ಐಎಸ್ಐಎಸ್ : ಐಒಸಿ ಮ್ಯಾನೇಜರ್ನಿಂದ ಯಾವ ಸುಳಿವು ಸಿಗಲಿದೆ?
ಬೆಂಗಳೂರು, ಡಿಸೆಂಬರ್ 11 : ಐಎಸ್ಐಎಸ್ ಪರವಾಗಿ ಪ್ರಚಾರ ಮಾಡುತ್ತಿದ್ದ ಆರೋಪದ ಮೇಲೆ ಜೈಪುರದಲ್ಲಿ ಕಲಬುರಗಿ ಮೂಲದ ಮೊಹಮದ್ ಸಿರಾಜುದ್ದೀನ್ ಎಂಬುವವರನ್ನು ಬಂಧಿಸಲಾಗಿದೆ. ಭಾರತದಲ್ಲಿಯೂ ಐಎಸ್ಐಎಸ್ ಉಗ್ರ ಸಂಘಟನೆಗೆ ಬೆಂಬಲವಿದೆ ಎನ್ನುವುದಕ್ಕೆ ಇದೊಂದು ಚಿಕ್ಕ ಸುಳಿವು.
ಗುರುವಾರ ರಾತ್ರಿ ವಿಶೇಷ ಕಾರ್ಯಪಡೆ (ಎಸ್ಒಜಿ) ಮತ್ತು ರಾಜಸ್ಥಾನ ಭಯೋತ್ಪಾದಕ ನಿಗ್ರಹ ಪಡೆ (ಎಟಿಎಸ್) ಜಂಟಿ ಕಾರ್ಯಾಚರಣೆ ನಡೆಸಿ ಸಿರಾಜುದ್ದೀನ್ ಅವರನ್ನು ಬಂಧಿಸಿದ್ದು, ಸದ್ಯ, ಜೈಪುರದಲ್ಲಿಯೇ ಅವರ ವಿಚಾರಣೆ ಮುಂದುವರೆದಿದೆ. [ISIS ಪರ ಪ್ರಚಾರ : ಐಒಸಿ ಮ್ಯಾನೇಜರ್ ಬಂಧನ]

ಕರ್ನಾಟಕದ ಕಲಬುರಗಿ ಮೂಲದ ಸಿರಾಜುದ್ದೀನ್ ಜೈಪುರದಲ್ಲಿ ಭಾರತೀಯ ತೈಲ ನಿಗಮದ (ಐಒಸಿ)ಯಲ್ಲಿ ಮಾರ್ಕೆಟಿಂಗ್ ವಿಭಾಗದ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದರು. ಐಎಸ್ಐಎಸ್ ಉಗ್ರ ಸಂಘಟನೆ ಸೇರುವಂತೆ ಯುವಕರನ್ನು ಪ್ರೇರೆಪಿಸುತ್ತಿದ್ದರು ಎಂಬ ಆರೋಪ ಅವರ ಮೇಲಿದೆ. [ಬಿಜಾಪುರದ ಅಬ್ದುಲ್ ISIS ಸೇರಿಲ್ಲ, ಸೌದಿಯಲ್ಲಿದ್ದಾನೆ]
ಕರ್ನಾಟಕ ಪೊಲೀಸರಿಂದಲೂ ವಿಚಾರಣೆ? : ಸಿರಾಜುದ್ದೀನ್ ಕಲಬುರಗಿ ಮೂಲದವರಾಗಿದ್ದು, ಕರ್ನಾಟಕದ ಪೊಲೀಸರು ಅವರ ವಿಚಾರಣೆ ನಡೆಸುವ ಸಾಧ್ಯತೆ ಇದೆ. ಕರ್ನಾಟಕದ ಪೊಲೀಸರು ರಾಜಸ್ಥಾನದ ಎಟಿಎಸ್ ಜೊತೆ ಸಂಪರ್ಕದಲ್ಲಿದ್ದು, ಅವರು ಮಾಹಿತಿ ಕೇಳಿದರೆ ಕಳುಹಿಸಿಕೊಡಲಿದ್ದಾರೆ.
ಸಿರಾಜುದ್ದೀನ್ ಸಿಕ್ಕಿದ್ದು ಹೇಗೆ? : ಸಿರಾಜುದ್ದೀನ್ ಬಂಧನದ ಕುರಿತು ರಾಜಸ್ಥಾನ ಭಯೋತ್ಪಾದಕ ನಿಗ್ರಹ ಪಡೆ ಹೆಚ್ಚುವರಿ ಡಿಜಿಪಿ ಅಲೋಕ್ ತ್ರಿಪಾಠಿ ಒನ್ ಇಂಡಿಯಾ ಜೊತೆ ಮಾತನಾಡಿದ್ದು, 'ಸಿರಾಜುದ್ದೀನ್ ಅವರ ಸಾಮಾಜಿಕ ಜಾಲ ತಾಣಗಳ ಮಾಹಿತಿಯನ್ನು ಸಂಗ್ರಹಣೆ ಮಾಡಿದ ನಂತರ ಅವರನ್ನು ಬಂಧಿಸಲಾಗಿದೆ' ಎಂದು ಹೇಳಿದ್ದಾರೆ.
'ಐಎಸ್ಐಎಸ್ ಸೇರುವಂತೆ ವಾಟ್ಸಪ್, ಫೇಸ್ಬುಕ್ ಮೂಲಕ ಸಿರಾಜುದ್ದೀನ್ ಪ್ರಚಾರ ಮಾಡುತ್ತಿದ್ದರು. ಉಗ್ರ ಸಂಘಟನೆ ಕುರಿತು ಫೋಟೋ, ವಿಡಿಯೋಗಳನ್ನು ಹಾಕುತ್ತಿದ್ದರು. ದೇಶದ ವಿವಿಧ ಭಾಗಗಳಿಂದ ಹಲವು ಯುವಕರನ್ನು ಅವರು ಸಂಘಟನೆಗೆ ಸೇರಿಸಿದ್ದಾರೆ' ಎಂದು ತ್ರಿಪಾಠಿ ವಿವರಣೆ ನೀಡಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications