ಕರ್ನಾಟಕ- ಕೇರಳ ಗಡಿಯಲ್ಲಿ ಚಳಿ ಕಾಯಿಸುತ್ತಿರುವ ಐಎಸ್ಐಎಸ್
ಬೆಂಗಳೂರು, ಆಗಸ್ಟ್ 13: ಧರ್ಮದ ಹೆಸರಿನಲ್ಲಿ ಮುಗ್ಧ ಮುಸ್ಲಿಂ ಯುವಕ, ಯುವತಿಯರನ್ನು ಭಯೋತ್ಪಾದನೆಯತ್ತ ಸೆಳೆಯುತ್ತಿರುವ ಐಎಸ್ಐಎಸ್ ಉಗ್ರಸಂಘಟನೆ ಈಗ ಕರ್ನಾಟಕ-ಕೇರಳ ಗಡಿಯಲ್ಲಿ ಚಳಿ ಕಾಯಿಸುತ್ತಿದೆ ಎಂಬ ಆಘಾತಕಾರಿ ಸುದ್ದಿಯನ್ನು ಗುಪ್ತಚರ ಇಲಾಖೆ ಅಧಿಕಾರಿಗಳು ಒನ್ ಇಂಡಿಯಾಕ್ಕೆ ತಿಳಿಸಿದ್ದಾರೆ.
ಕರ್ನಾಟಕ ಹಾಗೂ ಕೇರಳ ಗಡಿ ಭಾಗವನ್ನು ತೀವ್ರವಾಗಿ ನಿಗಾವಹಿಸಿ ಗಮನಿಸಲಾಗುತ್ತಿದ್ದು, ಉಗ್ರರ ಚಟುವಟಿಕೆಗಳಿಗೆ ಇಂಬು ನೀಡುವಂಥ ಚಟುವಟಿಕೆಗಳ ದಾಖಲೆ ಪಡೆದುಕೊಳ್ಳಲಾಗುತ್ತಿದೆ. ಕಾಸರಗೋಡಿನಿಂದ ಅನೇಕ ಮಂದಿ ನಾಪತ್ತೆಯಾಗಿರುವುದು ಗುಪ್ತಚರ ಇಲಾಖೆಯ ಅಧ್ಯಯನ ಪ್ರಮುಖ ವಿಷಯವಾಗಿದೆ.

ಕಾರವಾರ, ಮಂಗಳೂರಿಗೂ ಈ ನಾಪತ್ತೆ ಪ್ರಕರಣ ಹಬ್ಬುವ ಸಾಧ್ಯತೆಯಿದೆ. ಹೀಗಾಗಿ ಹೆಚ್ಚಿನ ನಿಗಾವಹಿಸುವಂತೆ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಕರ್ನಾಟಕದ ಗೃಹ ಸಚಿವ ಜಿ ಪರಮೇಶ್ವರ ಅವರು ಕೂಡಾ ಈ ಬಗ್ಗೆ ಮಂಗಳೂರು ಪೊಲೀಸರಿಗೆ ನಿರ್ದೇಶನ ನೀಡಿದ್ದಾರೆ.
ಐಎಸ್ಐಎಸ್ ವಿಸ್ತರಣಾ ಜಾಲ ಈಗ ಕೇರಳ ದಾಟಿ ಕರ್ನಾಟಕಕ್ಕೆ ಕಾಲಿಡುವ ಎಲ್ಲಾ ಲಕ್ಷಣಗಳು ಕಂಡು ಬಂದಿದೆ. ಹಾಗಾಗಿ, ಕೇರಳ ಗಡಿಯಲ್ಲಿರುವ ಕರ್ನಾಟಕದ ಊರುಗಳಲ್ಲಿ ಹೆಚ್ಚಿನ ತಪಾಸಣೆ, ಭದ್ರತೆಗೆ ಅದ್ಯತೆ ನೀಡಲಾಗುತ್ತಿದೆ. ಕೇರಳ ಮಾದರಿಯಲ್ಲೇ ಕರ್ನಾಟಕದಲ್ಲೂ ವಿಷ ಬೀಜ ಬಿತ್ತಲು ಇರಾಕಿ ಉಗ್ರ ಸಂಘಟನೆ ಹೊಂಚು ಹಾಕುತ್ತಿದೆ ಎಂದು ಅಧಿಕಾರಿಯೊಬ್ಬರು ಒನ್ ಇಂಡಿಯಾಗೆ ಹೇಳಿದರು.
-
ಮಾರ್ಚ್ 15ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
KAS ಅಭ್ಯರ್ಥಿಗಳಿಗೆ ಬಿಗ್ ಶಾಕ್ ನೀಡಿದ KPSC: 384 ಗೆಜೆಟೆಡ್ ಪ್ರೊಬೇಷನರ್ಸ್ ಸಂದರ್ಶನ ಮುಂದೂಡಿಕೆ -
ಕೇರಳ ಸೇರಿ 5 ರಾಜ್ಯಗಳ ವಿಧಾನಸಭಾ ಚುನಾವಣೆ ದಿನಾಂಕ ಪ್ರಕಟ: ಏಪ್ರಿಲ್ 9 ರಿಂದ ಮತದಾನ ಆರಂಭ , ಮೇ 4ಕ್ಕೆ ಫಲಿತಾಂಶ -
ಇಂದು ಸಂಜೆ 4 ಗಂಟೆಗೆ 5 ರಾಜ್ಯಗಳ ವಿಧಾನಸಭಾ ಚುನಾವಣಾ ವೇಳಾಪಟ್ಟಿ ಪ್ರಕಟಿಸಲು ಚುನಾವಣಾ ಆಯೋಗ ಸಜ್ಜು -
ರಾಜ್ಯದಲ್ಲಿ 4,824 ಕೋಟಿ ರೂ. ಕೈಗಾರಿಕಾ ಹೂಡಿಕೆಗೆ ಸರ್ಕಾರ ಅಸ್ತು; 14,525 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ -
ಮಾರ್ಚ್ 14ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ











Click it and Unblock the Notifications