಾಶ ನೀಡುವ ಬಗ್ಗೆ ಕಾಂಗ್ರೆಸ್ ಪಾಳಯದಲ್ಲಿ ಚರ್ಚೆ ನಡೆಯುತ್ತಿದೆ. ಹೀಗಾಗಿ ಈವರೆಗೆ ಟಿಕೆಟ್ ಕೂಡಾ ಘೋಷಣೆಯಾಗಿಲ್ಲ. ಅಧಿಕೃತ ಘೋಷಣೆಗಾಗಿ ಟಿಕೆಟ್ ಆಕಾಂಕ್ಷಿಗಳು ಮಾತ್ರವಲ್ಲ ಕಾಂಗ್ರೆಸ್ ಕಾರ್ಯರ್ಯರು ಕೂಡ ಕಾಯುತ್ತಿದ್ದಾರೆ.
ಜಯಪ್ರಕಾಶ್ ಹೆಗ್ಡೆಗೆ ಟಿಕೆಟ್ ಕೊಡುವುದಾಗಿ ಈಗಾಗಲೇ ಪಕ್ಷ ನಿರ್ಧರಿಸಿತ್ತು. ಆದರೆ ಈ ನಡುವೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚಿಕ್ಕಮಗಳೂರಿನ ನಾಲ್ಕು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆದ್ದಿದೆ. ಹೀಗಾಗಿ ನಾಲ್ಕು ಶಾಸಕರ ಅಭಿಪ್ರಾಯ ಪಡೆದು ಕಾಂಗ್ರೆಸ್ ಹೊಸ ತಂತ್ರಗಾರಿಕೆ ಮಾಡುತ್ತಿದೆ. ಚಿಕ್ಕಮಗಳೂರು ಜಿಲ್ಲೆಯಿಂದ ಅಭ್ಯರ್ಥಿ ಆಯ್ಕೆ ಮಾಡಿದರೆ ಕಣ ರಂಗೇರುತ್ತದೆ ಎಂಬ ಲೆಕ್ಕಾಚಾರವೂ ಕಾಂಗ್ರೆಸ್ ಪಡಸಾಲೆಯಲ್ಲಿ ನಡೆಯುತ್ತಿದೆ.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ











Click it and Unblock the Notifications