Get Updates
Get notified of breaking news, exclusive insights, and must-see stories!

ಮಂಡ್ಯ ಕಣದಲ್ಲಿ ಸುಮಲತಾ V/S ಕುಮಾರಸ್ವಾಮಿ: ಇಬ್ಬರಿಗೂ ಠಕ್ಕರ್‌ ಕೊಡಲು ಕಾಂಗ್ರೆಸ್‌ ನಿಂದ ಆ ನಾಯಕಿ ಕಣಕ್ಕೆ!?

2023 ವಿಧಾನಸಭಾ ಚುನಾವಣೆಯಲ್ಲಿ ಈ ಬಾರೀ ಮಂಡ್ಯ ವಿಧಾನಸಭಾ ಕ್ಷೇತ್ರ ಘಟಾನುಘಟಿ ನಾಯಕರ ಸ್ಪರ್ಧೆಗೆ ಸಾಕ್ಷಿಯಾಗಲಿದೆ. ಸುಮಲತಾ ಅವರ ರಾಜಕೀಯ ಎದುರಾಳಿಯಾಗಿರುವ ನಾಯಕರು ಈ ಬಾರಿ ಮಂಡ್ಯ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಲಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ.

ಮಂಡ್ಯ,ಮಾರ್ಚ್17:‌ 2019 ರ ಲೋಕಸಭಾ ಚುನಾವಣೆಯಿಂದ ರಾಜಕೀಯ ಬದ್ದವೈರಿಗಳಾದ ಸಂಸದೆ ಸುಮಲತಾ ಹಾಗೂ ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ಅವರ ನಡುವೆ ಸ್ವಾಭಿಮಾನಿ ಜಟಾಪಟಿ ಮುಂದುವರೆದಿದೆ. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರವೇ ಸಾಕಷ್ಟು ಕುತೂಹಲವನ್ನ ಹುಟ್ಟ ಹಾಕುವಂತೆ ಮಾಡಿದೆ.

ಈ ಹಿಂದೆ ಮಂಡ್ಯ ಸಂಸದೆ ಸುಮಲತಾ ರಾಜ್ಯ ರಾಜಕಾರಣಕ್ಕೆ ಎಂಟ್ರಿಯಾಗುತ್ತಾರೆ ಎನ್ನುವ ಜೋರಾಗಿ ಚರ್ಚೆಯಾಗಿದ್ದು, ಚುನಾವಣೆ ಹೊತ್ತಲಿ ಸುಮಲತಾ ಬಿಜೆಪಿಗೆ ಬೆಂಬಲವನ್ನ ಸೂಚಿಸಿದ್ದಾರೆ. ಇತ್ತ ಬಿಜೆಪಿಗೆ ಬೆಂಬಲ ಸೂಚಿಸಿರುವ ಮೂಲ ಉದ್ದೇಶವೇ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎನ್ನುವ ಕಾರಣಕ್ಕೆ . ಅದು ಅಲ್ಲದೇ ಕುರಿತು ಬಿಜೆಪಿ ಪಾಳಯದಲ್ಲಿ ಸಾಕಷ್ಟು ಚರ್ಚಗಳು ನಡೆಯುತ್ತಿವೆ.

Is Powerful leaders HD Kumaraswamy Sumalatha Ambareesh And Ramya Contesting in Mandya?

ಈಗಾಗಲೇ ಹಳೇ ಮೈಸೂರು ಭಾಗದ ಮೇಲೆ ಕಣ್ಣಿಟ್ಟಿರು ಬಿಜೆಪಿ ಜೆಡಿಎಸ್‌ ಭದ್ರಕೋಟೆಯನ್ನ ಛಿದ್ರಗೊಳಿಸಲು ಮಂಡ್ಯ ಕ್ಷೇತ್ರದಲ್ಲಿ ಸುಮಲತಾ ಕಣಕ್ಕಿಳಿಸಲು ತಯಾರಿ ನಡೆಸಿದ್ದಾರೆ ಎನ್ನಲಾಗಿದೆ. ಇನ್ನೂ ಮೋದಿ ಮಂಡ್ಯ ಭೇಟಿಕೊಟ್ಟ ಬೆನ್ನೆಲ್ಲೇ ಮಂಡ್ಯ ಜಿಲ್ಲೆಯ 6 ಜನ ಜೆಡಿಎಸ್‌ ಶಾಸಕರು ಹಾಗೂ ಮುಖಂಡರ ಜೊತೆಗೆ ಮಾಜಿ ಪ್ರಧಾನಿ ಹಾಗೂ ಜೆಡಿಎಸ್‌ ವರಿಷ್ಠರಾದ ಹೆಚ್‌ ಡಿ ದೇವೇಗೌಡರು ಸಭೆ ನಡೆಸಿ ಹಲವು ಸೂಚನೆಗಳನ್ನ ನೀಡಿದ್ದಾರೆ.

ಇತ್ತ ಮಂಡ್ಯದ 7ಕ್ಕೆ 7 ಕ್ಷೇತ್ರ ಗೆಲ್ಲಲು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರನ್ನು ಕರೆ ತರಲು ಮುಂದಾಗಿದ್ದಾರೆ. ಮಂಡ್ಯದಲ್ಲಿ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರೀ ಸುಮಲತಾ ಅಂಬರೀಶ್‌ ಬಿಜೆಪಿ ಬೆಂಬಲದ ಮೇಲೆ ಕಣಕ್ಕಿಳಿದರೇ ಜೆಡಿಎಸ್‌ ನಿಂದ ಮಂಡ್ಯ ಕ್ಷೇತ್ರಕ್ಕೆ ಎಚ್‌ ಡಿ ಕುಮಾರಸ್ವಾಮಿ ಕಣಕ್ಕಿಳಿಯಲಿದ್ದಾರೆ. ಇನ್ನೂ ಹಳೆ ಮೈಸೂರು ಭಾಗದಲ್ಲಿ ಹೆಚ್ಚು ಸ್ಥಾನಗಳನ್ನ ಪಡೆಯುವ ತವಕದಲ್ಲಿರುವ ಕಾಂಗ್ರೆಸ್‌ ಸಹ ಹಲವು ಲೆಕ್ಕಾಚಾರವನ್ನ ಹಾಕಿಕೊಂಡಿದೆ.

Is Powerful leaders HD Kumaraswamy Sumalatha Ambareesh And Ramya Contesting in Mandya?

ಸುಮಲತಾ ಹಾಗೂ ಕುಮಾರಸ್ವಾಮಿಗೆ ಠಕ್ಕರ್‌ ಕೊಡಲು ಮಾಜಿ ಸಂಸದೆ ರಮ್ಯಾ ಅವರನ್ನು ಮಂಡ್ಯಕ್ಕೆ ಕರೆ ತಂದು ನಿಲ್ಲಿಸಲು ಕಾಂಗ್ರೆಸ್ ಸಿದ್ಧವಾಗಿದೆ ಎಂದು ಹೇಳಲಾಗುತ್ತಿದೆ. ಹೀಗಾಗಿ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಮಧ್ಯೆ ತ್ರಿಕೋನ ಸ್ಪರ್ಧೆ ಏರ್ಪಡಲಿದೆ ಎಂದು ಹೇಳಲಾಗಿದೆ.

ಈಗಾಗಲೇ ಅನಿತಾ ಕುಮಾರಸ್ವಾಮಿ ತನ್ನ ರಾಮನಗರ ಕ್ಷೇತ್ರವನ್ನು ನಿಖಿಲ್‌ ಗೆ ಬಿಟ್ಟುಕೊಟ್ಟಿದ್ದಾರೆ. ಹೀಗಾಗಿ ಜೆಡಿಎಸ್ ಸಿಎಂ ಅಭ್ಯರ್ಥಿ ಆಗಿರೋ ಕಾರಣ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಜೊತೆಗೆ ಮಂಡ್ಯ ನಗರದಿಂದಲೂ ಕಣಕ್ಕಿಳಿಯಲು ಮುಂದಾಗಿದ್ದಾರೆ. ಇನ್ನೊಂದೆಡೆ ಮಂಡ್ಯದಲ್ಲಿ ಕಮಲವನ್ನು ಅರಳಿಸಲು ಮುಂದಾಗಿರೋ ಬಿಜೆಪಿ ರಾಜ್ಯ ರಾಜಕಾರಣಕ್ಕೆ ಸುಮಲತಾ ಅವರನ್ನೇ ಕರೆ ತರೋ ಪ್ರಯತ್ನ ಮಾಡುತ್ತಿದೆ. ಹೀಗಾಗಿ ಸುಮಲತಾ ಅವರು ಬಿಜೆಪಿಯಿಂದ ಎಂಎಲ್‌ಎ ಎಲೆಕ್ಷನ್‌ಗೆ ಕಂಟೆಸ್ಟ್ ಮಾಡೋ ಸಾಧ್ಯತೆ ಇದೆ.

Is Powerful leaders HD Kumaraswamy Sumalatha Ambareesh And Ramya Contesting in Mandya?

ಇನ್ನು, ಇತ್ತ ಸುಮಲತಾ ಮತ್ತು ಎಚ್.ಡಿ ಕುಮಾರಸ್ವಾಮಿ ಅವರ ನಡುವೆ ಕಾಂಗ್ರೆಸ್ ಮಾತ್ರ ಮಾಜಿ ಸಂಸದೆ ರಮ್ಯಾ ಅವರನ್ನು ಮಂಡ್ಯ ರಾಜಕಾರಣಕ್ಕೆ ಕರೆ ತಂದು ಪೈಪೋಟಿ ನೀಡಲು ಮುಂದಾಗಿದೆ. ಹೀಗಾಗಿ ಈ ಬಾರಿ ಮಂಡ್ಯದಲ್ಲಿ ಸಂಸದೆ ಸುಮಲತಾ ಹಾಗೂ ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ನಡುವೆ ರಮ್ಯಾ ಆರ್ಭಟ ಜೋರಾಗಿ ಇರಲಿದೆ. ಒಂದು ವೇಳೆ ಮಂಡ್ಯದಲ್ಲಿ ಸುಮಲತಾ ಸ್ಪರ್ಧಿಸೋದು ಖಚಿತವಾದರೇ ಕುಮಾರಸ್ವಾಮಿಯ ಸ್ಪರ್ದೆಯೂ ಸಹ ಖಚಿತವಾಗಲಿದ್ದು, ಈ ಬಾರೀ ರಾಜ್ಯ ವಿಧಾನಸಭಾ ಕ್ಷೇತ್ರದಲ್ಲಿ ಮಂಡ್ಯ ಮತ್ತೆ ಹೈವೋಲ್ವೇಜ್ ಕ್ಷೇತ್ರವಾಗಲಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+