ದಲಿತರಿಗೆ ಪ್ರತ್ಯೇಕ ಸ್ಮಶಾನ: ಏನಿದು ಸರಕಾರದ ಹೊಸ 'ನಾನ್ ಸೆನ್ಸ್' ಸುತ್ತೋಲೆ?
ಉಡುಪಿ, ಫೆ 27: 'ಕುಲಕುಲ ಕುಲವೆಂದು ಹೊಡೆದಾಡದಿರಿ, ನಿಮ್ಮ ಕುಲದ ನೆಲೆಯನೇನಾದರೂ ಬಲ್ಲಿರಾ' ಎನ್ನುವ ಕನಕದಾಸರ ಕೀರ್ತನೆಯ ಅರ್ಥವನ್ನು ಮೊದಲು ಸರಕಾರ ಮತ್ತು ಅಧಿಕಾರಿಗಳು ಅರ್ಥ ಮಾಡಿಕೊಳ್ಳಬೇಕಿದೆ.
ಸಮಾಜ ಕಲ್ಯಾಣ ಇಲಾಖೆ, ತಾನು ಹೊರಡಿಸಿರುವ ಸುತ್ತೋಲೆಯನ್ನು ವಾಪಸ್ ಪಡೆಯದೇ ಇದ್ದಲ್ಲಿ ಈ ವಿಚಾರ ಗಂಭೀರ ಸ್ವರೂಪ ಪಡೆಯುವ ಸಾಧ್ಯತೆಯಿಲ್ಲದಿಲ್ಲ. ಇತ್ತೀಚೆಗೆ, ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ನಡೆದ ಘಟನೆಯ ತರುವಾಯ ಇಂತಹ ಸುತ್ತೋಲೆ ಇಲಾಖೆಯಿಂದ ಬಂದಿರುವುದು ಈಗ ಚರ್ಚೆಗೆ ಗ್ರಾಸವಾಗಿದೆ.
ಸಮಾಜ ಇಲಾಖೆಯ ಸಹಾಯಕ ನಿರ್ದೇಶಕರಿಂದ, ಪಂಚಾಯತಿ ಅಭಿವೃದ್ದಿ ಅಧಿಕಾರಿಗಳಿಗೆ ಹೀಗೊಂದು ಸುತ್ತೋಲೆ ಬಂದಿದೆ. ಅದರಲ್ಲಿ, ಪ್ರತೀ ಗಾಮಗಳಲ್ಲಿ ಪರಿಶಿಷ್ಟ ಜನಾಂಗದವರಿಗೆ ಪ್ರತ್ಯೇಕ ಸ್ಮಶಾನ ಇಲ್ಲದೇ ಇದ್ದ ಪಕ್ಷದಲ್ಲಿ, ಗ್ರಾಮವಾರು ಸ್ಮಶಾನಕ್ಕೆ ಜಾಗ ಮಂಜೂರು ಮಾಡುವಂತೆ ಪ್ರಸ್ತಾವನೆ ಕಳುಹಿಸಿಕೊಡುವಂತೆ ಸೂಚಿಸಲಾಗಿದೆ.

ಸ್ಮಶಾನವನ್ನು ಎಲ್ಲಾ ವರ್ಗದವರು ಬಳಸಿಕೊಳ್ಳುತ್ತಿರುವ ಈ ಸಮಯದಲ್ಲಿ, ಪ್ರತ್ಯೇಕ ಸ್ಮಶಾನ ಮಂಜೂರು ಮಾಡಲು ಸರಕಾರ ಮುಂದಾಗಿದೆಯೇ ಎನ್ನುವ ಗಂಭೀರ ಪ್ರಶ್ನೆ ಈಗ ಎದುರಾಗಿದೆ.
ಉಡುಪಿಯ ಉಚ್ಚಿಲ ಬಡಾ ಗ್ರಾ.ಪಂ ವ್ಯಾಪ್ತಿಯಲ್ಲಿ ಸಾರ್ವಜನಿಕ ಹಿಂದೂ ರುದ್ರಭೂಮಿ ಇದ್ದರೂ ಅದರಲ್ಲಿ ದಲಿತರಿಗೆ ಶವ ಸಂಸ್ಕಾರ ಮಾಡಲು ಒಂದು ಸಮುದಾಯ ಬಿಡುತ್ತಿಲ್ಲ. ಯಾರಾದರೂ ಸಾವನ್ನಪ್ಪಿದರೆ ಶವವನ್ನು ಪಕ್ಕದ ಗ್ರಾಮಕ್ಕೆ ಒಯ್ದು ಅಂತ್ಯಸಂಸ್ಕಾರ ನಡೆಸಬೇಕಿದೆ.
ಕಳೆದ ಜನವರಿ 28ರಂದು, ಉಚ್ಚಿಲ ಗ್ರಾಮದಲ್ಲಿ ಪರಿಶಿಷ್ಟ ಸಮುದಾಯದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದರು. ಯಥಾಪ್ರಕಾರ ಊರಲ್ಲಿರುವ ರುದ್ರಭೂಮಿಯಲ್ಲಿ ಶವ ಸಂಸ್ಕಾರ ಮಾಡಲು ಅನುಮತಿ ಸಿಕ್ಕಿರಲಿಲ್ಲ. ಸ್ಮಶಾನ ಬಂದ್ ಆಗಿದ್ದ ಕಾರಣ ದಲಿತರ ಸಹನೆ ಕಟ್ಟೆ ಒಡೆದು, ಸ್ಮಶಾನವಿಲ್ಲದಿರುವುದನ್ನು ಪ್ರತಿಭಟಿಸಿ, ದಸಂಸ, ಗ್ರಾಪಂ ಕಚೇರಿ ಎದುರು ಚಟ್ಟ ನಿರ್ಮಿಸಿ ಪ್ರತಿಭಟನೆ ನಡೆಸಿದ್ದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದಾಗಿದೆ.
-
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ












Click it and Unblock the Notifications