ನಿತ್ಯಾನಂದನ ಕೈಲಾಸ ದೇಶದಲ್ಲಿ ನ್ಯಾಯಾಧೀಶರಿದ್ದಾರೆಯೇ?
ಬೆಂಗಳೂರು, ಫೆಬ್ರವರಿ 20: ಬಿಡದಿಯ ನಿತ್ಯಾನಂದ ಧ್ಯಾನ ಪೀಠದ ಪೀಠಾಧಿಪತಿ ನಿತ್ಯಾನಂದ ಕೈಲಾಸ ದೇಶದಲ್ಲಿ ಅತ್ಯುನ್ನತ ಸಾಂವಿಧಾನಿಕ ಪೀಠದ ನ್ಯಾಯಾಧೀಶರಿದ್ದಾರೆಯೇ?. ಹೀಗೆಂದು ಕರ್ನಾಟಕ ಹೈಕೋರ್ಟ್ ಸೋಮವಾರ ಮೌಖಿಕವಾಗಿ ಪ್ರಶ್ನಿಸಿದೆ. ಅಲ್ಲದೆ, ಅಲ್ಲಿನ ವಿಳಾಸ ನೀಡಿದರೆ ಅಲ್ಲಿಗೆ ನೋಟಿಸ್ ಕಳುಹಿಸುವುದಾಗಿ ಹೇಳಿದೆ.
ಜಾರ್ಖಂಡ್ ರಾಜ್ಯದ ರಾಂಚಿಯ ದಯಾಶಂಖರ್ ಪಾಲ್ ಅವರು ತಮ್ಮ ಪುತ್ರ ಕೃಷ್ಣಕುಮಾರ್ ಪಾಲ್ ನಾಪತ್ತೆಯಾಗಿರುವ ಹಿನ್ನೆಲೆಯಲ್ಲಿ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಕೆ. ಸೋಮಶೇಖರ್ ಮತ್ತು ನ್ಯಾಯಮೂರ್ತಿ ಉಮೇಶ್ ಎಂ. ಅಡಿಗ ಅವರ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ವಿಶೇಷ ಸರ್ಕಾರಿ ಅಭಿಯೋಜಕರು, "ಬಿಡಿದಿಯ ನಿತ್ಯಾನಂದ ಪೀಠದಲ್ಲಿ ಕೃಷ್ಣ ಕುಮಾರ್ ಅವರ ಬಗ್ಗೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ತೃತೀಯ ಪ್ರತಿವಾದಿಯಾಗಿರುವ ಬಿಡದಿಯ ನಿತ್ಯಾನಂದ ಧ್ಯಾನ ಪೀಠದಿಂದ ನಿತ್ಯಾನಂದ ಅವರು ಪ್ರಪಂಚ ತ್ಯಜಿಸಿದ್ದಾರೆ ಎಂದು ಇ-ಮೇಲ್ ಬಂದಿದೆ. ಮಠದವರಿಗೂ ನಿತ್ಯಾನಂದ ಎಲ್ಲಿದ್ದಾರೆ? ಎನ್ನುವ ಮಾಹಿತಿ ಇಲ್ಲ" ಎಂದರು.
ಇದನ್ನು ಆಲಿಸಿದ ಪೀಠವು ಸಮಗ್ರ ವರದಿ ಸಲ್ಲಿಸುವಂತೆ ಸರ್ಕಾರಕ್ಕೆ ಸೂಚಿಸಿತು. ಆಗ ಅರ್ಜಿದಾರರ ಪರ ವಕೀಲರು ನಿತ್ಯಾನಂದ ಕೈಲಾಸದಲ್ಲಿದ್ದಾರೆ ಎಂದರು. ವಕೀಲರೇ ನೀವು ಕೈಲಾಸ ದೇಶಕ್ಕೆ ಹೋಗಿ ಬನ್ನಿ ಎಂದು ಹೇಳಿದ ನ್ಯಾಯಪೀಠ, ಕೊನೆಗೆ ವಿಚಾರಣೆಯನ್ನು ಮಾರ್ಚ್ 4ಕ್ಕೆ ಮುಂದೂಡಿತು.
ನಿತ್ಯಾನಂದ ಕಿಂಗ್ ಆಫ್ ಕಿಂಗ್ : ಇದಕ್ಕೆ ಪೀಠವು ನಿತ್ಯಾನಂದ ಎಲ್ಲಿದ್ದಾರೆ? ಎಂಬ ಮಾಹಿತಿ ಕೊಟ್ಟರೆ ನಾನು ಅಲ್ಲಿಗೆ ಪ್ರೊಸಸ್ ಕೊಡುತ್ತೇನೆ. ಕೈಲಾಸ ದೇಶದಲ್ಲಿ ಅತ್ಯುನ್ನತ ಸಾಂವಿಧಾನಿಕ ನ್ಯಾಯಾಧೀಶರು ಯಾರು?. ಕೈಲಾಸದಲ್ಲಿ ನಿತ್ಯಾನಂದ ಮಹಾಸ್ವಾಮಿ ಇದ್ದಾನೆ ಎಂದು ನೀವು ಹೇಳಿದ ಮೇಲೆ ಅದರ ಮಾಹಿತಿ ಕೊಡಿ. ಅದು ನಿಮ್ಮ ಕರ್ತವ್ಯ. ನ್ಯಾಯಾಲಯಕ್ಕೆ ಸಹಾಯ ಮಾಡುವುದು ಎಂದರೆ ನಿತ್ಯಾನಂದನ ಬಗ್ಗೆ ಮಾಹಿತಿ ನೀಡುವುದಾಗಿದೆ. ನಿತ್ಯಾನಂದ ಕೈಲಾಸ ದೇಶದಲ್ಲಿ ಕಿಂಗ್ ಆಫ್ ಕಿಂಗ್ ಎಂದು ಲಘು ಧಾಟಿಯಲ್ಲಿ ಹೇಳಿದರು.
ಜತೆಗೆ ನೀವು ಅದರ ಮಾಹಿತಿ ನೀಡಿದರೆ ಕಾನ್ಸುಲೇಟ್ ಮೂಲಕ ನಾನು ಪ್ರೊಸಸ್ ಕೊಡುತ್ತೇನೆ. ಇಲ್ಲವಾದರೆ ಕಮಿಷನರೇಟ್ ಮೂಲಕ ಅಥವಾ ರಾಯಭಾರಿಗಳ ಮೂಲಕ ಪ್ರೊಸಸ್ ಕೊಡುತ್ತೇನೆ. ನೀವು ಮಾಹಿತಿ ನೀಡಿದರೆ ನಾನು ಕಾನ್ಸುಲೇಟ್ ಮೂಲಕ ಹೋಗುವೆ. ಎಕ್ಸಿಕ್ಯೂಟ್ ಮಾಡಲು ನಿಮ್ಮನ್ನೇ ಕಳುಹಿಸುವೆ.. ನೀವು ಕೈಲಾಸ ದೇಶದಲ್ಲೂ ಎಂಜಾಯ್ ಮಾಡಬೇಕು ಎಂದು ನ್ಯಾಯಮೂರ್ತಿ ಹೇಳಿದರು.
-
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ












Click it and Unblock the Notifications