ದಲಿತರಿಗೆ ಪ್ರತ್ಯೇಕ ಸ್ಮಶಾನ: ಏನಿದು ಸರಕಾರದ ಹೊಸ 'ನಾನ್ ಸೆನ್ಸ್' ಸುತ್ತೋಲೆ?
ಉಡುಪಿ, ಫೆ 27: 'ಕುಲಕುಲ ಕುಲವೆಂದು ಹೊಡೆದಾಡದಿರಿ, ನಿಮ್ಮ ಕುಲದ ನೆಲೆಯನೇನಾದರೂ ಬಲ್ಲಿರಾ' ಎನ್ನುವ ಕನಕದಾಸರ ಕೀರ್ತನೆಯ ಅರ್ಥವನ್ನು ಮೊದಲು ಸರಕಾರ ಮತ್ತು ಅಧಿಕಾರಿಗಳು ಅರ್ಥ ಮಾಡಿಕೊಳ್ಳಬೇಕಿದೆ.
ಸಮಾಜ ಕಲ್ಯಾಣ ಇಲಾಖೆ, ತಾನು ಹೊರಡಿಸಿರುವ ಸುತ್ತೋಲೆಯನ್ನು ವಾಪಸ್ ಪಡೆಯದೇ ಇದ್ದಲ್ಲಿ ಈ ವಿಚಾರ ಗಂಭೀರ ಸ್ವರೂಪ ಪಡೆಯುವ ಸಾಧ್ಯತೆಯಿಲ್ಲದಿಲ್ಲ. ಇತ್ತೀಚೆಗೆ, ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ನಡೆದ ಘಟನೆಯ ತರುವಾಯ ಇಂತಹ ಸುತ್ತೋಲೆ ಇಲಾಖೆಯಿಂದ ಬಂದಿರುವುದು ಈಗ ಚರ್ಚೆಗೆ ಗ್ರಾಸವಾಗಿದೆ.
ಸಮಾಜ ಇಲಾಖೆಯ ಸಹಾಯಕ ನಿರ್ದೇಶಕರಿಂದ, ಪಂಚಾಯತಿ ಅಭಿವೃದ್ದಿ ಅಧಿಕಾರಿಗಳಿಗೆ ಹೀಗೊಂದು ಸುತ್ತೋಲೆ ಬಂದಿದೆ. ಅದರಲ್ಲಿ, ಪ್ರತೀ ಗಾಮಗಳಲ್ಲಿ ಪರಿಶಿಷ್ಟ ಜನಾಂಗದವರಿಗೆ ಪ್ರತ್ಯೇಕ ಸ್ಮಶಾನ ಇಲ್ಲದೇ ಇದ್ದ ಪಕ್ಷದಲ್ಲಿ, ಗ್ರಾಮವಾರು ಸ್ಮಶಾನಕ್ಕೆ ಜಾಗ ಮಂಜೂರು ಮಾಡುವಂತೆ ಪ್ರಸ್ತಾವನೆ ಕಳುಹಿಸಿಕೊಡುವಂತೆ ಸೂಚಿಸಲಾಗಿದೆ.

ಸ್ಮಶಾನವನ್ನು ಎಲ್ಲಾ ವರ್ಗದವರು ಬಳಸಿಕೊಳ್ಳುತ್ತಿರುವ ಈ ಸಮಯದಲ್ಲಿ, ಪ್ರತ್ಯೇಕ ಸ್ಮಶಾನ ಮಂಜೂರು ಮಾಡಲು ಸರಕಾರ ಮುಂದಾಗಿದೆಯೇ ಎನ್ನುವ ಗಂಭೀರ ಪ್ರಶ್ನೆ ಈಗ ಎದುರಾಗಿದೆ.
ಉಡುಪಿಯ ಉಚ್ಚಿಲ ಬಡಾ ಗ್ರಾ.ಪಂ ವ್ಯಾಪ್ತಿಯಲ್ಲಿ ಸಾರ್ವಜನಿಕ ಹಿಂದೂ ರುದ್ರಭೂಮಿ ಇದ್ದರೂ ಅದರಲ್ಲಿ ದಲಿತರಿಗೆ ಶವ ಸಂಸ್ಕಾರ ಮಾಡಲು ಒಂದು ಸಮುದಾಯ ಬಿಡುತ್ತಿಲ್ಲ. ಯಾರಾದರೂ ಸಾವನ್ನಪ್ಪಿದರೆ ಶವವನ್ನು ಪಕ್ಕದ ಗ್ರಾಮಕ್ಕೆ ಒಯ್ದು ಅಂತ್ಯಸಂಸ್ಕಾರ ನಡೆಸಬೇಕಿದೆ.
ಕಳೆದ ಜನವರಿ 28ರಂದು, ಉಚ್ಚಿಲ ಗ್ರಾಮದಲ್ಲಿ ಪರಿಶಿಷ್ಟ ಸಮುದಾಯದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದರು. ಯಥಾಪ್ರಕಾರ ಊರಲ್ಲಿರುವ ರುದ್ರಭೂಮಿಯಲ್ಲಿ ಶವ ಸಂಸ್ಕಾರ ಮಾಡಲು ಅನುಮತಿ ಸಿಕ್ಕಿರಲಿಲ್ಲ. ಸ್ಮಶಾನ ಬಂದ್ ಆಗಿದ್ದ ಕಾರಣ ದಲಿತರ ಸಹನೆ ಕಟ್ಟೆ ಒಡೆದು, ಸ್ಮಶಾನವಿಲ್ಲದಿರುವುದನ್ನು ಪ್ರತಿಭಟಿಸಿ, ದಸಂಸ, ಗ್ರಾಪಂ ಕಚೇರಿ ಎದುರು ಚಟ್ಟ ನಿರ್ಮಿಸಿ ಪ್ರತಿಭಟನೆ ನಡೆಸಿದ್ದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದಾಗಿದೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ












Click it and Unblock the Notifications