Get Updates
Get notified of breaking news, exclusive insights, and must-see stories!

ಕರ್ನಾಟಕ- ಕೇರಳ ಗಡಿಯಲ್ಲಿ ಚಳಿ ಕಾಯಿಸುತ್ತಿರುವ ಐಎಸ್ಐಎಸ್

ಬೆಂಗಳೂರು, ಆಗಸ್ಟ್ 13: ಧರ್ಮದ ಹೆಸರಿನಲ್ಲಿ ಮುಗ್ಧ ಮುಸ್ಲಿಂ ಯುವಕ, ಯುವತಿಯರನ್ನು ಭಯೋತ್ಪಾದನೆಯತ್ತ ಸೆಳೆಯುತ್ತಿರುವ ಐಎಸ್ಐಎಸ್ ಉಗ್ರಸಂಘಟನೆ ಈಗ ಕರ್ನಾಟಕ-ಕೇರಳ ಗಡಿಯಲ್ಲಿ ಚಳಿ ಕಾಯಿಸುತ್ತಿದೆ ಎಂಬ ಆಘಾತಕಾರಿ ಸುದ್ದಿಯನ್ನು ಗುಪ್ತಚರ ಇಲಾಖೆ ಅಧಿಕಾರಿಗಳು ಒನ್ ಇಂಡಿಯಾಕ್ಕೆ ತಿಳಿಸಿದ್ದಾರೆ.

ಕರ್ನಾಟಕ ಹಾಗೂ ಕೇರಳ ಗಡಿ ಭಾಗವನ್ನು ತೀವ್ರವಾಗಿ ನಿಗಾವಹಿಸಿ ಗಮನಿಸಲಾಗುತ್ತಿದ್ದು, ಉಗ್ರರ ಚಟುವಟಿಕೆಗಳಿಗೆ ಇಂಬು ನೀಡುವಂಥ ಚಟುವಟಿಕೆಗಳ ದಾಖಲೆ ಪಡೆದುಕೊಳ್ಳಲಾಗುತ್ತಿದೆ. ಕಾಸರಗೋಡಿನಿಂದ ಅನೇಕ ಮಂದಿ ನಾಪತ್ತೆಯಾಗಿರುವುದು ಗುಪ್ತಚರ ಇಲಾಖೆಯ ಅಧ್ಯಯನ ಪ್ರಮುಖ ವಿಷಯವಾಗಿದೆ.

ISIS module from Kerala could spill into Karnataka, warns IB

ಕಾರವಾರ, ಮಂಗಳೂರಿಗೂ ಈ ನಾಪತ್ತೆ ಪ್ರಕರಣ ಹಬ್ಬುವ ಸಾಧ್ಯತೆಯಿದೆ. ಹೀಗಾಗಿ ಹೆಚ್ಚಿನ ನಿಗಾವಹಿಸುವಂತೆ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಕರ್ನಾಟಕದ ಗೃಹ ಸಚಿವ ಜಿ ಪರಮೇಶ್ವರ ಅವರು ಕೂಡಾ ಈ ಬಗ್ಗೆ ಮಂಗಳೂರು ಪೊಲೀಸರಿಗೆ ನಿರ್ದೇಶನ ನೀಡಿದ್ದಾರೆ.

ಐಎಸ್ಐಎಸ್ ವಿಸ್ತರಣಾ ಜಾಲ ಈಗ ಕೇರಳ ದಾಟಿ ಕರ್ನಾಟಕಕ್ಕೆ ಕಾಲಿಡುವ ಎಲ್ಲಾ ಲಕ್ಷಣಗಳು ಕಂಡು ಬಂದಿದೆ. ಹಾಗಾಗಿ, ಕೇರಳ ಗಡಿಯಲ್ಲಿರುವ ಕರ್ನಾಟಕದ ಊರುಗಳಲ್ಲಿ ಹೆಚ್ಚಿನ ತಪಾಸಣೆ, ಭದ್ರತೆಗೆ ಅದ್ಯತೆ ನೀಡಲಾಗುತ್ತಿದೆ. ಕೇರಳ ಮಾದರಿಯಲ್ಲೇ ಕರ್ನಾಟಕದಲ್ಲೂ ವಿಷ ಬೀಜ ಬಿತ್ತಲು ಇರಾಕಿ ಉಗ್ರ ಸಂಘಟನೆ ಹೊಂಚು ಹಾಕುತ್ತಿದೆ ಎಂದು ಅಧಿಕಾರಿಯೊಬ್ಬರು ಒನ್ ಇಂಡಿಯಾಗೆ ಹೇಳಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+