Get Updates
Get notified of breaking news, exclusive insights, and must-see stories!

ಐಎಸ್‌ಐಎಸ್ : ಐಒಸಿ ಮ್ಯಾನೇಜರ್‌ನಿಂದ ಯಾವ ಸುಳಿವು ಸಿಗಲಿದೆ?

ಬೆಂಗಳೂರು, ಡಿಸೆಂಬರ್ 11 : ಐಎಸ್ಐಎಸ್ ಪರವಾಗಿ ಪ್ರಚಾರ ಮಾಡುತ್ತಿದ್ದ ಆರೋಪದ ಮೇಲೆ ಜೈಪುರದಲ್ಲಿ ಕಲಬುರಗಿ ಮೂಲದ ಮೊಹಮದ್ ಸಿರಾಜುದ್ದೀನ್ ಎಂಬುವವರನ್ನು ಬಂಧಿಸಲಾಗಿದೆ. ಭಾರತದಲ್ಲಿಯೂ ಐಎಸ್‌ಐಎಸ್ ಉಗ್ರ ಸಂಘಟನೆಗೆ ಬೆಂಬಲವಿದೆ ಎನ್ನುವುದಕ್ಕೆ ಇದೊಂದು ಚಿಕ್ಕ ಸುಳಿವು.

ಗುರುವಾರ ರಾತ್ರಿ ವಿಶೇಷ ಕಾರ್ಯಪಡೆ (ಎಸ್‌ಒಜಿ) ಮತ್ತು ರಾಜಸ್ಥಾನ ಭಯೋತ್ಪಾದಕ ನಿಗ್ರಹ ಪಡೆ (ಎಟಿಎಸ್) ಜಂಟಿ ಕಾರ್ಯಾಚರಣೆ ನಡೆಸಿ ಸಿರಾಜುದ್ದೀನ್ ಅವರನ್ನು ಬಂಧಿಸಿದ್ದು, ಸದ್ಯ, ಜೈಪುರದಲ್ಲಿಯೇ ಅವರ ವಿಚಾರಣೆ ಮುಂದುವರೆದಿದೆ. [ISIS ಪರ ಪ್ರಚಾರ : ಐಒಸಿ ಮ್ಯಾನೇಜರ್ ಬಂಧನ]

jaipur

ಕರ್ನಾಟಕದ ಕಲಬುರಗಿ ಮೂಲದ ಸಿರಾಜುದ್ದೀನ್ ಜೈಪುರದಲ್ಲಿ ಭಾರತೀಯ ತೈಲ ನಿಗಮದ (ಐಒಸಿ)ಯಲ್ಲಿ ಮಾರ್ಕೆಟಿಂಗ್ ವಿಭಾಗದ ಮ್ಯಾನೇಜರ್‌ ಆಗಿ ಕೆಲಸ ಮಾಡುತ್ತಿದ್ದರು. ಐಎಸ್‌ಐಎಸ್ ಉಗ್ರ ಸಂಘಟನೆ ಸೇರುವಂತೆ ಯುವಕರನ್ನು ಪ್ರೇರೆಪಿಸುತ್ತಿದ್ದರು ಎಂಬ ಆರೋಪ ಅವರ ಮೇಲಿದೆ. [ಬಿಜಾಪುರದ ಅಬ್ದುಲ್ ISIS ಸೇರಿಲ್ಲ, ಸೌದಿಯಲ್ಲಿದ್ದಾನೆ]

ಕರ್ನಾಟಕ ಪೊಲೀಸರಿಂದಲೂ ವಿಚಾರಣೆ? : ಸಿರಾಜುದ್ದೀನ್ ಕಲಬುರಗಿ ಮೂಲದವರಾಗಿದ್ದು, ಕರ್ನಾಟಕದ ಪೊಲೀಸರು ಅವರ ವಿಚಾರಣೆ ನಡೆಸುವ ಸಾಧ್ಯತೆ ಇದೆ. ಕರ್ನಾಟಕದ ಪೊಲೀಸರು ರಾಜಸ್ಥಾನದ ಎಟಿಎಸ್ ಜೊತೆ ಸಂಪರ್ಕದಲ್ಲಿದ್ದು, ಅವರು ಮಾಹಿತಿ ಕೇಳಿದರೆ ಕಳುಹಿಸಿಕೊಡಲಿದ್ದಾರೆ.

ಸಿರಾಜುದ್ದೀನ್ ಸಿಕ್ಕಿದ್ದು ಹೇಗೆ? : ಸಿರಾಜುದ್ದೀನ್ ಬಂಧನದ ಕುರಿತು ರಾಜಸ್ಥಾನ ಭಯೋತ್ಪಾದಕ ನಿಗ್ರಹ ಪಡೆ ಹೆಚ್ಚುವರಿ ಡಿಜಿಪಿ ಅಲೋಕ್ ತ್ರಿಪಾಠಿ ಒನ್ ಇಂಡಿಯಾ ಜೊತೆ ಮಾತನಾಡಿದ್ದು, 'ಸಿರಾಜುದ್ದೀನ್ ಅವರ ಸಾಮಾಜಿಕ ಜಾಲ ತಾಣಗಳ ಮಾಹಿತಿಯನ್ನು ಸಂಗ್ರಹಣೆ ಮಾಡಿದ ನಂತರ ಅವರನ್ನು ಬಂಧಿಸಲಾಗಿದೆ' ಎಂದು ಹೇಳಿದ್ದಾರೆ.

'ಐಎಸ್‌ಐಎಸ್ ಸೇರುವಂತೆ ವಾಟ್ಸಪ್, ಫೇಸ್‌ಬುಕ್ ಮೂಲಕ ಸಿರಾಜುದ್ದೀನ್ ಪ್ರಚಾರ ಮಾಡುತ್ತಿದ್ದರು. ಉಗ್ರ ಸಂಘಟನೆ ಕುರಿತು ಫೋಟೋ, ವಿಡಿಯೋಗಳನ್ನು ಹಾಕುತ್ತಿದ್ದರು. ದೇಶದ ವಿವಿಧ ಭಾಗಗಳಿಂದ ಹಲವು ಯುವಕರನ್ನು ಅವರು ಸಂಘಟನೆಗೆ ಸೇರಿಸಿದ್ದಾರೆ' ಎಂದು ತ್ರಿಪಾಠಿ ವಿವರಣೆ ನೀಡಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+