ಐಎಸ್ಐಎಸ್ ಸೇರಿದ್ದ ಕರ್ನಾಟಕದ ಮೂವರ ಸಾವು?
ಬೆಂಗಳೂರು, ಜೂ. 10 : ಜಗತ್ತಿನಲ್ಲಿ ಉಗ್ರರ ಜಾಲ ಹರಡಲು ಪ್ರಯತ್ನ ನಡೆಸುತ್ತಿರುವ ಐಎಸ್ಐಎಸ್ ಸಂಘಟನೆ ಸೇರಿದ್ದ ಕರ್ನಾಟಕದ ಮೂವರು ಯುವಕರು ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ. ಸಿರಿಯಾ ಅಥವ ಇರಾಕ್ನಲ್ಲಿ ಇವರು ಮೃತಪಟ್ಟಿರಬಹುದು ಎಂದು ಗುಪ್ತಚರ ಇಲಾಖೆ ಶಂಕಿಸಿದೆ.
ಫಯಾಜ್ ಮೊಹಮದ್, ಅಬ್ದುಲ್ ಖುದ್ದೂಸ್ ಮತ್ತು ಉಮರ್ ಸುಭಾನ್ ಎಂಬ ರಾಜ್ಯದ ಮೂವರು ಸಿರಿಯಾಕ್ಕೆ ಪ್ರವೇಶಿಸಿದ್ದು, ಅವರು ಅಲ್ಲಿ ಮೃತಪಟ್ಟಿದ್ದಾರೆ ಎಂದು ಗುಪ್ತಚರ ಇಲಾಖೆ ಶಂಕೆ ವ್ಯಕ್ತಪಡಿಸಿದೆ. ಇವರಲ್ಲಿ ಇಬ್ಬರು ಬೆಂಗಳೂರಿನವರಾದರೆ,ಇನ್ನೊಬ್ಬರು ವಿಜಯಪುರದವರು ಎಂಬುದು ಸದ್ಯದ ಮಾಹಿತಿ. [ಮೆಹದಿ ವಿರುದ್ಧ 36,986 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ]

ಈ ಮೂವರು 2013ರಿಂದ ನಾಪತ್ತೆಯಾಗಿದ್ದು ಸಿರಿಯಾ ಅಥವ ಇರಾಕ್ ತಲುಪಿರುವ ಸಾಧ್ಯತೆ ಇದೆ. ನೇರವಾಗಿ ಸಿರಿಯಾಕ್ಕೆ ಹೋಗಲು ಸಾಧ್ಯವಿಲ್ಲ. ಆದ್ದರಿಂದ ಯಮನ್ ಅಥವ ಸೌದಿ ಅರೇಬಿಯಾದ ಮೂಲಕ ಸಿರಿಯಾ ತಲುಪಿರಬಹುದು ಎಂದು ವಿಶ್ಲೇಷಿಸಲಾಗುತ್ತಿದೆ. [ಹುಷಾರ್... ಬೆಂಗಳೂರು, ಕೊಲ್ಕತ್ತಾ ಉಗ್ರರ ತಾಣ]
ಕುಟುಂಬಕ್ಕೆ ಮಾಹಿತಿ ನೀಡಿಲ್ಲ : ಬೆಂಗಳೂರು ಪೊಲೀಸರು ಹೇಳುವ ಪ್ರಕಾರ ಯುವಕರ ಮರಣದ ಬಗ್ಗೆ ಕುಟುಂಬದವರಿಗೆ ಮಾಹಿತಿ ನೀಡಿಲ್ಲ. ಯುವಕರು ಮೃತಪಟ್ಟಿರುವ ಬಗ್ಗೆ ಖಚಿತವಾದ ಮಾಹಿತಿ ಲಭ್ಯವಾಗಿಲ್ಲ. ಆದ್ದರಿಂದ ಕುಟುಂಬದವರಿಗೆ ಮಾಹಿತಿ ನೀಡಿಲ್ಲ ಎಂದು ಪೊಲೀಸರು ಹೇಳಿದ್ದಾರೆ.
ನವದೆಹಲಿಯ ಅಧಿಕಾರಿಗಳಿಂದ ಹೆಚ್ಚಿನ ಮಾಹಿತಿ ಕೇಳಿದ್ದೇವೆ. ಮೂವರು ಯುವಕರು ನಾಪತ್ತೆಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಆದರೆ, ಅವರು ಮೃತಪಟ್ಟಿದ್ದಾರೆಯೇ? ಅಥವ ಜೀವಂತವಾಗಿದ್ದಾರೆಯೇ? ಎಂಬ ಮಾಹಿತಿ ಇನ್ನೂ ಲಭ್ಯವಾಗಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.
-
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ?












Click it and Unblock the Notifications