ಐಸಿಸ್ ಸಂಚು ಪ್ರಕರಣ: ಶಿವಮೊಗ್ಗದಲ್ಲಿ ಮತ್ತಿಬ್ಬರ ಬಂಧನ
ಶಿವಮೊಗ್ಗ, ಜನವರಿ 11: ಶಿವಮೊಗ್ಗದ ಐಸಿಸ್ ಸಂಚು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಭಯೋತ್ಪಾದಕರನ್ನು ಬಂಧಿಸಿರುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಬುಧವಾರ ತಿಳಿಸಿದೆ.
ಭಾರತದಲ್ಲಿ ಇಸ್ಲಾಮಿಕ್ ಸ್ಟೇಟ್ (ಐಎಸ್) ನ ಮತ್ತಷ್ಟು ಭಯೋತ್ಪಾದಕ ಚಟುವಟಿಕೆಗಳಿಗೆ ಆರೋಪಿಗಳು ರೂಪಿಸಿದ ಸಂಚಿಗೆ ಸಂಬಂಧಿಸಿದಂತೆ ಮಜಿನ್ ಅಬ್ದುಲ್ ರಹಮಾನ್ ಮತ್ತು ನದೀಮ್ ಅಹ್ಮದ್ ಕೆಎ ಎನ್ನಲಾದ ಇಬ್ಬರು ಕಾರ್ಯಕರ್ತರನ್ನು ಬಂಧಿಸಲಾಗಿದೆ. ಪ್ರಕರಣದಲ್ಲಿ ಇತರ ನಾಲ್ವರು ಆರೋಪಿಗಳನ್ನು ಈ ಹಿಂದೆ ಬಂಧಿಸಲಾಗಿತ್ತು.
ಈ ಪ್ರಕರಣವು ಕಳೆದ ವರ್ಷ ಸೆಪ್ಟೆಂಬರ್ 19ರಂದು ಕರ್ನಾಟಕದ ಶಿವಮೊಗ್ಗ ಜಿಲ್ಲೆಯ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು ಮತ್ತು ಕಳೆದ ವರ್ಷ ನವೆಂಬರ್ 4ರಂದು ಎನ್ಐಎ ಮತ್ತೆ ದಾಖಲಿಸಿತ್ತು. ಆರೋಪಿ ಮಾಜ್ ಮುನೀರ್ ಎಂಬಾತ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ನಿವಾಸಿ ಮಝಿನ್ ಎಂಬಾತನನ್ನು ತಂಡಕ್ಕೆ ಖುದ್ದಾಗಿ ಸೇರಿಸಿ ನೇಮಕಾತಿ ಮಾಡಿಕೊಂಡಿದ್ದ ಎಂದು ಎನ್ಐಎ ತನಿಖೆಯಿಂದ ತಿಳಿದುಬಂದಿದೆ.

ಆದರೆ, ಮತ್ತೋರ್ವ ಆರೋಪಿ ಸೈಯದ್ ಯಾಸಿನ್ ಕರ್ನಾಟಕದ ದಾವಣಗೆರೆ ಮೂಲದ ನದೀಮ್ ನನ್ನು ಕೆಲಸಕ್ಕೆ ಸೇರಿಸಿಕೊಂಡ. ಭಾರತದಲ್ಲಿ ಇಸ್ಲಾಮಿಕ್ ಸ್ಟೇಟ್ನ ಭಯೋತ್ಪಾದಕ ಚಟುವಟಿಕೆಗಳನ್ನು ಹೆಚ್ಚಿಸಲು ಇಬ್ಬರನ್ನೂ ನೇಮಕ ಮಾಡಿಕೊಳ್ಳಲಾಗಿದೆ ಎಂದು ಎನ್ಐಎ ಹೇಳಿಕೆಯಲ್ಲಿ ತಿಳಿಸಿದೆ. ಆರೋಪಿಗಳು ಇಸ್ಲಾಮಿಕ್ ಸ್ಟೇಟ್ನ ಚಟುವಟಿಕೆಗಳನ್ನು ಮುಂದುವರಿಸಲು ದೊಡ್ಡ ಪಿತೂರಿಯ ಭಾಗವಾಗಿ ವಿಧ್ವಂಸಕ ಮತ್ತು ಸ್ಪೋಟದಂತಹ ಕೃತ್ಯಗಳನ್ನು ಮಾಡಿದ್ದಾರೆ ಎಂದು ಭಯೋತ್ಪಾದನಾ ವಿರೋಧಿ ತನಿಖಾ ಸಂಸ್ಥೆ ಎನ್ಎಐ ಹೇಳಿದೆ.
ಈ ಮಧ್ಯೆ ಮಂಗಳೂರು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಕರ್ನಾಟಕದ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಶೋಧ ನಡೆಸಿದೆ. ನವೆಂಬರ್ 19 ರಂದು ಮಂಗಳೂರಿನಲ್ಲಿ ಆಟೋರಿಕ್ಷಾದಲ್ಲಿ ಪ್ರೆಶರ್ ಕುಕ್ಕರ್ ಸ್ಫೋಟಿಸಿದ ಪ್ರಮುಖ ಆರೋಪಿ ಮೊಹಮ್ಮದ್ ಶಾರಿಕ್ ಸೇರಿದಂತೆ ಶಂಕಿತ ಭಯೋತ್ಪಾದಕರ ಮನೆಗಳಲ್ಲಿ ಶೋಧ ನಡೆಸಲಾಗುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಬುಧವಾರ ತಿಳಿಸಿದ್ದಾರೆ.

ತೀರ್ಥಹಳ್ಳಿ (ಶಿವಮೊಗ್ಗ)ದಲ್ಲಿ ಶಂಕಿತ ಭಯೋತ್ಪಾದಕರಾದ ಶಾರಿಕ್, ಮಜ್ ಮುನೀರ್ ಮತ್ತು ಮತೀನ್ ಅವರ ಮನೆಗಳು ಇರುವ ಪ್ರದೇಶದಲ್ಲಿ ಇಡಿ ಅಧಿಕಾರಿಗಳು ಇದ್ದಾರೆ. ಅವರ ಮನೆಗಳನ್ನು ಶೋಧಿಸಲಾಗುತ್ತಿದೆ. ಅಕ್ಕಪಕ್ಕದ ಮನೆಗಳಿಂದಲೂ ಅಧಿಕಾರಿಗಳು ಮಾಹಿತಿ ಸಂಗ್ರಹಿಸುತ್ತಿದ್ದಾರೆ ಎಂದು ಜ್ಞಾನೇಂದ್ರ ತಿಳಿಸಿದರು.
ಕಳೆದ ವರ್ಷ ನವೆಂಬರ್ 19ರಂದು ಚಲಿಸುತ್ತಿದ್ದ ಆಟೋ ರಿಕ್ಷಾವೊಂದು ಪ್ರೆಶರ್ ಕುಕ್ಕರ್ನಲ್ಲಿ ಬಾಂಬ್ ಸ್ಫೋಟಗೊಂಡಿದ್ದು, ಇದು ಕರಾವಳಿ ಪ್ರದೇಶದಲ್ಲಿ ಮತ್ತು ರಾಜ್ಯದಲ್ಲಿ ಕೋಮು ಬೆಂಕಿಯನ್ನು ಉತ್ತೇಜಿಸುವ ಉದ್ದೇಶದಿಂದ ಭಯೋತ್ಪಾದನೆಯ ಸಂಚು ಬಿಚ್ಚಿಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.












Click it and Unblock the Notifications